ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರದಿಂದ ಪೊಲೀಸರಿಗೆ ದೀಪಾವಳಿಯ ಭರ್ಜರಿ ಉಡುಗೊರೆ

|
Google Oneindia Kannada News

Recommended Video

Yeddyurappa government give good news for Karnataka Police

ಬೆಂಗಳೂರು, ಅಕ್ಟೋಬರ್ 19: ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ವೇತನ ಶ್ರೇಣಿಯನ್ನು ರಾಘವೇಂದ್ರ ಔರಾದ್ಕರ್ ವರದಿಯಂತೆ ಸರ್ಕಾರವು ಜಾರಿ ಮಾಡಿದೆ.

ಪೊಲೀಸ್ ಹುತಾತ್ಮ ದಿನದ ಮುನ್ನಾ ದಿನ ಸರ್ಕಾರ ತಕ್ಷಣ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಜೊತೆಗೆ ಕಷ್ಟ ಪರಿಹಾರ ಭತ್ಯೆಯನ್ನು ಕೂಡ ಹೆಚ್ಚಿಸಲಾಗಿದೆ.

ಕರ್ನಾಟಕದ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ, ತುಟ್ಟಿಭತ್ಯೆ ಹೆಚ್ಚಳಕರ್ನಾಟಕದ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ, ತುಟ್ಟಿಭತ್ಯೆ ಹೆಚ್ಚಳ

2016ರ ಜೂನ್ 21ರಂದು ರಾಘವೇಂದ್ರ ಔರಾದ್ಕರ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ವರದಿಯನ್ನು ಅನುಷ್ಠಾನಗೊಳಿಸಲು ಸರ್ಕಾರ ನಿರ್ಧರಿಸಿದ್ದು 2019ರ ಆಗಸ್ಟ್ 1ರಿಂದ ಜಾರಿಗೆ ಬರುವಂತೆ ವೇತನವನ್ನು ಉನ್ನತೀಕರಗೊಳಿಸಲಾಗಿದೆ.

Deepawali Gift From The Government To The Police

ಸರ್ಕಾರ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯ ಮೇಲಿನ ಕಳಕಳಿಯಿಂದ ಈಗಾಗಲೇ ಪೊಲೀಸ್ ಇಲಾಖೆಯ ಎಲ್ಲಾ ಶ್ರೇಣಿಯ ಸಿಬ್ಬಂದಿಗೆ ಈಗಿರುವ ಕಷ್ಟ ಪರಿಹಾರ ಭತ್ಯೆಯ ಜೊತೆಗೆ ಹೆಚ್ಚುವರಿಯಾಗಿ 1 ಸಾವಿರ ರೂ. ಅನ್ನು ಮಂಜೂರು ಮಾಡಲಾಗಿದೆ.

ಇನ್ಮುಂದೆ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸಿದರೂ ಕ್ರಮಇನ್ಮುಂದೆ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸಿದರೂ ಕ್ರಮ

ಈ ಕಷ್ಟಪರಿಹಾರ ಭತ್ಯೆ ಹೆಚಚ್ಳದಿಂದ ಮಾಸಿಕವಾಗಿ 10.70 ಕೋಟಿ ಹಾಗೂ ವಾರ್ಷಿಕ 128.38 ಕೋಟಿ ಹೆಚ್ಚುವರಿಯಾಗಿ ಸರ್ಕಾರ ಖರ್ಚು ಭರಿಸಬೇಕಾಗುತ್ತದೆ.

Deepawali Gift From The Government To The Police

ಈ ವರದಿ ಜಾರಿಯಿಂದ ಹೊಸದಾಗಿ ಸೇರುವ ಪೊಲೀಸ್ ಪೇದೆಗಳಿಗೆ ಇರುವ ಮಾಸಿಕ ವೇತನ 30,427 ಸಾವಿರ ರೂ ಬದಲಿಗೆ 34,267 ರೂಪಾಯಿಗಳಾಗಿರುತ್ತದೆ.

English summary
The pay scale of the police officer and the staff has been issued by the government as by Raghavendra Auradkar Report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X