ಶ್ರೀರಾಮ-ಸೀತೆ ನೆಲೆಸಿದ್ದ ರಾಮದೇವರ ಬೆಟ್ಟದ ಅಭಿವೃದ್ಧಿಗೆ ಆಗ್ರಹಿಸಿ ಸಿಎಂಗೆ ಅಶ್ವಥ್ ನಾರಾಯಣ ಪತ್ರ
ಬೆಳಗಾವಿ, ಡಿಸೆಂಬರ್ 21: ರಾಮನಗರ ಜಿಲ್ಲೆಯ ಐತಿಹಾಸಿಕ ರಾಮದೇವರ ಬೆಟ್ಟವನ್ನು ಅಯೋಧ್ಯೆಯ ರಾಮ ಮಂದಿರದಂತೆಯೇ ಅಭಿವೃದ್ಧಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಮದೇವರ ಬೆಟ್ಟದ ಸಮಗ್ರ ಅಭಿವೃದ್ಧಿ ಕೋರಿ ಸಚಿವರು ಬುಧವಾರ ಪತ್ರ ಬರೆದಿದ್ದಾರೆ. ಅದರಲ್ಲಿ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ರಾಮದೇವರ ಬೆಟ್ಟದಲ್ಲಿ 19 ಎಕರೆ ಪ್ರದೇಶದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದಂತೆಯೇ ಒಂದು ದೇವಸ್ಥಾನವನ್ನು ನಿರ್ಮಿಸಲು ತ್ವರಿತವಾಗಿ ಒಂದು ಅಭಿವೃದ್ಧಿ ಸಮಿತಿಯನ್ನು ರಚಿಸಬೇಕು ಎಂದು ಮನವಿ ಮಾಡಿದ್ದಾರೆ.
ರಾಮದೇವರ ಬೆಟ್ಟವು ವಾನರ ಸಂತತಿಯ ಸುಗ್ರೀವನಿಂದ ಪ್ರತಿಷ್ಠಾಪಿತವಾಗಿದ್ದೆಂಬ ಐತಿಹ್ಯ ಹೊಂದಿದೆ. ಹೀಗಾಗಿ ಈ ಸ್ಥಳವನ್ನು ದಕ್ಷಿಣದ ಅಯೋಧ್ಯೆಯಂತೆ ಬೆಳೆಸಬೇಕೆನ್ನುವುದು ರಾಮನಗರ ಜಿಲ್ಲೆಯ ಸಾರ್ವಜನಿಕರು ಮತ್ತು ಭಕ್ತಾದಿಗಳ ಒತ್ತಾಯವಾಗಿದೆ. ಬೆಂಗಳೂರಿಗೆ ಸನಿಹದಲ್ಲಿರುವ ಈ ಬೆಟ್ಟವನ್ನು ಭಕ್ತರ ಅಪೇಕ್ಷೆಯಂತೆ ಅಭಿವೃದ್ಧಿಪಡಿಸುವುದರಿಂದ ಸಂಸ್ಕೃತಿ ರಕ್ಷಣೆ ಮತ್ತು ಪ್ರವಾಸೋದ್ಯಮ ಬೆಳವಣಿಗೆ ಎರಡನ್ನೂ ಸಾಧಿಸಲು ಅವಕಾಶವಾಗುತ್ತದೆ ಎಂದು ತಿಳಿಸಿದ್ದಾರೆ.

ಶ್ರೀರಾಮನು ವನವಾಸದ ದಿನಗಳಲ್ಲಿ ಸೀತೆ ಮತ್ತು ಲಕ್ಷ್ಮಣರೊಂದಿಗೆ ರಾಮದೇವರ ಬೆಟ್ಟದಲ್ಲಿ ಒಂದು ವರ್ಷದ ಮಟ್ಟಿಗೆ ಇದ್ದನೆಂಬ ನಂಬಿಕೆ ಇದೆ. ಇಲ್ಲಿರುವ ಪಾತಾಳಗಂಗೆಯ ಉದ್ಭವಕ್ಕೆ ರಾಮನೇ ಕಾರಣ ಎನ್ನುವ ಶ್ರದ್ಧೆ ಇದೆ. ಅಲ್ಲದೆ ಸಪ್ತರ್ಷಿಗಳು ಕೂಡ ಇಲ್ಲಿ ತಪಸ್ಸನ್ನು ಆಚರಿಸಿರುವ ಕುರುಹುಗಳಿವೆ. ಹಾಗೆಯೇ, ಈ ಬೆಟ್ಟವು ದೇಶದ ಏಕೈಕ ರಣಹದ್ದುಗಳ ಸಂರಕ್ಷಿತ ಪ್ರದೇಶವಾಗಿದೆ. ಈ ಪಕ್ಷಿಗಳಿಗೂ ರಾಮಾಯಣಕ್ಕೂ ಸಂಬಂಧವಿರುವುದು ಕೂಡ ಗಮನಾರ್ಹವಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

ಐತಿಹಾಸಿಕ ತಾಣವಾಗಿರುವ ರಾಮದೇವರ ಬೆಟ್ಟವು ತ್ರೇತಾಯುಗದಷ್ಟು ಹಿಂದಿನ ಪರಂಪರೆಯನ್ನು ಹೊಂದಿದೆ. ಇದನ್ನು ಆಕರ್ಷಕವಾಗಿ ಅಭಿವೃದ್ಧಿ ಪಡಿಸಿ, ಮುಂದಿನ ತಲೆಮಾರುಗಳಿಗೂ ದಾಟಿಸಬೇಕು ಎಂದು ಮುಖ್ಯಮಂತ್ರಿಗಳ ಜೊತೆಗೆ ಮುಜರಾಯಿ, ಹಜ್ ಮತ್ತು ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೂ ಪತ್ರ ಬರೆದು ಕೋರಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications