ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ: ಆರೋಗ್ಯದಲ್ಲಿ ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ..!
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕವನ್ನು ಸೃಷ್ಟಿಸಿದೆ. ಅದರಲ್ಲೂ ಬೆಂಗಳೂರು ಮತ್ತು ಮೈಸೂರಿನಲ್ಲಿ ತೀವ್ರಗತಿಯಲ್ಲಿ ಹರಡುತ್ತಿರುವುದು ಜನರನ್ನು ಬೆಚ್ಚಿ ಬೀಳಿಸುವಂತೆ ಮತ್ತು ಮುನ್ನೆಚ್ಚರಿಕೆ ವಹಿಸುವಂತೆ ಮಾಡಿದೆ.
ಸಾಮಾನ್ಯವಾಗಿ ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಡೆಂಗ್ಯೂ ರೋಗ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಅದರಲ್ಲೂ ಜಿಟಿ ಜಿಟಿ ಮಳೆ ಬಂದರೆ ಸೊಳ್ಳೆಗಳ ಕಾಟ ಹೆಚ್ಚಾಗಲಿದೆ.

ಒಂದು ವೇಳೆ ಮಳೆ ರಭಸದಿಂದ ಬಂದು ಚರಂಡಿ, ಕೊಳಚೆ ತ್ಯಾಜ್ಯಗಳು ಕೊಚ್ಚಿ ಹೋಗಿ ಪರಿಸರ ಶುದ್ಧವಾದರೆ ಸೊಳ್ಳೆಗಳ ಹಾವಳಿ ಇರುವುದಿಲ್ಲ. ಇದರಿಂದ ರೋಗದ ಬಗ್ಗೆ ಭಯಪಡಬೇಕಾದ ಅಗತ್ಯವಿರುವುದಿಲ್ಲ. ಆದರೆ ಅನೈರ್ಮಲ್ಯದ ಪರಿಸರದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಕಾಣಿಸಿಕೊಳ್ಳುತ್ತದೆ ಎಂಬುದನ್ನು ಮರೆಯುವಂತಿಲ್ಲ.
ಮಳೆಗಾಲದಲ್ಲಿ ಜ್ವರ ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಜ್ವರವನ್ನು ನಿರ್ಲಕ್ಷಿಸದೆ ತಪಾಸಣೆ ಮಾಡಿ ಅದು ಯಾವ ಜ್ವರ ಎಂದು ಪತ್ತೆ ಮಾಡಿ ಚಿಕಿತ್ಸೆ ಪಡೆಯುವುದು ಬಹುಮುಖ್ಯವಾಗಿದೆ. ಏಕೆಂದರೆ ಈಗ ಬೇರೆ ಬೇರೆ ಹೆಸರಿನ ಜ್ವರಗಳು ಮನುಷ್ಯನನ್ನು ಕಾಡುತ್ತಿರುವುದು ಮಾತ್ರವಲ್ಲದೆ ಬಲಿ ತೆಗೆದುಕೊಳ್ಳುತ್ತಿದೆ. ಆದ್ದರಿಂದ ಈಗ ಕಾಣಿಸಿಕೊಳ್ಳುತ್ತಿರುವ ಡೆಂಗ್ಯೂನಿಂದ ರಕ್ಷಣೆ ಪಡೆಯಬೇಕಾದರೆ, ರೋಗ ಬಾರದಂತೆ ತಡೆಯಬೇಕಾದರೆ ಅದರ ಬಗ್ಗೆ ಒಂದಿಷ್ಟು ಮಾಹಿತಿ ತಿಳಿದುಕೊಂಡು ಅದರಿಂದ ದೂರ ಇರಲು ಬೇಕಾದ ಸುರಕ್ಷಾ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಬಹುಮುಖ್ಯವಾಗಿದೆ.
ಈಡಿಸ್ ಈಜಿಪ್ಟೆ ಸೊಳ್ಳೆಯಿಂದ ರೋಗ
ಡೆಂಗ್ಯೂ ರೋಗದ ಬಗ್ಗೆ ಹೇಳುವುದಾದರೆ ಇದು ಈಡಿಸ್ ಈಜಿಪ್ಟೆ ಸೊಳ್ಳೆಗಳಿಂದ ಹರಡುತ್ತದೆ. ಇದನ್ನು ಮೂಳೆಮುರಕ ಅಥವಾ ಬ್ರೇಕ್ಬೋನ್ ಜ್ವರವೆಂದು ಕೂಡ ಕರೆಯಲಾಗುತ್ತದೆ. ಈಡಿಸ್ ಈಜಿಪ್ಟ್ಟೆ ಎಂಬ ಸೊಳ್ಳೆ ಕಚ್ಚಿದ ಮೂರರಿಂದ ಹದಿನಾಲ್ಕು ದಿನಗಳ ನಂತರ ವ್ಯಕ್ತಿಯಲ್ಲಿ ರೋಗ ಉಲ್ಭಣವಾಗಿ ರೋಗದ ಲಕ್ಷಣಗಳು ಹೊರಗೆ ಕಾಣಿಸಿಕೊಳ್ಳುತ್ತದೆ.
ಹೆಣ್ಣು ಸೊಳ್ಳೆಯು ಸೋಂಕಿಗೆ ತುತ್ತಾಗದ ವ್ಯಕ್ತಿಯನ್ನು ಕಚ್ಚಿದಲ್ಲಿ, ಆ ಸೊಳ್ಳೆಯ ಜೊಲ್ಲಿನ ಮೂಲಕ ವೈರಸ್ ವ್ಯಕ್ತಿಯ ದೇಹವನ್ನು ಪ್ರವೇಶಿಸಿ ದೇಹದಲ್ಲಿನ ಬಿಳಿ ರಕ್ತಕಣದೊಂದಿಗೆ ಸೇರಿಕೊಂಡು, ಬಿಳಿ ರಕ್ತ ಕಣಗಳಲ್ಲಿ ದ್ವಿಗುಣಗೊಳ್ಳುತ್ತಾ ಸಾಗುತ್ತದೆ. ಈ ದ್ವಿಗುಣಗೊಳ್ಳುವಿಕೆಯು ಡೆಂಗ್ಯೂ ರೋಗದ ರೋಗ ಲಕ್ಷಣವಾಗಿರುತ್ತದೆ.
ಜ್ವರದಿಂದ ಕ್ಷೀಣವಾಗುವ ಪ್ಲೇಟ್ ಲೆಟ್
ಒಮ್ಮೆ ಈ ವೈರಸ್ಗಳ ಸಂಖ್ಯೆ ಬಿಳಿ ರಕ್ತಕಣಗಳಲ್ಲಿ ಹೆಚ್ಚಾದರೇ, ಲಿವರ್ (ಯಕೃತ್) ಮತ್ತು ಮೂಳೆಯ ಮಜ್ಜೆ (ಬೋನ್ ಮ್ಯಾರೋ) ಮುಂತಾದ ಅಂಗಾಂಶಗಳ ಕಾರ್ಯನಿರ್ವಹಣೆಯ ಮೇಲೆ ನಕಾರಾತ್ಮಕ ಪರಿಣಾಮ ಉಂಟಾಗುತ್ತದೆ. ಕೊನೆಗೆ ಇದು ದೇಹದಲ್ಲಿರುವ ಕಿರುತಟ್ಟೆಗಳ ಅಥವಾ ಕಿರುಬಿಲ್ಲೆಗಳ (ಪ್ಲೇಟ್ ಲೆಟ್) ಸಂಖ್ಯೆಯನ್ನು ಕಡಿಮೆ ಮಾಡುತ್ತಾ ಹೋಗುತ್ತದೆ. ಆಗ ಕಾಯಿಲೆ ಉಲ್ಭಣವಾಗುತ್ತಾ ಹೋಗುತ್ತದೆ.

ಈ ವೇಳೆ ಕೀಲು ನೋವು, ಸ್ನಾಯು ನೋವು, ಕೆಳಹೊಟ್ಟೆಯಲ್ಲಿ ನೋವು, ವಾಂತಿ ಅಥವಾ ಮಲದಲ್ಲಿ ರಕ್ತ, ತ್ವಚೆಯ ಮೇಲೆ ಸಣ್ಣ ಕೆಂಪು ಚುಕ್ಕೆಗಳು ಕಾಣಿಸಿಕೊಂಡು ವ್ಯಕ್ತಿಯು ಸಂಪೂರ್ಣ ಕುಸಿದು ಬಿಡುತ್ತಾನೆ. ಪದೇ ಪದೇ ಜ್ವರ ಮರುಕಳಿಸುವುದು, ಜ್ವರದ ತಾಪಮಾನವು 104ಡಿಗ್ರಿ ವರೆಗೆ ಏರುವುದು, ಮೈ-ಕೈ ನೋವು ಮತ್ತು ಸ್ನಾಯುಗಳ ಸೆಳೆತ ಎಲ್ಲವೂ ಕಾಣಿಸಿಕೊಳ್ಳುತ್ತದೆ.
ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮ ವಹಿಸಿ
ವ್ಯಕ್ತಿಯನ್ನು ಬಾಧಿಸಿರುವುದು ಡೆಂಗ್ಯೂ ಎಂಬುದು ರಕ್ತ ಪರೀಕ್ಷೆಯಿಂದ ಪತ್ತೆ ಹಚ್ಚಲಾಗುತ್ತದೆ. ಕ್ಷಣಕ್ಷಣಕ್ಕೂ ಪ್ಲೇಟ್ ಲೆಟ್ಗಳು ಕಡಿಮೆಯಾಗುವುದು ಕಂಡು ಬಂದರೆ ಅದು ಡೆಂಗ್ಯೂ ಎಂಬುದನ್ನು ಖಾತರಿಪಡಿಸುತ್ತದೆ. ಡೆಂಗ್ಯೂಗೆ ಚಿಕಿತ್ಸೆ ನೀಡಲಾಗುತ್ತದೆಯಾದರೂ ಕೆಲವೊಮ್ಮೆ ಅವಧಿ ಮೀರಿದರೆ ಜೀವಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿದೆ.
ಹೀಗಾಗಿ ಸೊಳ್ಳೆಗಳಿಂದ ದೂರ ಇರುವುದು ಮತ್ತು ಸೊಳ್ಳೆಗಳು ಉತ್ಪತ್ತಿಯಾಗದಂತಹ ಪರಿಸರ ನಿರ್ಮಾಣ ಮಾಡುವುದು, ಸೊಳ್ಳೆಗಳು ಕಚ್ಚದಂತೆ ಸೊಳ್ಳೆ ನಿವಾರಕ, ಸೊಳ್ಳೆ ಪರದೆಗಳನ್ನು ಬಳಸುವುದು ಮುಖ್ಯವಾಗಿದೆ. ಮನೆಯ ಸುತ್ತ ಚರಂಡಿ ಸೇರಿದಂತೆ ಇತರೆ ಪ್ರದೇಶಗಳಲ್ಲಿ, ಬಕೆಟ್, ಟಯರ್, ಎಳನೀರು ಚಿಪ್ಪುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.
ಗಪ್ಪಿ ಮೀನಿನಿಂದ ಸೊಳ್ಳೆ ನಾಶ ಸಾಧ್ಯ
ಸೊಳ್ಳೆಗಳನ್ನು ನಾಶ ಮಾಡಲು ಮನೆಯಲ್ಲಿ ಗಪ್ಪಿಮೀನು ಸಾಕಣೆ ಮಾಡುವುದು ಒಳ್ಳೆಯದು. ಈ ಮೀನನ್ನು ತೊಟ್ಟಿಗಳಲ್ಲಿ ಬಿಡುವುದರಿಂದಲೂ ಸೊಳ್ಳೆಗಳನ್ನು ನಾಶ ಮಾಡಬಹುದಾಗಿದೆ. ಈ ಮೀನುಗಳು ಸೊಳ್ಳೆ ಹಾಗೂ ಸೊಳ್ಳೆಯ ಮೊಟ್ಟೆಯಲ್ಲದೆ ಪಾಚಿಯನ್ನು ತಿನ್ನುವ ಗುಣವನ್ನು ಹೊಂದಿವೆ.
ಹೀಗಾಗಿ ಡೆಂಗ್ಯೂ ರೋಗಕ್ಕೆ ಕಾರಣವಾಗುವ ಈಡಿಸ್ ಈಜಿಪ್ಟೆ ಸೊಳ್ಳೆಗಳು ಮೊಟ್ಟೆಯಿಟ್ಟಾಗ ಅವುಗಳನ್ನು ತಿಂದು ನಾಶಮಾಡುತ್ತವೆ. ಇದರಿಂದ ಸೊಳ್ಳೆಗಳ ಸಂತಾನೋತ್ಪತ್ತಿ ಕಡಿಮೆಯಾಗುತ್ತದೆ. ಒಟ್ಟಾರೆಯಾಗಿ ಇವತ್ತಿನ ಪರಿಸ್ಥಿತಿಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವುದು ಅನಿವಾರ್ಯವಾಗಿದೆ. ಜತೆಗೆ ಕಾಯಿಲೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕಾಗುತ್ತದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications