ಕಾಲೇಜುಗಳ ಸಮಯ ಬದಲಾವಣೆ, ಇಲಾಖೆ ತೀರ್ಮಾನಕ್ಕೆ ಭಾರೀ ವಿರೋಧ
ಬೆಂಗಳೂರು, ಜುಲೈ 7: ಮಹಿಳಾ ಉಪನ್ಯಾಸಕರಿಗೆ ಸೀರೆ ಕಡ್ಡಾಯ ಮಾಡಿ ಆದೇಶ ಹೊರಡಿಸಿ ನಂತರ ಭಾರೀ ಟೀಕೆಗೆ ಗುರಿಯಾಗಿ ಆದೇಶ ಹಿಂಪಡೆದಿದ್ದ 'ಕಾಲೇಜು ಶಿಕ್ಷಣ ಇಲಾಖೆ' ಬುದ್ದಿ ಕಲಿತಂತೆ ಕಾಣಿಸುತ್ತಿಲ್ಲ. ಇದೀಗ ಪದವಿ ಕಾಲೇಜುಗಳ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದು ಭಾರೀ ವಿರೋಧಕ್ಕೆ ಕಾರಣವಾಗಿದೆ.
ಪ್ರಥಮ ದರ್ಜೆ ಸರಕಾರಿ ಪದವಿ ಕಾಲೇಜುಗಳ ಸಮಯ ಬದಲಾವಣೆ ಮಾಡಿರುವ ಸರಕಾರ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಸಮಯ ನಿಗದಿ ಮಾಡಿದೆ. ಈ ಹಿಂದೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದವು..

ಈ ಸಮಯ ಬದಲಾವಣೆಯ ಹೊರತಾಗಿಯೂ ವಿದ್ಯಾರ್ಥಿಗಳು ಬೆಳಿಗ್ಗೆ 10.30ರಿಂದ ಸಂಜೆ 5 ಗಂಟೆವರೆಗೆ ಗ್ರಂಥಾಲಯವನ್ನು ಉಪಯೋಗಪಡಿಸಿಕೊಳ್ಳಬಹುದು ಎಂದಿದೆ. ಕರ್ನಾಟಕದ 411 ಕಾಲೇಜುಗಳಿಗೆ ಈ ಹೊಸ ನಿಯಮ ಅನ್ವಯಿಸಲಿದೆ.
ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಗ್ರಂಥಾಲಯದಲ್ಲಿ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಕಳೆಯುವುದಕ್ಕೆ ಸಹಾಯಕವಾಗಲು ಈ ಬದಲಾವಣೆ ತಂದಿರುವುದಾಗಿ ಇಲಾಖೆ ಆಯುಕ್ತ ಅಜಯ್ ನಾಗಭೂಷಣ್ ಬುರುಡೆ ಬಿಟ್ಟಿದ್ದಾರೆ. ಗ್ರಾಮೀಣ ಭಾಗದ ಸಣ್ಣ ಅರಿವೂ ಅವರಿಗೆ ಇದ್ದಂತೆ ಕಾಣಿಸುತ್ತಿಲ್ಲ.
ಗ್ರಾಮೀಣ ಪ್ರದೇಶಗಳಿಂದ ವಿರೋಧ
ನಗರ ಪ್ರದೇಶಗಳಲ್ಲಿ ಈ ಹೊಸ ವೇಳಾಪಟ್ಟಿಯಿಂದ ವಿದ್ಯಾರ್ಥಿಗಳು ಬೇಗ ಹೊರಟು ತರಗತಿಗೆ ಬಂದರಷ್ಟೇ ಸಾಕು. ಮಾತ್ರವಲ್ಲ ವಿದ್ಯಾರ್ಥಿಗಳಿಗೆ ಟ್ರಾಫಿಕ್ ನ್ನು ಕೂಡಾ ತಪ್ಪಿಸಬಹುದು. ಇದು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಆದರೆ, "ಹೆಚ್ಚಿನ ಕಾಲೇಜುಗಳು ತಾಲೂಕು ಕೇಂದ್ರಗಳಲ್ಲಿ ಇರುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅಷ್ಟು ಬೇಗ ಕಾಲೇಜಿಗೆ ಬರುವುದು ಕಷ್ಟವಾಗುಗುತ್ತದೆ," ಎಂದು 'ದಿ ಹಿಂದೂ'ಗೆ ಕರ್ನಾಟಕ ಸರಕಾರಿ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷರಾದ ಎಚ್ ಪ್ರಕಾಶ ಪ್ರತಿಕ್ರಿಯೆ ನೀಡಿದ್ದು ಬಹಿರಂಗ ಅಪಸ್ವರ ಎತ್ತಿದ್ದಾರೆ.
ಇದಕ್ಕೆ ಹಲವು ವಿದ್ಯಾರ್ಥಿ ಸಂಘಟನೆಗಳೂ ಧ್ವನಿ ಗೂಡಿಸಿವೆ. ಏಕಾಏಕಿ ವಿದ್ಯಾರ್ಥಿಗಳು, ಅಧ್ಯಾಪಕರ ಜತೆ ಸಮಾಲೋಚನೆ ನಡೆಸದೆ ಈ ತೀರ್ಮಾನ ತೆಗೆದುಕೊಂಡಿರುವುದು ಸರಿಯಲ್ಲ ಎಂದಿರುವ ಕಾಲೇಜು ವಿದ್ಯಾರ್ಥಿ ಸಂಘಗಳು ಮತ್ತು ಅಧ್ಯಾಪಕರು ಸರಕಾರದ ಈ ಸುತ್ತೋಲೆ ಬಹಿಷ್ಕರಿಸಲು ನಿರ್ಧರಿಸವೆ. ಜತೆಗೆ ಪ್ರತಿಭಟನೆಗೂ ಮುಂದಾಗಿವೆ.
ಒಟ್ಟಾರೆ ಯಾಕೋ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರ ಸಮಯ ಸರಿ ಇದ್ದಂತೆ ಕಾಣಿಸುತ್ತಿಲ್ಲ.
-
ಕರ್ನಾಟಕದ 60 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: 324 ಗ್ರಾಮಗಳಿಗೆ ಟ್ಯಾಂಕರ್, ಬೋರ್ವೆಲ್ ವ್ಯವಸ್ಥೆ: ಪ್ರಿಯಾಂಕ್ ಖರ್ಗೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications