ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮಳೆ
ಬೆಂಗಳೂರು, ನವೆಂಬರ್, 29: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದೆ. ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ದಕ್ಷಿಣ ಒಳನಾಡು ಭಾಗದಲ್ಲಿ ಮತ್ತೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಆಂಧ್ರ ಪ್ರದೇಶದ ಕೆಲವು ಭಾಗದಲ್ಲಿ ಭಾನುವಾರ ಮಧ್ಯಾಹ್ನ ಮಳೆಯಾಗಿದೆ. ತಮಿಳುನಾಡನ್ನು ಕೊಚ್ಚಿ ಹೋಗುವಂತೆ ಮಾಡಿದ್ದ ಅಕಾಲಿಕ ಮಳೆ ಈ ಬಾರಿ ಆಂಧ್ರ ಪ್ರದೇಶದ ಮೇಲೆ ತನ್ನ ಪ್ರತಾಪ ತೋರಲಿದೆ. ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.[ತಮಿಳುನಾಡಲ್ಲಿ ಕುಂಭದ್ರೋಣ ಮಳೆ ಆರ್ಭಟ ಹೇಗಿತ್ತು?]
ಗುಂಟೂರು, ಪ್ರಕಾಶಮ್, ನೆಲ್ಲೂರು, ಚಿತ್ತೂರ್, ಕಡಪಾ, ಅನಂತಪುರ ಮತ್ತು ಕರ್ನೂಲ್ ಭಾಗದಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.[ಗೂಗಲ್ ಮ್ಯಾಪ್ ನಲ್ಲಿ 'ಬೆಳ್ಳಂದೂರು ಲೇಕ್' ಹುಡುಕಬೇಡಿ!]
ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶದ ಮೇಲೆ ವಾಯುಭಾರ ಕುಸಿತ ಯಾವ ಪರಿಣಾಮ ಬೀರುತ್ತಿಲ್ಲ.