Dengue: ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಆರ್ಭಟ! ದಾಖಲಾದ ಪ್ರಕರಣಗಳೆಷ್ಟು?
ರಾಜ್ಯದಲ್ಲಿ ಸೈಲೆಂಟ್ ಆಗಿದ್ದ ಡೆಂಗ್ಯೂ ಮತ್ತೊಮ್ಮೆ ಅಬ್ಬರಿಸಲು ಶುರು ಮಾಡಿದೆ. ಕಳೆದ ತಿಂಗಳು ಕೂಡ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಮಿತಿಮೀರಿತ್ತು. ಬಳಿಕ ಒಂದೆರಡು ವಾರಗಳ ಮಟ್ಟಿಗೆ ತಗ್ಗಿದ್ದ ಪ್ರಕರಣಗಳು ಮತ್ತೆ ಏರತೊಡಗಿವೆ.
ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 91 ಹೊಸ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ ಎಂದು ತಿಳಿದುಬಂದಿದೆ. ಈವರೆಗೆ ಒಟ್ಟು 29,611 ಪ್ರಕರಣಗಳು ದಾಖಲಾಗಿದ್ದು, 683 ಡೆಂಗ್ಯೂ ಪ್ರಕರಣಗಳು ಸಕ್ರಿಯವಾಗಿವೆ.

ಬಿಬಿಎಂಪಿ ಅಂದರೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಯಲ್ಲಿ 38 ಡೆಂಗ್ಯೂ ಕೇಸ್ ಪತ್ತೆಯಾಗಿವೆ. ಈ ವರ್ಷದ ಆರಂಭದಿಂದಲೂ ಇಲ್ಲಿವರೆಗೆ ಒಟ್ಟು 9,035 ಡೆಂಗ್ಯೂ ಕೇಸ್ಗಳು ಸಿಲಿಕಾನ್ ಸಿಟಿಯಲ್ಲಿ ವರದಿಯಾಗಿವೆ.
ಕಳೆದ ತಿಂಗಳು ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣಗಳ ಹೆಚ್ಚಾದ ಹಿನ್ನೆಲೆ ಡೆಂಗ್ಯೂ ಜ್ವರವನ್ನು ʼಸಾಂಕ್ರಾಮಿಕ ರೋಗʼ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿತ್ತು. ಈ ಸಂಬಂಧ ರಾಜ್ಯ ಸರ್ಕಾರವು ಗೆಜೆಟ್ ಅಧಿಸೂಚನೆ ಕೂಡ ಪ್ರಕಟಿಸಿತ್ತು. ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಅಡಿಯಲ್ಲಿ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿ, ಅಧಿಸೂಚನೆ ಹೊರಡಿಸಿತ್ತು.

ಡೆಂಗ್ಯೂ ಲಕ್ಷಣಗಳು: ಸ್ನಾಯು ಮತ್ತು ಕೀಲು ನೋವು, ತೀವ್ರ ತಲೆನೋವು, ಅಧಿಕ ಜ್ವರ, ಕಣ್ಣುಗಳಲ್ಲಿ ನೋವು ಕಾಣಿಸಿಕೊಳ್ಳುವುದು, ದದ್ದುಗಳು ಬರುವುದು, ವಾಕರಿಕೆ ಮತ್ತು ವಾಂತಿ ಬರುವುದು, ಗ್ರಂಥಿಗಳು ಊದಿಕೊಳ್ಳುವುದು. ಒಂದು ವೇಳೆ ನಿಮ್ಮಲ್ಲೂ ಈ ಲಕ್ಷಣಗಳು ಕಂಡು ಬಂದರೆ, ಕೂಡಲೇ ವೈದ್ಯರನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಳ್ಳಿ ಎಂದು ಆರೋಗ್ಯಾಧಿಕಾರಿಗಳು ಸಲಹೆ ನೀಡಿದ್ದಾರೆ.
ಮಳೆಗಾಲ ಆಗಿರುವುದರಿಂದ ನಿಮ್ಮ ಮನೆಯ ಸುತ್ತ ನೀರು ನಿಂತುಕೊಳ್ಳದಂತೆ ಎಚ್ಚರ ವಹಿಸಬೇಕು. ಮನೆಯಲ್ಲಿ ಬೆಳಗ್ಗೆ ಮತ್ತು ಸಾಯಂಕಾಲ ಹೊತ್ತು ಸೊಳ್ಳೆ ಬತ್ತಿ ಹಚ್ಚಬೇಕು. ಸೊಳ್ಳೆ ಪರದೆಯನ್ನೂ ಸುರಕ್ಷತೆಗೆ ಬಳಸಿಕೊಳ್ಳಬಹುದು. ಕೈ, ಕಾಲಿಗೆ ಸೊಳ್ಳೆ ನಿವಾರಕ ಲೋಶನ್ ಅಥವಾ ತೆಂಗಿನ ಎಣ್ಣೆ ಹಚ್ಚಿಕೊಳ್ಳಬಹುದು.
ಸಾಧ್ಯವಾದಷ್ಟು ಮೈ ತುಂಬಾ ಬಟ್ಟೆ ಧರಿಸುವುದು ಒಳ್ಳೆಯದು. ಡೆಂಗ್ಯೂ ಜ್ವರದ ಲಕ್ಷಣ ಕಂಡುಬಂದರೆ ಗಾಬರಿಯಾಗದೆ, ವೈದ್ಯರನ್ನು ಭೇಟಿ ಮಾಡಬೇಕು. ಅವರ ಸೂಚನೆಯನ್ನು ಸರಿಯಾಗಿ ಪಾಲಿಸಿದರೆ ಡೆಂಗ್ಯೂದಿಂದ ಶೀಘ್ರ ಗುಣಮುಖರಾಗಬಹುದು. ಇದೀಗ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿರುವುದರಿಂದ ತಪ್ಪದೇ ಎಚ್ಚರ ವಹಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಸೊಳ್ಳೆಗಳ ಲಾರ್ವಾಗಳು ಕೊಚ್ಚಿಕೊಂಡು ಹೋಗುತ್ತಿವೆ. ಇದರಿಂದಾಗಿ ಪ್ರತಿನಿತ್ಯ ದಾಖಲಾಗುತ್ತಿದ್ದ ಡೆಂಗ್ಯೂ ಸರಾಸರಿ ಕೇಸ್ಗಳ ಸಂಖ್ಯೆ ತಗ್ಗಿತ್ತು. ಆದರೂ ಮೊನ್ನೆ ಸುರಿದ ಮಳೆಯಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳು ಜಲಾವೃತವಾಗಿರುವುದರಿಂದ ಡೆಂಗ್ಯೂ ಬಗ್ಗೆ ಎಚ್ಚರದಿಂದ ಇರುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ. ಸಾಧ್ಯವಾದಷ್ಟು ಡೆಂಗ್ಯೂ ಜ್ವರದಿಂದ ಪಾರಾಗಲು ಎಚ್ಚರ ವಹಿಸಿ..
-
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications