ಅಡಕೆ ದರ ಪರಿಷ್ಕರಿಸಿ, ಬೆಲೆ ಹೆಚ್ಚಳ ಮಾಡಲು ದೆಹಲಿಗೆ ನಿಯೋಗ: ಆರಗ ಜ್ಞಾನೇಂದ್ರ

ಬೆಂಗಳೂರು, ಜೂ.18 : ಅಡಕೆಗೆ ನಿಗದಿಪಡಿಸಿರುವ ಬೆಲೆಯನ್ನು ಪರಿಷ್ಕರಿಸಿ ಹೆಚ್ಚಳ ಮಾಡುವಂತೆ ಒತ್ತಾಯಿಸಲು ಕೇಂದ್ರ ಸರ್ಕಾರಕ್ಕೆ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಅಡಕೆ ಧಾರಣೆ ಸಂಬಂಧ ರೈತರು ಯಾವುದೇ ಆತಂಕ ಪಡುವುದು ಬೇಡ. ರಾಜ್ಯದ ಮಲೆನಾಡು ಭಾಗದ ಲಕ್ಷಾಂತರ ರೈತ ಹಾಗೂ ರೈತ_ಕಾರ್ಮಿಕ ಕುಟುಂಬಗಳ ಆರ್ಥಿಕ ಬೆನ್ನೆಲುಬಾಗಿರುವ ಅಡಕೆ ಬೆಳೆಗೆ ಸುಸ್ಥಿರ ಬೆಲೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದ್ದು, ಈ ಕುರಿತು ರೈತ ಸಮುದಾಯ ಯಾವುದೇ ಆತಂಕ ಪಡುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಹಣದುಬ್ಬರ ಹಾಗೂ ಇನ್ನಿತರ ಕಾರಣಗಳಿಂದಾಗಿ ಅಡಕೆ ಬೆಳೆ ಉತ್ಪಾದನಾ ವೆಚ್ಚವೂ ಹೆಚ್ಚಿದ್ದು ಪ್ರಸ್ತುತ ಪ್ರತಿ ಕಿಲೋ ಅಡಕೆ ಅಂದಾಜು ವೆಚ್ಚ ರೂಪಾಯಿ 25 ರಷ್ಟಿದೆ. ಸುಮಾರು ಆರು ವರ್ಷಗಳ ಹಿಂದೆ ಈ ದರ ನಿಗದಿ ಪಡಿಸಲಾಗಿದೆ. ಇದನ್ನು ಸದ್ಯದ ಖರ್ಚುವೆಚ್ಚಗಳಿಗೆ ಅನುಗುಣವಾಗಿ ಪರಿಷ್ಕರಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.

Delegation will be taken to Delhi to hike Arecanut Price says Minister Araga Jnanendra

ಈ ಹಿಂದೆ ಕೇಂದ್ರ ಸರಕಾರ ದೇಶಿಯ ಅಡಿಕೆ ಉತ್ಪನ್ನ ಅಂದಾಜು ವೆಚ್ಚವನ್ನು ಹೆಚ್ಚಳ ಮಾಡಿದಾಗ, ವಿದೇಶದಿಂದ ಅಮದಾಗುತ್ತಿದ್ದ ಕಡಿಮೆ ಗುಣಮಟ್ಟದ ಅಡಿಕೆ ಪ್ರಮಾಣ ಗಣನೀಯವಾಗಿ ತಗ್ಗಿತ್ತು. ವಿದೇಶದಿಂದ ಆಮದಾಗುವ ಅಡಿಕೆ, ಗುಣಮಟ್ಟದಲ್ಲಿ ಅತ್ಯಂತ ನಿಕೃಷ್ಟ ವಾಗಿದ್ದು ದೇಶಿಯ ಅಡಿಕೆ, ಗುಣಮಟ್ಟದಲ್ಲಿ ಆತ್ಯುಕೃಷ್ಟ ವಾಗಿದೆ ಎಂದು, ಪ್ರಮಾಣೀಕೃತ ವಾಗಿದೆ ಎಂದೂ ತಿಳಿಸಿದ್ದಾರೆ.

ಕೇಂದ್ರ ಕೃಷಿ ಸಚಿವರನ್ನು ರಾಜ್ಯ ಟಾಸ್ಕ್ ಫೋರ್ಸ್ ನಿಯೋಗ ಭೇಟಿಯಾಗಿ, ಅಡಿಕೆ ಉತ್ಪನ್ನ ಅಂದಾಜು ವೆಚ್ಚ ಪರಿಷ್ಕರಿಸಿ ಹೆಚ್ಚಳ ಮಾಡಲು ಮನವರಿಕೆ ಮಾಡಿ ಕೊಡಲಾಗುವುದು, ರೈತರು ಅಡಿಕೆ ಧಾರಣೆ ಬಗ್ಗೆ ಯಾವುದೇ ಆತಂಕ ಹಾಗೂ ಭಯಪಡುವುದು ಬೇಡ ಎಂದೂ ಸಚಿವರು ವಿನಂತಿಸಿದ್ದಾರೆ.

Recommended Video

      Virat Kohli & Babar Azam ಒಂದೇ ತಂಡದಲ್ಲಿ ಆಡೋದು ಗ್ಯಾರೆಂಟಿ | *Cricket | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+