MM Hills: ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ರಥೋತ್ಸವ: ಲಕ್ಷಾಂತರ ಮಂದಿ ಭಾಗಿ!
ಚಾಮರಾಜನಗರ ನವೆಂಬರ್ 2: ನಾಡಿನ ಪುಣ್ಯಕ್ಷೇತ್ರಗಳಲ್ಲಿ ದೀಪಾವಳಿಯ ಪೂಜೆ, ಉತ್ಸವ, ಜಾತ್ರೆ ಇತರೆ ಧಾರ್ಮಿಕ ಕಾರ್ಯಗಳು ಅತ್ಯಂತ ಸಡಗರದಿಂದ ನಡೆಯುತ್ತಿವೆ. ಚಾಮರಾಜನಗರದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲೂ ಇಂದು ವಿಜೃಂಭಣೆಯಿಂದ ದೀಪಾವಳಿ ರಥೋತ್ಸವ ಜರುಗಿತು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ರಥೋತ್ಸವಕ್ಕೆ ಚಾಲನೆ ನೀಡಲಾಗಿದೆ. ಶನಿವಾರ ಬೆಳಗ್ಗೆ 7.15 ರಿಂದ 9ರ ವರೆಗೆ ಸಲ್ಲುವ ಶುಭ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಗಿದೆ. ಈ ವೇಳೆ ಸಾಲೂರು ಮಠದ ಶ್ರೀ, ಪ್ರಾಧಿಕಾರದ ಕಾರ್ಯದರ್ಶಿ ರಘು, ಶಾಸಕ ಎಂ.ಆರ್. ಮಂಜುನಾಥ್ ಭಾಗವಹಿಸಿದ್ದರು. ಈ ಬಾರಿ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಭಕ್ತ ಸಾಗರವೇ ಹರಿದು ಬಂದಿದೆ. ತಮಿಳುನಾಡಿನಿಂದಲೂ ಭಕ್ತಸಮೂಹ ಅತ್ಯುತ್ಸಾಹದಿಂದ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿರುವುದು ಕಂಡು ಬಂದಿದೆ.

ಪಾದಯಾತ್ರೆ, ವಿಶೇಷ ಬಸ್ ಗಳ ಮೂಲಕ ಇಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿ ಪುನೀತರಾದರು. ರಥೋತ್ಸವಕ್ಕಂತಲೇ 3.5 ಲಕ್ಷಕ್ಕೂ ಅಧಿಕ ಲಾಡುಗಳನ್ನು ತಯಾರಿಸಿಡಲಾಗಿತ್ತು. ಭಕ್ತರು ಇಂದು ಮಾದಪ್ಪನ ದರ್ಶನ ಪಡೆದು ಸಂತೋಷಗೊಂಡರು.
ಮಲೆ ಮಹದೇಶ್ವರ ಬೆಟ್ಟ
ಮಲೆ ಮಹದೇಶ್ವರ ಬೆಟ್ಟಗಳು ದಟ್ಟವಾದ ಕಾಡಿನಿಂದ ಆವೃತವಾಗಿವೆ. ಈ ಪ್ರಾಚೀನ ಮತ್ತು ಪವಿತ್ರ ದೇವಾಲಯ ಅತ್ಯಂತ ಜನಪ್ರಿಯ ಶೈವ ಯಾತ್ರಾ ಕೇಂದ್ರವಾಗಿದೆ. ಮೈಸೂರಿನಿಂದ 135 ಕಿ.ಮೀ ದೂರದಲ್ಲಿದೆ. ಹೊಗೆನಕಲ್ನಿಂದ 89 ಕಿ.ಮೀ, ಕೊಳ್ಳೆಗಾಲದಿಂದ 72 ಕಿ.ಮೀ ದೂರದಲ್ಲಿರುವ ಮಲೆ ಮಹದೇಶ್ವರ ಬೆಟ್ಟವನ್ನು ಎಂಎಂ ಹಿಲ್ಸ್ ಎಂದೂ ಕರೆಯುವುದುಂಟು.
ಇದು ಪೂರ್ವ ಘಟ್ಟದ 77 ಬೆಟ್ಟಗಳಿಂದ ಆವೃತವಾಗಿದ್ದು 7 ಬೆಟ್ಟಗಳ ನಡುವೆ ಇದೆ. ಈ ದೇವಾಲಯ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಯಾತ್ರಿಕರನ್ನು ಸೆಳೆಯುತ್ತದೆ. ಜಾತ್ರೆ ಹಾಗೂ ರಥೋತ್ಸವ ಸಮಯದಲ್ಲಿ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸಿ ಮಾದಪ್ಪನ ದರ್ಶನ ಪಡೆದು ತೆರಳುತ್ತಾರೆ. ಪ್ರತೀ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಸ್ಥಳದಲ್ಲಿ ಭವ್ಯ ಸಂಭ್ರಮವನ್ನು ಕಾಣಬಹುದು.

ಕಾವೇರಿ ಮತ್ತು ಪಾಲಾರ್ ನದಿಗಳಿಂದ ಆವೃತವಾದ ದಟ್ಟದ ಕಾಡಿನಲ್ಲಿ ಈ ಸ್ಥಳವಿದ್ದು ಸುಂದರವಾದ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಕಾಡಿನಲ್ಲಿ ವಿವಿಧ ಪ್ರಾಣಿ, ಪಕ್ಷಿಗಳು ಮತ್ತು ಸರೀಸೃಪಗಳು ವಾಸಿಸುತ್ತವೆ. ಅಲ್ಲದೆ ಎಂಎಂ ಹಿಲ್ಸ್ ಚಾರಣಕ್ಕೂ ಪ್ರಮುಖ ಸ್ಥಳವಾಗಿದೆ.
ಅವುಗಳೆಂದರೆ ಒಂದು ನಾಗಮಲೆ ಇನ್ನೊಂದು ಪಾಲಾರ್. ನಾಗಮಲೆಯಲ್ಲಿ ಶಿವನಿಗೆ ಅರ್ಪಿತವಾದ ದೇವಾಲಯವಿದ್ದು ಚಾರಣ ಮಾಡುವವರು ಬೆಟ್ಟದ ತುದಿಯಲ್ಲಿರುವ ಶಿವನ ದೇವಸ್ಥಾನಕ್ಕೆ ತೆರಳು ಪೂಜೆ ಸಲ್ಲಿಸುತ್ತಾರೆ. ನಾಗಮಲೆ ಎಂಎಂ ಹಿಲ್ಸ್ನಿಂದ ಏಳು ಕಿಮೀ ದೂರದಲ್ಲಿದೆ. ಇನ್ನೂ ಪಾಲಾರ್ ನಾಗಮಲೆಯಿಂದ ಎಂಟು ಕಿ.ಮೀ ಚಾರಣವಾಗಿದೆ. ಇಲ್ಲಿ ವಿಶ್ರಾಂತಿ ಮನೆಯಲ್ಲಿ ರಾತ್ರಿಯ ತಂಗುವಿಕೆಯೊಂದಿಗೆ ಎರಡು ದಿನಗಳ ಚಾರಣ ಮಾಡಲಾಗುತ್ತದೆ. ಚಾರಣದುದ್ದಕ್ಕೂ ಸುಂದರ ಅನುಭವ ಈ ಸ್ಥಳ ನೀಡುತ್ತದೆ.
ಅಕ್ಟೋಬರ್ನಿಂದ ಮಾರ್ಚ್ವರೆಗೆ ಎಂಎಂ ಹಿಲ್ಸ್ಗೆ ಭೇಟಿ ನೀಡಲು ಉತ್ತಮ ಸಮಯವಾಗಿದೆ. ಈ ದೇವಾಲಯದ ಮುಖ್ಯ ಹಬ್ಬ ಮಹಾಶಿವರಾತ್ರಿಯಾಗಿದೆ. ದೀಪಾವಳಿ ಹಬ್ಬದಲ್ಲಿ ಎಂಎಂ ಹಿಲ್ಸ್ನಲ್ಲಿ ಭವ್ಯ ಆಚರಣೆಯನ್ನು ಜನ ಸಾಗರೋಪಾದಿಯಲ್ಲಿ ಆಗಮಿಸಿ ಕಣ್ತುಂಬಿಕೊಳ್ಳುತ್ತಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications