ಸ್ಪೀಕರ್ ಯು.ಟಿ.ಖಾದರ್ ಮೇಲಿನ ಆರೋಪಗಳ ನ್ಯಾಯಾಂಗ ತನಿಖೆಗೆ ಆಗ್ರಹ: ಭ್ರಷ್ಟಾಚಾರದ ಆರೋಪಗಳೇನು?
ಬೆಂಗಳೂರು, ಅಕ್ಟೋಬರ್ 28: ಸ್ಪೀಕರ್ ಯು.ಟಿ.ಖಾದರ್ ಅವರ ಅವಧಿಯಲ್ಲಿ ವಿವಾದ, ಗೊಂದಲ, ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ ಎಂದು ಸಂಸದ ಮತ್ತು ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆರೋಪಿಸಿದ್ದಾರೆ. ಸ್ಪೀಕರ್ ಸ್ಥಾನದ ವಿರುದ್ಧ ಬಂದಿರುವ ಆರೋಪಗಳಿಂದ ಆ ಸ್ಥಾನವು ಮುಕ್ತವಾಗಬೇಕು. ಇದಕ್ಕಾಗಿ ಕಾರ್ಯನಿರತ ನ್ಯಾಯಮೂರ್ತಿಗಳಿಂದ ಆರೋಪಗಳ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಸ್ಪೀಕರ್ ಕಾರ್ಯಾಲಯದ ಟೆಂಡರ್ ಮಂಗಳೂರು ಮೂಲದವರಿಗೇ ಯಾಕೆ ಸಿಗುತ್ತಿದೆ ಎಂದು ಕೇಳಿದ ಅವರು, ಅದೂ ಯಾರಿಗೋ ಕೆಲವರಿಗೇ ಯಾಕೆ ಸಿಗುತ್ತಿದೆ ಎಂದು ಪ್ರಶ್ನೆ ಮಾಡಿದರು.
ವಿಧಾನಸಭಾಕ್ಷರ ಸಚಿವಾಲಯದ ಅಧಿಕಾರಿಗಳ ಅಭಿಪ್ರಾಯ ಏನಿತ್ತು? ನನಗೆ ಗೊತ್ತಿರುವ ಪ್ರಕಾರ ಹಣಕಾಸು ಇಲಾಖೆ ಖರೀದಿಗಳನ್ನು ತಿರಸ್ಕರಿಸಿದೆ. ಬಳಿಕ ಹಣಕಾಸು ಇಲಾಖೆ ಹೊಣೆ ಹೊತ್ತ ಮುಖ್ಯಮಂತ್ರಿಗಳೇ ಒಪ್ಪಿಗೆ ಕೊಡಿಸಿದ ಆರೋಪವಿದೆ. ಯು.ಟಿ.ಖಾದರರಿಗೆ ಸ್ವತಃ ಸಿಎಂ ಅವರೇ ಬೆಂಬಲ ಕೊಟ್ಟ ಆಕ್ಷೇಪವಿದೆ ಎಂದರು. ಖರೀದಿ ತುರ್ತಾಗಿ ಮಾಡಬೇಕಾದ ಕೆಲಸ ಏನಿತ್ತು? ಎಂದು ಕೇಳಿದರು.

ವಿಧಾನಸಭೆಯ ಪ್ರಧಾನ ಬಾಗಿಲಿಗೆ ರೋಸ್ ವುಡ್ನ ಮರದ ಕೆತ್ತನೆಯ ಚೌಕಟ್ಟನ್ನು ಮಾಡಿಸಿದಲ್ಲಿಂದ ಭ್ರಷ್ಟಾಚಾರದ ಆರೋಪಗಳು ಆರಂಭವಾಗಿತ್ತು. ಸಭಾಂಗಣಕ್ಕೆ ಹೊಸ ಟಿ.ವಿ.ಸೆಟ್ ಅನ್ನು ಅಳವಡಿಸಿದ್ದರು. ಎಐ ಮಾನಿಟರ್ ಸಿಸ್ಟಂ ಅನ್ನು ಹಾಕಲು ಸಾಕಷ್ಟು ಖರ್ಚು ವೆಚ್ಚಗಳಾಗಿವೆ. ಎಲ್ಲ ಶಾಸಕರಿಗೆ ಗಂಡಭೇರುಂಡ ಹೋಲಿಕೆಯ ಗಡಿಯಾರಗಳನ್ನು ಕೊಟ್ಟರು. ಮೊಗಸಾಲೆಯಲ್ಲಿ ಯಂತ್ರ ಅಳವಡಿಸಿ ಮಸಾಜ್ ಪಾರ್ಲರ್ ಮಾದರಿಯಲ್ಲಿ ಬದಲಾಯಿಸಿದ್ದಕ್ಕೆ ದೊಡ್ಡ ಪ್ರಮಾಣದ ವಿರೋಧ ವ್ಯಕ್ತವಾಗಿತ್ತು ಎಂದು ತಿಳಿಸಿದರು.
ಸರಕಾರದ ವತಿಯಿಂದ ಊಟ, ಉಪಹಾರ ಕೊಡಲು ಸ್ಪೀಕರ್ ಆರಂಭಿಸಿದರು. ಇದು ಅಗತ್ಯವಿತ್ತೇ? ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಳಿ, ಇಲ್ಲ ಎಂದು ಮೇಲ್ನೋಟಕ್ಕೆ ಕಾಣುತ್ತದೆ ಎಂದರು. ಹಾಸು ಹೊದಿಕೆ ಬದಲಿಸಿ, ಕಾರ್ಪೆಟ್ ಬದಲಿಸಿದ್ದಲ್ಲದೇ ಸುಣ್ಣ ಬಣ್ಣ ಹೊಡೆಸಿದರು. ಅವರು ಒಂದೊಂದು ಮುಟ್ಟಿದರೂ ಅದರೊಳಗೆ ಇನ್ನೇನೋ ಇದೆ ಎಂಬ ಅನುಮಾನಗಳು ವ್ಯಾಪಕವಾಗಿ ಬೆಳವಣಿಗೆ ಆಗಿದೆ ಎಂದು ವಿಶ್ಲೇಷಿಸಿದರು.
ಶಾಸಕರ ಭವನದಲ್ಲಿ ಶಾಸಕರ ಕೊಠಡಿಗಳನ್ನು ಭದ್ರ ಪಡಿಸಲು, ಇನ್ನಷ್ಟು ವ್ಯವಸ್ಥೆ ಕಲ್ಪಿಸಿಕೊಡಲು ಸ್ಮಾರ್ಟ್ ಡೋರ್ ಲಾಕರ್ ಹಾಕಿಸಿದರು. ಗಾಡ್ರೆಜ್ನಂಥ ಕಂಪೆನಿಯವರ ಬೆಲೆ 14- 16 ಸಾವಿರ ಇದೆ ಎಂದು ಆನ್ಲೈನ್ ಪರಿಶೀಲನೆಯಿಂದ ಗೊತ್ತಾಗುತ್ತದೆ. ಅದಕ್ಕೆ ಇವರು 49 ಸಾವಿರಕ್ಕಿಂತ ಹೆಚ್ಚು ಖರ್ಚು ತೋರಿಸಿದರು ಎಂದು ದೂರಿದರು. ಇದರ ಜೊತೆಗೆ ಸ್ಮಾರ್ಟ್ ಸೇಫ್ ಲಾಕರ್ ಹಾಕಿಸಿದರು. ಅದು ಮಾರ್ಕೆಟ್ನಲ್ಲಿ 8-9 ಸಾವಿರಕ್ಕೆ ಸಿಗುವುದಾಗಿ ಆನ್ಲೈನ್ನಲ್ಲಿದೆ. ಇವರು 35 ಸಾವಿರದ ಮೇಲೆ ದರ ವಿಧಿಸಿದರು ಎಂದು ಆಕ್ಷೇಪಿಸಿದರು.
ಮಾರುಕಟ್ಟೆಯಲ್ಲಿ ಸುಮಾರು 30 ಸಾವಿರಕ್ಕೆ ಲಭ್ಯ ಇರುವ ಸ್ಮಾರ್ಟ್ ಎನರ್ಜಿ ಸೊಲ್ಯೂಷನ್ ಗೆ 90,500 ರೂ. ವಿಧಿಸಿದ್ದಾರೆ. ಸ್ಟೇನ್ಲೆಸ್ ಸ್ಟೀಲ್ ವಾಟರ್ ಪ್ಯೂರಿಫೈಯರ್ ಆನ್ಲೈನ್ನಲ್ಲಿ 16 ಸಾವಿರದಿಂದ 53 ಸಾವಿರದಲ್ಲಿ ಲಭ್ಯವಿದ್ದು, 65 ಸಾವಿರ ವಿಧಿಸಲಾಗಿದೆ. ಒಟ್ಟು 235 ರಷ್ಟು ಖರೀದಿ ಆಗಿದೆ. 123 ಸ್ಮಾರ್ಟ್ ಎನರ್ಜಿ ಸೊಲ್ಯೂಷನ್ ಖರೀದಿ ಮಾಡಿದ್ದಾರೆ. 224 ಸೇಫ್ ಲಾಕರ್, ಅಷ್ಟೇ ಸಂಖ್ಯೆಯ ಡೋರ್ ಲಾಕರ್ ಖರೀದಿ ಮಾಡಿದ್ದಾರೆ ಎಂದು ತಿಳಿಸಿದರು
4-5 ದಿನಗಳ ಪುಸ್ತಕ ಮೇಳಕ್ಕೆ 4.5 ಕೋಟಿ ಖರ್ಚು ಮಾಡಿದ್ದಾರೆ. ಪುಸ್ತಕ ಕೊಂಡು ಹಂಚಿದರೂ ಇಷ್ಟಾಗುತ್ತಿತ್ತೇ ಗೊತ್ತಿಲ್ಲ ಎಂದು ಆಕ್ಷೇಪಿಸಿದರು. ಇವರು ಸ್ಟಾಲ್ ಹಾಕುವುದು ಬಿಟ್ಟು ಬೇರೇನೂ ಇಲ್ಲ. ಲೈಟಿಂಗ್ ಮಾಡಿದ್ದಾರೆ. ಶಾಸಕರ ಭವನಕ್ಕೆ ಮಂಚ, ಟೇಬಲ್ ಹಾಕಿಸಿದ್ದಾರೆ. ನೇಮಕಾತಿಗೆ ಕೋರ್ಟಿನಲ್ಲಿ ತಡೆಯಾಜ್ಞೆ ವಿಧಿಸಲಾಗಿದೆ. ಇದರ ವಿಷಯದಲ್ಲಿ ಮೊಗಸಾಲೆಯ ಸುದ್ದಿಗಳೇನು? ಇದೆಲ್ಲ ಆ ಸ್ಥಾನಕ್ಕೆ ಕುಂದು ಬರುವಂತಿದೆ. ಯು.ಟಿ. ಖಾದರ್ ಅವರು ಈಗಲೂ ವಿದೇಶದಲ್ಲೇ ಇದ್ದಾರೆ. ಅವರು ಎಷ್ಟು ದೇಶಗಳಿಗೆ ಹೋಗಿದ್ದಾರೆ. ಅವರೆಷ್ಟು ಖರ್ಚು ಹಾಕಿ ಸರಕಾರ ಎಷ್ಟು ಹಣ ಕೊಟ್ಟಿದೆ ಎಂದು ಕೇಳಿದರು.
ನಾನೂ ಸ್ಪೀಕರ್ ಆಗಿ ವಿದೇಶಗಳಿಗೆ ಹೋಗಿದ್ದೇನೆ. ನಮಗಿರೋ ಅವಕಾಶ ಮೀರಿ, ಎಷ್ಟು ಪ್ರವಾಸ ಮಾಡಿದ್ದಾರೆ. ಯಾರ್ಯಾರ ಜೊತೆ ಪ್ರವಾಸ ಮಾಡಿದ್ದಾರೆ? ಇವೆಲ್ಲವೂ ಬಹಿರಂಗಗೊಳ್ಳಬೇಕಿದೆ. ವಿದೇಶಗಳ ಅಧ್ಯಯನದ ಹೆಸರಿನಲ್ಲಿ ನಡೆದ ಪ್ರವಾಸದ ವಿವರ ಬಹಿರಂಗಗೊಳಿಸಿ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದರು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications