8 ಅಧಿಕಾರಿಗಳಿಗೆ ಮುಂಬಡ್ತಿ, 21 ಡಿವೈಎಸ್ಪಿಗಳಿಗೆ ಹಿಂಬಡ್ತಿ ಆದೇಶ
ಬೆಂಗಳೂರು, ಜು.26: ಪೊಲೀಸ್ ಇಲಾಖೆ ಪ್ರಕಟಿಸಿದ್ದ ಜ್ಯೇಷ್ಠತಾ ಪಟ್ಟಿಯಲ್ಲಿ ದೋಷಗಳಿವೆ ಎಂಬ ಕಾರಣಕ್ಕೆ 2018 ಏ.17ರಿಂದ ಅನ್ವಯವಾಗುವಂತೆ ಹೈದರಾಬಾದ್-ಕರ್ನಾಟಕೇತರ ವೃತ್ತದಲ್ಲಿ ಆಗಿದ್ದ ಹಿಂಬಡ್ತಿ-ಮುಂಬಡ್ತಿ ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ.
ಪರಿಷ್ಕೃತ ಜ್ಯೇಷ್ಠತಾ ಪಟ್ಟಿ ಅನ್ವಯ ಡಿವೈಎಸ್ಪಿ ಹುದ್ದೆಗೆ ಮುಂಬಡ್ತಿ ಹೊಂದಿದ್ದ 21 ಅಧಿಕಾರಿಗಳನ್ನು ಮತ್ತೆ ಇನ್ಸ್ಪೆಕ್ಟರ್ ಹುದ್ದೆಗೆ ಹಿಂಬಡ್ತಿಗೊಳಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಇದೇ ವೇಳೆ ಡಿವೈಎಸ್ಪಿಯಿಂದ ಇನ್ಸ್ಪೆಕ್ಟರ್ ಹುದ್ದೆಗೆ ಹಿಂಬಡ್ತಿಯಾಗಿದ್ದ 8 ಅಧಿಕಾರಿಗಳನ್ನು ಡಿವೈಎಸ್ಪಿ ಹುದ್ದೆಯಲ್ಲಿ ಮುಂದುವರೆಯಲು ಸೂಚಿಸಿದೆ.
ಈಗ ಡಿವೈಎಸ್ಪಿ ಇನ್ಸ್ಪೆಕ್ಟರ್ ಹುದ್ದೆಗೆ ಹಿಂಬಡ್ತಿಯಾಗಿರುವ 21 ಅಧಿಕಾರಿಗಳಿಗೆ ಮುಂಬಡ್ತಿ ಆಗುವ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಕ್ಕೆ ವಾಪಸ್ ನಿಯುಕ್ತಿಗೊಳಿಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಸುಪ್ರೀಂಕೋರ್ಟ್ ಎಸ್ಸಿ-ಎಸ್ಟಿ ಬಡ್ತಿ ಮೀಸಲಾತಿ ಕಾಯ್ದೆಯನ್ನು ರದ್ದುಗೊಳಿಸಿದ್ದರಿಂದ ಪೊಲೀಸ್ ಇಲಾಖೆ ಸಿದ್ಧಪಡಿಸಿದ್ದ ಜ್ಯೇಷ್ಠತಾ ಪಟ್ಟಿ ಅನ್ವಯ ಹಿಂಬಡ್ತಿ ಹಾಗೂ ಮುಂಬಡ್ತಿ ಆದೇಶ ಹೊರಡಿಸಿ ಜಾರಿಗೆ ತರಲಾಗಿತ್ತು.
ಅದೇ ರೀತಿ ಡಿವೈಎಸ್ಪಿ ಹುದ್ದೆಯಿಂದ ಹಿಂಬಡ್ತಿಯಾಗಿದ್ದ 8 ಅಧಿಕಾರಿಗಳುಅವರು ಈ ಮೊದಲು ಸೇವೆ ಸಲ್ಲಿಸುತ್ತಿದ್ದ ಸ್ಥಳದಲ್ಲೇ ಮುಂದುವರೆಯುವಂತೆ ನಿರ್ದೇಶಿಸಲಾಗಿದೆ. ಅಧಿಕಾರಿಗಳು ವರದಿ ಮಾಡಿಕೊಂಡ ಬಗ್ಗೆ ಪಾಲನಾ ವರದಿ ಸಲ್ಲಿಸುವಂತೆ ಡಿಜಿಪಿ ಆದೇಶಿಸಿದ್ದಾರೆ.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications