Get Updates
Get notified of breaking news, exclusive insights, and must-see stories!

ಡಿ. ಕೆ. ಶಿವಕುಮಾರ್‌ಗೆ ಜಾಮೀನು ನೀಡಿದ ದೆಹಲಿ ಹೈಕೋರ್ಟ್

ಬೆಂಗಳೂರು, ಅಕ್ಟೋಬರ್ 23 : ಕನಕಪುರ ಕ್ಷೇತ್ರದ ಶಾಸಕ, ಮಾಜಿ ಸಚಿವ ಡಿ. ಕೆ. ಶಿವಕುಮಾರ್‌ಗೆ ಜಾಮೀನು ಸಿಕ್ಕಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.

ಬುಧವಾರ ದೆಹಲಿ ಹೈಕೋರ್ಟ್ ಡಿ. ಕೆ. ಶಿವಕುಮಾರ್ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇದರಿಂದಾಗಿ ಡಿ. ಕೆ. ಶಿವಕುಮಾರ್ 50 ದಿನಗಳ ಜೈಲು ವಾಸ ಅಂತ್ಯವಾಗಲಿದೆ. ಡಿ. ಕೆ. ಶಿವಕುಮಾರ್ ಅಪಾರ ಅಭಿಮಾನಿಗಳು ಇಂದು ಜಾಮೀನು ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ಕಾದಿದ್ದರು, ಎಲ್ಲರೂ ಸಂತಸಗೊಂಡಿದ್ದಾರೆ.

dk shivakumar

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್‌ರನ್ನು ಸೆಪ್ಟೆಂಬರ್ 3ರಂದು ಬಂಧಿಸಿತ್ತು. ಇಡಿ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿದ ಕಾರಣ ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಜೈಲಿನಲ್ಲಿಯೇ ಇದ್ದರು. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.

Oct 23, 2019, 10:31 pm IST

ತಮ್ಮ ಬಿಡುಗಡೆಗೆ ಹೋರಾಟ ಮಾಡಿದವರಿಗೆ, ವಕೀಲರಿಗೆ, ರಾಜಕೀಯ ಮುಖಂಡರಿಗೆ ಧನ್ಯವಾದ ಅರ್ಪಿಸುವುದಾಗಿ ಡಿಕೆ ಶಿವಕುಮಾರ್ ತಿಳಿಸಿದರು.
Oct 23, 2019, 10:31 pm IST

ಜೈಲಿನಿಂದ ಹೊರ ಬಂದ ಬಳಿಕ ಕರ್ನಾಟಕ ಭವನ ಸಮೀಪದ ಶಿವ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.
Oct 23, 2019, 10:30 pm IST

ದೆಹಲಿಯ ತಿಹಾರ್ ಜೈಲಿನಿಂದ ಡಿಕೆ ಶಿವಕುಮಾರ್ ಬಿಡುಗಡೆಯಾಗಿದ್ದಾರೆ.
Oct 23, 2019, 5:08 pm IST

ನ್ಯಾಯಾಲಯದಲ್ಲಿ ಜಾಮೀನು ಪ್ರಕ್ರಿಯೆ ಪೂರ್ಣ. ಡಿ. ಕೆ. ಶಿವಕುಮಾರ್ ಬಿಡುಗಡೆ ಆದೇಶ ಪ್ರತಿಯನ್ನು ಹಸ್ತಾಂತರ ಮಾಡಿದ ಇಡಿ ಕೋರ್ಟ್. ಆದೇಶ ಪ್ರತಿಯನ್ನು ತಿಹಾರ್ ಜೈಲಿಗೆ ತಲುಪಿಸಬೇಕು.
Oct 23, 2019, 4:39 pm IST

ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಗೆ ಇಡಿ ಆಕ್ಷೇಪ. ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಇಡಿ. ಗುರುವಾರ ಅರ್ಜಿಯ ವಿಚಾರಣೆ ಸಾಧ್ಯತೆ.
Oct 23, 2019, 3:11 pm IST

ಡಿ. ಕೆ. ಶಿವಕುಮಾರ್ ನಿವಾಸದಲ್ಲಿ ಪತ್ತೆಯಾದ ಹಣ ಅಕ್ರಮ ಹಣ ವರ್ಗಾವಣೆ ಮೂಲಕ ತರಲಾಗಿದೆ ಎಂಬುದು ಇಡಿ ಆರೋಪವಾಗಿದೆ. ಈ ಕುರಿತು ತನಿಖೆಯನ್ನು ಕೈಗೊಂಡಿತ್ತು.
Oct 23, 2019, 3:10 pm IST

2017ರ ಆಗಸ್ಟ್ 2ರಂದು ಡಿ. ಕೆ. ಶಿವಕುಮಾರ್ ನಿವಾಸಗಳ ಮೇಲೆ ಐಟಿ ದಾಳಿ ನಡೆಸಿತ್ತು. ದೆಹಲಿಯ ಫ್ಲ್ಯಾಟ್‌ನಲ್ಲಿ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ಹಣಕ್ಕೆ ದಾಖಲೆ ಇಲ್ಲದ ಕಾರಣ ಇಡಿ ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿತ್ತು.
Oct 23, 2019, 3:08 pm IST

ಅಕ್ರಮ ಹಣ ವರ್ಗವಣೆ ಪ್ರಕರಣದಲ್ಲಿ ಇಡಿ ಡಿ. ಕೆ. ಶಿವಕುಮಾರ್, ಡಿ. ಕೆ. ಸುರೇಶ್, ಡಿ. ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ. ಎನ್. ರಾಜಣ್ಣ ವಿಚಾರಣೆ ನಡೆಸಿದೆ.
Oct 23, 2019, 3:06 pm IST

ಡಿ. ಕೆ. ಶಿವಕುಮಾರ್‌ಗೆ ಭವ್ಯ ಸ್ವಾಗತ ಕೋರಲು ಸಜ್ಜಾದ ಬೆಂಬಲಿಗರು. ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿಯೇ ಸ್ವಾಗತ ಕೋರಲು ತಯಾರಿ ಆರಂಭ
Oct 23, 2019, 3:01 pm IST

ಇಂದು ಬೆಳಗ್ಗೆ ತಿಹಾರ್ ಜೈಲಿನಲ್ಲಿ ಡಿ. ಕೆ. ಶಿವಕುಮಾರ್ ಭೇಟಿಯಾಗಿದ್ದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ
Oct 23, 2019, 3:00 pm IST

ಡಿ. ಕೆ. ಶಿವಕುಮಾರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ, ದಯಾನ್ ಕೃಷ್ಣನ್ ವಾದ ಮಂಡನೆ ಮಾಡಿದ್ದಾರೆ.
Oct 23, 2019, 2:59 pm IST

ಮಾಧ್ಯಮಗಳ ಜೊತೆ ಮಾತನಾಡಿದ ಡಿ. ಕೆ. ಸುರೇಶ್, "ಕಳೆದ 50 ದಿನಗಳಿಂದ ಮಾನಸಿಕ ಹಿಂಸೆ ಅನುಭವಿಸುತ್ತಿದ್ದೆವು. ಮುಂದಿನ ನಡೆ ಬಗ್ಗೆ ವಕೀಲರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದರು.
Oct 23, 2019, 2:57 pm IST

ದೆಹಲಿ ಹೈಕೋರ್ಟ್ ಆದೇಶ ಇಡಿ ವಿಶೇಷ ನ್ಯಾಯಾಲಯ, ತಿಹಾರ್ ಜೈಲಿಗೆ ತಲುಪಿದ ಬಳಿಕ ಡಿ. ಕೆ. ಶಿವಕುಮಾರ್ ಬಿಡುಗಡೆಯಾಗಲಿದ್ದಾರೆ. ಇಂದು ಸಂಜೆ ಅವರು ಜೈಲಿನಿಂದ ಹೊರ ಬರುವ ನಿರೀಕ್ಷೆ ಇದೆ.
Oct 23, 2019, 2:55 pm IST

ಡಿ. ಕೆ. ಶಿವಕುಮಾರ್ ವಿದೇಶಕ್ಕೆ ಪರಾರಿಯಾಗುವುದಿಲ್ಲ. ಸಾಕ್ಷಿ ನಾಶ ಮಾಡುವುದಿಲ್ಲ, ಅವರ ಆರೋಗ್ಯ ಸರಿ ಇಲ್ಲ ಎಂದು ಮಂಡಿಸಿದ ವಾದದ ಆಧಾರದ ಮೇಲೆ ಜಾಮೀನು ನೀಡಿದ ಹೈಕೋರ್ಟ್
Oct 23, 2019, 2:54 pm IST

ಮೂರು ಷರತ್ತುಗಳನ್ನು ವಿಧಿಸಿ ಡಿ. ಕೆ. ಶಿವಕುಮಾರ್‌ಗೆ ದೆಹಲಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
Oct 23, 2019, 2:46 pm IST

ಇಡಿ ವಿಶೇಷ ನ್ಯಾಯಾಲಯ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಆದ್ದರಿಂದ, ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
Oct 23, 2019, 2:45 pm IST

ಆದೇಶ ಪ್ರಕಟವಾಗುತ್ತಿದ್ದಂತೆ ನ್ಯಾಯಾಲಯದಲ್ಲಿ ಕಣ್ಣೀರು ಹಾಕಿದ ಸಹೋದರ ಡಿ. ಕೆ. ಸುರೇಶ್
Oct 23, 2019, 2:41 pm IST

ದೇಶ ಬಿಟ್ಟು ಹೋಗುವಂತಿಲ್ಲ, ವಿಚಾರಣೆಗೆ ಕರೆದಾಗ ಹಾಜರಾಗಬೇಕು ಎಂದು ಜಾಮೀನು ನೀಡುವಾಗ ಹೈಕೋರ್ಟ್ ಷರತ್ತು ವಿಧಿಸಿದೆ.
Oct 23, 2019, 2:41 pm IST

25 ಲಕ್ಷ ರೂ. ಬಾಂಡ್, ಪಾಸ್ ಪೋರ್ಟ್‌ ವಶಕ್ಕೆ ನೀಡಬೇಕು ಎಂಬ ಷರತ್ತುಗಳನ್ನು ಹಾಕಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+