ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: 'ದೀಪಿಕಾ' ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ, ಇಲ್ಲಿದೆ ಮಾಹಿತಿ
ಬೆಂಗಳೂರು: ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಯೋಗದಲ್ಲಿ ಆರಂಭಿಸಲಾದ ಮಹತ್ವಾಕಾಂಕ್ಷೆಯ 'ದೀಪಿಕಾ ವಿದ್ಯಾರ್ಥಿವೇತನ' (Deepika Scholarship) ಯೋಜನೆಗೆ ರಾಜ್ಯಾದ್ಯಂತ ವಿದ್ಯಾರ್ಥಿನಿಯರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. 2025ರ ಸೆಪ್ಟೆಂಬರ್ನಲ್ಲಿ ಚಾಲನೆ ನೀಡಲಾದ ಈ ಯೋಜನೆಗೆ ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಎನ್. ಅವರು ತಿಳಿಸಿದ್ದಾರೆ.
ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ, 10 ಮತ್ತು 12ನೇ ತರಗತಿಯ ನಂತರ ಉನ್ನತ ಶಿಕ್ಷಣಕ್ಕೆ ಕಾಲಿಡುತ್ತಿರುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಇದೀಗ ಎಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೂ ಈ ಸೌಲಭ್ಯವನ್ನು ವಿಸ್ತರಿಸಲಾಗಿದ್ದು, ಜನವರಿ 1, 2026 ರಿಂದ ಆರಂಭವಾಗಿರುವ ಎರಡನೇ ಹಂತದ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಆಸಕ್ತ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜನವರಿ 31, 2026 ರವರೆಗೆ ವಿಸ್ತರಿಸಲಾಗಿದೆ.

ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ.ಗಳ ವಿದ್ಯಾರ್ಥಿವೇತನ ದೊರೆಯಲಿದೆ. ಅಂದರೆ, 4 ವರ್ಷದ ಪದವಿ ಕೋರ್ಸ್ ಮಾಡುವ ವಿದ್ಯಾರ್ಥಿನಿಗೆ ಒಟ್ಟು 1,20,000 ರೂ. ಮತ್ತು 2 ವರ್ಷದ ಡಿಪ್ಲೊಮಾ ವಿದ್ಯಾರ್ಥಿನಿಗೆ 60,000 ರೂ. ಆರ್ಥಿಕ ನೆರವು ಸಿಗಲಿದೆ. ರಾಜ್ಯದಲ್ಲಿ ಉನ್ನತ ಶಿಕ್ಷಣದ ಒಟ್ಟು ದಾಖಲಾತಿ ಅನುಪಾತವನ್ನು (ಜಿಇಆರ್) ಹೆಚ್ಚಿಸುವ ನಿಟ್ಟಿನಲ್ಲಿಯೂ ಈ ಯೋಜನೆ ಸಹಕಾರಿಯಾಗಲಿದೆ. 2021-22ರ ಎಐಎಸ್ಎಚ್ಇ ವರದಿಯ ಪ್ರಕಾರ ಕರ್ನಾಟಕದ ಜಿಇಆರ್ ಶೇ.36.2 ರಷ್ಟಿದ್ದು, ಇದನ್ನು ಸುಧಾರಿಸಲು 'ದೀಪಿಕಾ' ದಾರಿದೀಪವಾಗಲಿದೆ.
ಆರಂಭದಲ್ಲಿ 37,000 ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು, ಅರ್ಹ ವಿದ್ಯಾರ್ಥಿನಿಯರ ಸಂಖ್ಯೆ 40,000 ಮೀರಿದರೂ ಸರ್ಕಾರವೇ ಅವರ ಶಿಕ್ಷಣದ ವೆಚ್ಚವನ್ನು ಭರಿಸಲಿದೆ ಎಂದು ಭರವಸೆ ನೀಡಿದ್ದಾರೆ. ಆದರೆ ಇಲ್ಲೊಂದು ಪ್ರಮುಖ ಷರತ್ತಿದೆ. ಈ ವಿದ್ಯಾರ್ಥಿವೇತನ ಪಡೆಯಲು ವಿದ್ಯಾರ್ಥಿನಿಯರು ಯಾವುದೇ ಸೆಮಿಸ್ಟರ್ನಲ್ಲಿ 'ಬ್ಯಾಕ್ಲಾಗ್' (ವಿಷಯಗಳಲ್ಲಿ ಅನುತ್ತೀರ್ಣ) ಉಳಿಸಿಕೊಳ್ಳುವಂತಿಲ್ಲ. ಒಂದು ವೇಳೆ ಬ್ಯಾಕ್ಲಾಗ್ ಇದ್ದರೆ, ಅಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಬಂದಿರುವ ಅರ್ಜಿಗಳ ಪರಿಶೀಲನೆ ಕಾರ್ಯ ಭರದಿಂದ ಸಾಗಿದ್ದು, ಅರ್ಹ ವಿದ್ಯಾರ್ಥಿನಿಯರ ಪಟ್ಟಿಯನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು.
-
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications