ದೀಪಾವಳಿ ವಿಶೇಷ: ಕೆಎಸ್ಆರ್ಟಿಸಿ,ಬಿಎಂಟಿಸಿಯಿಂದ ವಿವಿಧೆಡೆ ಹೆಚ್ಚುವರಿ ಬಸ್ ಸಂಚಾರ, ವಿವರ
ಬೆಂಗಳೂರು, ನವೆಂಬರ್ 11: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದೀಪಾವಳಿ ಹಬ್ಬದ ವಿಶೇಷವಾಗಿ ಹೆಚ್ಚುವರಿ ಬಸ್ಗಳನ್ನು ಓಡಿಸಲಿದೆ.
ನವೆಂಬರ್ 10 ರಿಂದ ನವೆಂಬರ್ 12 ರ ನಡುವೆ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ಕೆಎಸ್ಆರ್ಟಿಸಿ 2,000 ಹೆಚ್ಚುವರಿ ಬಸ್ಗಳನ್ನು ಓಡಿಸುತ್ತಿದೆ. ಕೆಎಸ್ಆರ್ಟಿಸಿ ನವೆಂಬರ್ 14 ರಿಂದ 15 ರ ನಡುವೆ ವಿವಿಧ ಸ್ಥಳಗಳಿಂದ ಬೆಂಗಳೂರಿನ ಒಳಗೆ ಮತ್ತು ಅಂತರಾಜ್ಯ ಬಸ್ ಸೇವೆಗಳನ್ನು ಸಹ ನೀಡಿತ್ತದೆ.

ಶುಕ್ರವಾರ ರಾತ್ರಿ ಹಾಗೂ ಶನಿವಾರ ಬೆಂಗಳೂರಿನಿಂದ ಜನ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದ ವೇಳೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾಗಿತ್ತು. ಕೆಂಪೇಗೌಡ ಬಸ್ ನಿಲ್ದಾಣದಿಂದ ಬೀದರ್, ಯಾದಗಿರಿ, ಕೊಪ್ಪಳ, ಹುಬ್ಬಳ್ಳಿ, ಧಾರವಾಡ, ಶೃಂಗೇರಿ, ಕುಂದಾಪುರ, ಮಂಗಳೂರು, ಶಿವಮೊಗ್ಗ, ಹಾಸನ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಗಳನ್ನು ಓಡಿಸುತ್ತಿದೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ ಮತ್ತು ಕುಶಾಲನಗರಕ್ಕೆ ಹೆಚ್ಚುವರಿ ಬಸ್ಗಳು ಕಾರ್ಯನಿರ್ವಹಿಸುತ್ತಿವೆ.
ಹಬ್ಬದ ಸೀಸನ್ಗಾಗಿ ಬಿಎಂಟಿಸಿ ಹೆಚ್ಚುವರಿ 150 ಬಸ್ಗಳನ್ನು ನಿರ್ವಹಿಸುತ್ತದೆ. ಬಿಎಂಟಿಸಿ ಶುಕ್ರವಾರದಿಂದ ಭಾನುವಾರದವರೆಗೆ 150 ಹೆಚ್ಚುವರಿ ಬಸ್ಗಳನ್ನು ನಿರ್ವಹಿಸುತ್ತಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಬಸ್ಗಳು ಕಾರ್ಯನಿರ್ವಹಿಸುತ್ತಿವೆ.
ದೀಪಾವಳಿಗೆ ವಿಶೇಷ ರೈಲುಗಳು:
ಹೆಚ್ಚುವರಿ ಬಸ್ ಸೇವೆಗಳ ಹೊರತಾಗಿ, ನೈಋತ್ಯ ರೈಲ್ವೆ (SWR) ಮಂಗಳೂರು ಜಂಕ್ಷನ್ ಮತ್ತು ಮೈಸೂರು ನಡುವೆ ಬೆಂಗಳೂರು ನಗರದ ಮೂಲಕ ವಿಶೇಷ ರೈಲನ್ನು ಓಡಿಸುತ್ತಿದೆ. ರೈಲಿಗೆ ಮಂಡ್ಯ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕ ಪುತ್ತೂರು ಮತ್ತು ಬಂಟ್ವಾಳದಲ್ಲಿ ನಿಲುಗಡೆ ಇದೆ. ವರದಿಗಳ ಪ್ರಕಾರ, ದೀಪಾವಳಿ ಸಂದರ್ಭದಲ್ಲಿ ನಾಗರ್ಕೋಯಿಲ್, ರಾಜಸ್ಥಾನದ ಭಗತ್ ಕಿ ಕೋಠಿ ಮತ್ತು ಭುವನೇಶ್ವರದಿಂದ ಬೆಂಗಳೂರಿಗೆ ರೈಲುಗಳನ್ನು ನಿಗದಿಪಡಿಸಲಾಗಿದೆ.












Click it and Unblock the Notifications