7ನೇ ಗ್ಯಾರಂಟಿ ಘೋಷಿಸಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ !
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳದ್ದೇ ಸದ್ದು. ಇರುವ ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಬೆಲೆ ಏರಿಕೆ ಮಾಡಲಾಗುತ್ತಿದೆ ಎನ್ನುವ ದೂರುಗಳು ಸಹ ಕೇಳಿ ಬಂದಿವೆ. ಅಲ್ಲದೇ ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕತೆ ಸುಧಾರಿಸಿದೆ ಎಂದು ಕಾಂಗ್ರೆಸ್ ಪಕ್ಷ ಹೇಳುತ್ತಿದೆ.
ಇದೀಗ ಏಳನೇ ಗ್ಯಾರಂಟಿ ಯೋಜನೆ ಇದೇ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆಯೊಂದನ್ನು ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಭೂ ಒಡೆತನವನ್ನು ಆರನೇ ಗ್ಯಾರಂಟಿಯಾಗಿ, ಏಳನೇ ಗ್ಯಾರಂಟಿಯಾಗಿ ರೈತರಿಗೆ ನೀರನ್ನು ನೀಡುತ್ತಿದ್ದೇವೆ. ಗಂಗಾ ಸ್ನಾನ ತುಂಗಾ ಪಾನ ಎನ್ನುವ ಮಾತಿದೆ. ಅಂದರೆ ತುಂಗಾನದಿ ನೀರು ಕುಡಿಯುವುದಕ್ಕೆ ಅಷ್ಟು ಪವಿತ್ರವಾದುದು. ಅಂತಹ ನೀರನ್ನು ಜನರ ಉಪಯೋಗಕ್ಕಾಗಿ ಕೆರೆಗಳಿಗೆ ಹರಿಸುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ 74 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ದಾರೆ.
ಕೆರೆಗಳಿಗೆ ನೀರು ಹರಿಸಲು 800 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಈಗಾಗಲೇ ವೆಚ್ಚ ಮಾಡಲಾಗಿದೆ. ಎಲ್ಲಾ ಕೆರೆಗಳನ್ನು ತುಂಬಿಸುವ ಸಲುವಾಗಿ ವಾರ್ಷಿಕ ವಿದ್ಯುತ್ ವೆಚ್ಚವೇ 80 ಲಕ್ಷ ರೂಪಾಯಿ ತಲುಪುತ್ತದೆ. ಸರ್ಕಾರವು ಒಂದೆರಡು ವರ್ಷ ಈ ವೆಚ್ಚವನ್ನು ಭರಿಸಬಹುದು. ಆದ ಕಾರಣಕ್ಕೆ ಎಲ್ಲಾ ಕೆರೆಗಳನ್ನು ಮೀನುಗಾರಿಕೆ ನಡೆಸಲು ಹರಾಜು ಹಾಕಬೇಕು. ಈ ಮೂಲಕ ವೆಚ್ಚವನ್ನು ಸರಿದೂಗಿಸಬೇಕು ಎಂದು ಹೇಳಿದ್ದೇನೆ. ಇದರಿಂದ ಎಲ್ಲಾ ರೈತರಿಗೆ ಅನುಕೂಲವಾಗಲಿದೆ.
ಎನ್.ಟಿ.ಬೊಮ್ಮಣ್ಣ ಹಾಗೂ ನಾನು ಬಂಗಾರಪ್ಪನವರ ಶಿಷ್ಯರು. ವಿ.ಎಸ್.ಉಗ್ರಪ್ಪ ಅವರು ಸಂಸದ ಸ್ಥಾನಕ್ಕೆ ನಿಂತಿದ್ದಾಗ ಬೊಮ್ಮಣ್ಣ ಅವರು 74 ಕೆರೆಗಳನ್ನು ತುಂಬಿಸುವಂತೆ ಮನವಿ ಮಾಡಿದ್ದರು. ನನ್ನ ಸ್ನೇಹಿತರಾದ ನಿಮ್ಮ ಕೆಲಸವನ್ನು ಖಂಡಿತವಾಗಿ ನಾನು ಮಾಡಿಕೊಡುತ್ತೇನೆ ಎಂದು ಮಾತು ಕೊಟ್ಟಿದ್ದೆ. ಅಂದು ಕೊಟ್ಟ ಮಾತು ಇಂದು ಈಡೇರಿದೆ. ತುಂಗಭದ್ರಾ ನದಿಯಿಂದ ಕೆರೆಗಳಿಗೆ ನೀರು ತುಂಬಿಸಿ 1.76 ಲಕ್ಷ ಜನರ ಬದುಕಿಗೆ ನೆರವಾಗಿದ್ದೇವೆ ಎಂದಿದ್ದಾರೆ.
ಕರುನಾಡಿನ ಜನರ ಸೇವೆಯನ್ನು ಉತ್ತಮ ಸರ್ಕಾರ ಮುನ್ನಡೆಸುತ್ತಿದೆ. ಭವಿಷ್ಯದಲ್ಲಿ ಇದಕ್ಕಿಂತ ಉತ್ತಮ ಆಡಳಿತ ನೀಡುತ್ತೇವೆ. 2028 ಕ್ಕೆ ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ನಿಮ್ಮ ಸೇವೆ ಮಾಡಲಿದೆ ಎಂದು ಅವರು ಹೇಳಿದ್ದಾರೆ.
ಏಳನೇ ಗ್ಯಾರಂಟಿಯಾಗಿ ಕೆರೆಗಳಿಗೆ ನೀರು!
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ 74 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ದೃಶ್ಯಗಳು ಎಂದು ಡಿ.ಕೆ ಶಿವಕುಮಾರ್ ಅವರು ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
ಏಳನೇ ಗ್ಯಾರಂಟಿಯಾಗಿ ಕೆರೆಗಳಿಗೆ ನೀರು!
— DK Shivakumar (@DKShivakumar) November 11, 2025
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ 74 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ದೃಶ್ಯಗಳು. pic.twitter.com/38ymBWzR5T
ಅನ್ನದಾತರ ಪರ ನಮ್ಮ ಸರ್ಕಾರ
ರಾಜ್ಯದಲ್ಲಿರುವ ಜಲಮೂಲಗಳಿಂದ ವಿವಿಧ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲು 800 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ರಾಜ್ಯ ಸರ್ಕಾರ ಖರ್ಚು ಮಾಡಿದೆ. ಕೆರೆಗಳನ್ನು ತುಂಬಿಸುವ ಮೂಲಕ ರೈತರ ಬದುಕಿನಲ್ಲಿ ಬದಲಾವಣೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ವೈರಲ್: ಇನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು 7ನೇ ಗ್ಯಾರಂಟಿಯ ಬಗ್ಗೆ ಮಾತನಾಡಿರುವುದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
-
Electric Vehicle Tax: ಎಲೆಕ್ಟ್ರಿಕ್ ಕಾರುಗಳ ಮೇಲೆ ಟ್ಯಾಕ್ಸ್ ಬೇಡ ಎಂದ ಸಂಸದ ತೇಜಸ್ವಿ ಸೂರ್ಯ, ಸಿಎಂಗೆ ಪತ್ರ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Viral: ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪಾದಚಾರಿಗಳೇ ಕಾರಣವೆಂದ ಸಂಸ್ಥಾಪಕ: ಕಿಡಿಕಾರಿದ ನೆಟ್ಟಿಗರು -
Amruthadhare Serial: ಜೈದೇವ್ ಅಟ್ಟಹಾಸಕ್ಕೆ ಬ್ರೇಕ್ ಬೇಕು: ಗೌತಮ್ ದಿವಾನ್ಗೆ ಆಕ್ಷನ್ ಕೊಡಿ ಎಂದ ವೀಕ್ಷಕರು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು












Click it and Unblock the Notifications