ರಾಜ್ಯಕ್ಕೆ ತೀವ್ರವಾಗಿ ಕಾಡಲಾರಂಭಿಸಿದ ಈ ಇಬ್ಬರು ದಿಗ್ಗಜರ ಚುನಾವಣಾ ಸೋಲು
ವಿರೋಧ ಪಕ್ಷಗಳು ಪ್ರಬಲವಾಗಿದ್ದರೆ, ಆಡಳಿತ ಪಕ್ಷದ ತಪ್ಪನ್ನು ಸಮರ್ಥವಾಗಿ ಎತ್ತಿ ತೋರಿಸಬಹುದು ಮತ್ತು ಅದರ ವಿರುದ್ದ ಬೀದಿಗಿಳಿಯಬಹುದು. ಬಹುಮತ ಅನ್ನೋದಿದ್ದರೆ ಏನು ಬೇಕಾದರೂ ಮಾಡಬಹುದು ಎನ್ನುವ ಆಡಳಿತ ಪಕ್ಷದ ಧೋರಣೆಗೆ ಕಡಿವಾಣವನ್ನೂ ಹಾಕಬಹುದು.
ಆದರೆ, ರಾಜ್ಯದ ವಿಚಾರಕ್ಕೆ ಬಂದಾಗ ವಿರೋಧ ಪಕ್ಷದ ಸ್ಥಾನದಲ್ಲಿರುವ ಕಾಂಗ್ರೆಸ್ ಆಗಲಿ ಜೆಡಿಎಸ್ ಆಗಲಿ, ಮೋದಿ ಸರಕಾರದ ವಿರುದ್ದ ಸಟೆದು ನಿಲ್ಲುತ್ತಿಲ್ಲ. ಅಲ್ಲಲ್ಲಿ, ಹೋರಾಟ ನಡೆಸುತ್ತಿದ್ದರೂ, ಅದರ ಬಿಸಿ ಕೇಂದ್ರಕ್ಕೆ ತಟ್ಟುತ್ತಿಲ್ಲ.
ರಾಜ್ಯದ ಬಿಜೆಪಿ ಸಂಸದರು ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದರೆ, ಬರ ಪರಿಹಾರ ಇಷ್ಟೊಂದು ವಿಳಂಬವಾಗುತ್ತಿರಲಿಲ್ಲ. ಉತ್ತರ ಕರ್ನಾಟಕ ಭಾಗದ ಜನತೆಯ ಕಷ್ಟಕ್ಕೆ ಆತ್ಮಸಾಕ್ಷಿಯಾಗಿ ಮೂರೂ ಪಕ್ಷಗಳು ಕೆಲಸ ಮಾಡುತ್ತಿವೆಯೋ ಅಥವಾ ಇದರಲ್ಲೂ ರಾಜಕೀಯ ಹುಡುಕುತ್ತಿವೆಯೋ ಎನ್ನುವುದು ಸಾರ್ವಜನಿಕರಿಗಿರುವ ಗುಮಾನಿ.
ಇಂತಹ ಪರಿಸ್ಥಿತಿಯಲ್ಲಿ ರಾಜ್ಯಕ್ಕೆ ತೀವ್ರವಾಗಿ ಕಾಡುತ್ತಿರುವ ಅಂಶವೇನಂದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ, ಎರಡು ಕ್ಷೇತ್ರಗಳಲ್ಲಿನ ದಿಗ್ಗಜರ ಸೋಲು. ಇವರಿಬ್ಬರಿದ್ದಿದ್ದರೆ, ಬರ ಪರಿಹಾರದ ವಿಚಾರದಲ್ಲಿ ಇಷ್ಟೊಂದು ವಿಳಂಬವಾಗುತ್ತಿರಲಿಲ್ಲ ಎನ್ನುವ ಮಾತು ಕೇಳಿಬರಲಾರಂಭಿಸಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಹವಾ
ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಹವಾ, ಯಾವ ರೀತಿ ವಿರೋಧ ಪಕ್ಷಗಳಿಗೆ ಜರ್ಕ್ ಹೊಡೆದಿತ್ತೆಂದರೆ, ಎಲ್ಲಾ ಘಟಾನುಗಟಿಗಳು ಸೋಲು ಅನುಭವಿಸಿದ್ದರು. ಅದರಲ್ಲಿ, ಮಲ್ಲಿಕಾರ್ಜುನ ಖರ್ಗೆ, ದೇವೇಗೌಡ್ರು, ಕೆ.ಎಚ್.ಮುನಿಯಪ್ಪ, ವೀರಪ್ಪ ಮೊಯ್ಲಿ ಪ್ರಮುಖರು. 28 ರಲ್ಲಿ 25ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿತ್ತು.ಆದರೆ, ಪ್ರಯೋಜನವಾಗಿದ್ದು ಏನು?

ಬಿಜೆಪಿ ಹೊರತಾಗಿ ಗೆದ್ದ ಮೂವರಲ್ಲಿ ಇಬ್ಬರು ಹೊಸಬರು
ಬಿಜೆಪಿ ಹೊರತಾಗಿ ಗೆದ್ದ ಮೂವರಲ್ಲಿ ಸುಮಲತಾ ಅಂಬರೀಶ್ ಮತ್ತು ಪ್ರಜ್ವಲ್ ರೇವಣ್ಣ ಇದೇ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಇನ್ನು, ಡಿ.ಕೆ.ಸುರೇಶ್, ಬೆಂಗಳೂರು ಗ್ರಾಮಾಂತರಕ್ಕೆ ಸೀಮಿತ ಎನ್ನುವುದಕ್ಕಿಂತ, ಸಹೋದರನ ಚಿಂತೆಯಲ್ಲೇ ಇದ್ದಾರೆ ಎನ್ನುವುದು ಸೂಕ್ತ.

ಮಲ್ಲಿಕಾರ್ಜುನ ಖರ್ಗೆ ಮತ್ತು ದೇವೇಗೌಡರ ಸೋಲು
ಹಾಗಾಗಿ, ಪ್ರಮುಖವಾಗಿ ಕರ್ನಾಟಕಕ್ಕೆ ಕಾಡುತ್ತಿರುವುದು ಮಲ್ಲಿಕಾರ್ಜುನ ಖರ್ಗೆ ಮತ್ತು ದೇವೇಗೌಡರ ಸೋಲು. ಗೌಡ್ರು ಮಾಜಿ ಪ್ರಧಾನಿಯಾಗಿದ್ದವರು ಮತ್ತು ಖರ್ಗೆ ವಿರೋಧ ಪಕ್ಷದ ನಾಯಕರಾಗಿದ್ದವರು. ರಾಜಕೀಯದ ಆಳ ಅನುಭವವನ್ನು ಹೊಂದಿರುವ ಇವರು, ಮೋದಿ ಸರಕಾರ, ಯಾವ ಕಾರಣಕ್ಕೆ, ಬರ ಪರಿಹಾರ ವಿಳಂಬ ಮಾಡುತ್ತಿದೆ ಎನ್ನುವ ಅಂಶವನ್ನು ಹೊರಗೆಳೆಯಬಹುದಿತ್ತು.

ಸಂಸತ್ತಿನಲ್ಲಿ ಈ ವಿಚಾರವನ್ನು ಪ್ರಸ್ತಾವಿಸಿದರೆ ಅದಕ್ಕೆ ತೂಕ ಜಾಸ್ತಿ
ಲೋಕಸಭೆಯ ಹೊರಗೂ ಕೇಂದ್ರದ ಕಿವಿಹಿಂಡುವ ಕೆಲಸವನ್ನು ಇವರುಗಳು ಮಾಡಬಹುದು. ಆದರೆ, ಸಂಸತ್ತಿನಲ್ಲಿ ಈ ವಿಚಾರವನ್ನು ಪ್ರಸ್ತಾವಿಸಿದರೆ ಅದಕ್ಕೆ ತೂಕ ಜಾಸ್ತಿ. ಮತ್ತು, ಆಡಳಿತ ಪಕ್ಷ ಅದಕ್ಕೆ ನೀಡುವ ಉತ್ತರ, ಡಾಕ್ಯುಮೆಂಟ್ / ರೆಕಾರ್ಡ್ ಆಗುತ್ತದೆ. ಹಾಗಾಗಿಯೇ, ಇವರಿಬ್ಬರ ಸೋಲು, ರಾಜ್ಯಕ್ಕೆ ಕಾಡಲಾರಂಭಿಸಿದೆ.

ಮಾಜಿ ಮುಖ್ಯಮಂತ್ರಿಗಳು ನೇರವಾಗಿ ಇನ್ನೊಬ್ಬರು ಮಾಜಿ ಸಿಎಂ ದೂರಿದ್ದಾರೆ
ತುಮಕೂರಿನಲ್ಲಿ ಗೌಡ್ರು ಮತ್ತು ಕೋಲಾರದಲ್ಲಿ ಮುನಿಯಪ್ಪ ಸೋಲಿಗೆ, ಮಾಜಿ ಮುಖ್ಯಮಂತ್ರಿಗಳು ನೇರವಾಗಿ ಇನ್ನೊಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ದೂರಿದ್ದಾರೆ. ಮೋದಿ ಹವಾಗಿಂತ, ಈ ಎರಡು ಕ್ಷೇತ್ರಗಳಲ್ಲಿ ಈ ತಂತ್ರಗಾರಿಕೆಯೇ ವರ್ಕೌಟ್ ಆಗಿರಬಹುದು. ಒಟ್ಟಿನಲ್ಲಿ, ವಿಪಕ್ಷಗಳು ಹೇಳುವಂತೆ, ಮೋದಿ, ಶಾ ಮುಂದೆ ನಿಂತು ಮಾತನಾಡುವ ಧೈರ್ಯ ಬಿಜೆಪಿ ಸಂಸದರಿಗೆ ಇದೆಯೋ, ಇಲ್ಲವೋ? ಖರ್ಗೆ, ದೇವೇಗೌಡ್ರ ಸೋಲು ರಾಜ್ಯಕ್ಕೆ ಮಾತ್ರ ಕಾಡಲಾರಂಭಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications