ಬರಪರಿಹಾರ ವಿಳಂಬ: ಇದೇ ಮೊದಲ ಬಾರಿಗೆ ಕ್ಷಮೆಯಾಚಿಸಿದ ಸಚಿವ
ಬೆಂಗಳೂರು, ಅ 4: ಕೇಂದ್ರ ಸರಕಾರದಿಂದ ಬರಬೇಕಾಗಿರುವ ಬರಪರಿಹಾರ ವಿಳಂಬವಾಗುತ್ತಿರುವುದಕ್ಕೆ, ಇದೇ ಮೊದಲ ಬಾರಿಗೆ ಸಚಿವರು, ರಾಜ್ಯದ ಜನತೆಯಲ್ಲಿ ಕ್ಷಮೆಯಾಚಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಆರೋಗ್ಯ ಸಚಿವ ಬಿ.ಶ್ರೀರಾಮುಲು, " ಕೇಂದ್ರ ಸರಕಾರದಿಂದ ಪರಿಹಾರ ಬರುವುದು ತಡವಾಗುತ್ತಿದೆ. ಇದನ್ನು ನಾವೆಲ್ಲಾ ಒಪ್ಪಿಕೊಳ್ಳಬೇಕು. ಈ ಸಂಬಂಧ, ರಾಜ್ಯದ ಜನತೆಯಲ್ಲಿ ಕ್ಷಮೆಯಾಚಿಸುತ್ತಿದ್ದೇನೆ" ಎಂದು ಸಚಿವರು ಹೇಳಿದ್ದಾರೆ.
"ಇದೊಂದು ದೊಡ್ಡ ಮೊತ್ತದ ಪರಿಹಾರ ಆಗಿರುವುದರಿಂದ, ಯಾರೂ ನಿರೀಕ್ಷಿದಷ್ಟು ತಡವಾಗುತ್ತಿದೆ. ಇಷ್ಟು ವಿಳಂಬವಾಗುತ್ತದೆ ಎಂದು ನಾವ್ಯಾರೂ ನಿರೀಕ್ಷಿಸಿರಲಿಲ್ಲ" ಎಂದು ಶ್ರೀರಾಮುಲು ಬೇಸರ ವ್ಯಕ್ತಪಡಿಸಿದ್ದಾರೆ.

"ಈ ಹಿಂದೆ, ಕೇಂದ್ರದಿಂದ ಬರುವ ಹಣವೆಲ್ಲಾ ಸೂಕ್ತ ಸಮಯದಲ್ಲಿ ಬಂದಿದೆ. ಇದು ಮಾತ್ರ ವಿಳಂಬವಾಗುತ್ತಿರುವುದಕ್ಕೆ, ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳುತ್ತಿದ್ದೇವೆ" ಎಂದು ಶ್ರೀರಾಮುಲು ಹೇಳಿದ್ದಾರೆ.
ಪರಿಹಾರ ಮೊತ್ತ ಬರುವುದು ವಿಳಂಬವಾಗುತ್ತಿರುವ ವಿಚಾರ ಸಚಿವ ಸಂಪುಟ ಸಭೆಯಲ್ಲೂ ಚರ್ಚೆಯಾಗಿದೆ. ಹಲವು ಸಚಿವರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ.
"ನೆರೆ ಪರಿಹಾರ ಸೂಕ್ಷ್ಮ ವಿಚಾರ. ಸಚಿವರುಗಳು ಎಲ್ಲರೂ ತಾಳ್ಮೆಯಿಂದ ಇರಬೇಕು. ಹೇಳಿಕೆ ನೀಡುವಾಗ ವಿಪಕ್ಷಗಳಿಗೆ ಆಹಾರವಾಗದಂತೆ, ಜನರು ಸಿಟ್ಟಾಗದಂತೆ ನೋಡಿಕೊಳ್ಳಿ" ಎಂದು ಮುಖ್ಯಮಂತ್ರಿಗಳು, ಎಲ್ಲಾ ಸಚಿವರುಗಳಿಗೆ ತಾಕೀತು ಮಾಡಿದ್ದಾರೆಂದು ಹೇಳಲಾಗುತ್ತಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications