ಬ್ರಾಹ್ಮಣರು ಭಯ ಹುಟ್ಟಿಸುವವರು, ಕಟುಕರು, ಹಂತಕರು!
ಬೆಂಗಳೂರು, ಡಿ. 17: ಬ್ರಾಹ್ಮಣ ಸಮುದಾಯದ ಕುರಿತಾದ ಪಾಠವೊಂದು ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಅಖಿಲ ಕರ್ನಾಟಕ ಮಹಾಸಭಾ ಸರ್ಕಾರದ ಗಮನವನ್ನು ಸೆಳೆದಿದ್ದು, ಇಷ್ಟು ವರ್ಷಗಳ ಕಾಲ ಇದು ಯಾರ ಗಮನಕ್ಕೂ ಬರದೇ ಇರುವುದು ಕೂಡ ಕುತೂಹಲಕ್ಕೆ ಕಾರಣವಾಗಿದೆ. ಬ್ರಾಹ್ಮಣ ಸಮಾಜ-ಸಮುದಾಯದ ಮೇಲೆ ವಿದ್ಯಾರ್ಥಿಗಳಲ್ಲಿ ತಪ್ಪುಕಲ್ಪನೆ ಉಂಟಾಗುವಂತೆ ಬಿಂಬಿಸಿ ಪಾಠವನ್ನು ಮುದ್ರಿಸಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಮಹಾಸಭಾ ದೂರಿದೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರೂ ಕೂಡ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ವಿವರಿಸಿದ್ದಾರೆ. ಈ ಬಗ್ಗೆ ತಕ್ಷಣವೇ ಗಮನ ಹರಿಸುವುದಾಗಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಭರವಸೆ ನೀಡಿದ್ದಾರೆ. ಅಷ್ಟಕ್ಕೂ ಆ ಪಾಠದಲ್ಲಿ ಇರುವುದೇನು? ಅದಕ್ಕೆ ಸರ್ಕಾರ ಕೊಟ್ಟಿರುವ ಭರವಸೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ!

ಭಯ ಹುಟ್ಟಿಸುವ ಬ್ರಾಹ್ಮಣರು
ವಿಪ್ರ ಸಮುದಾಯ ಹಾಗೂ ಪುರೋಹಿತರು ಬಡವರನ್ನು ಸುಲಿಗೆ ಮಾಡುವವರು, ಜನರಲ್ಲಿ ಭಯ ಹುಟ್ಟಿಸುವವರು, ಹಂತಕರು ಮತ್ತು ಕಟುಕರು ಎಂಬಂತೆ ಪಠ್ಯ ಪುಸ್ತಕದಲ್ಲಿ ಅವಹೇಳನ ಮಾಡಲಾಗಿದೆ.
ಇದು ಬ್ರಾಹ್ಮಣ ಸಮುದಾಯವು ಆಕ್ರೋಶ ಗೊಳ್ಳುವಂತೆ ಮಾಡಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ದೂರಿದೆ. ಇಂತಹ ಪಾಠಗಳಿಂದ ಜಾತಿ-ಧರ್ಮದ ವಿಷಬೀಜವನ್ನು ಬಿತ್ತುವ ಶಿಕ್ಷಣ ಇಲಾಖೆಯ ಖಂಡಿಸುತ್ತದೆ ಎಂದು ಬ್ರಾಹ್ಮಣ ಮಹಾಸಭಾ ವಿರೋಧಿಸಿದೆ.

ಬ್ರಾಹ್ಮಣರ ಕುರಿತು ಅವಹೇಳನ
ಸಾರ್ವಜನಿಕ ಶಿಕ್ಷಣ ಇಲಾಖೆಯ 6ನೇ ತರಗತಿಯ ಸಮಾಜ ವಿಜ್ಞಾನ ವಿಭಾಗ-1ರ ಪಠ್ಯಪುಸ್ತಕದಲ್ಲಿ ಬ್ರಾಹ್ಮಣರ ಕುರಿತು ಶಿಕ್ಷಣ ಇಲಾಖೆಯು ಬ್ರಾಹ್ಮಣರ ಕುರಿತು ಇಂತಹ ಅವಹೇಳನಕಾರಿ ಅಂಶಗಳನ್ನು ತಕ್ಷಣ ತೆಗದು ಹಾಕಬೇಕು. ಜೊತೆಗೆ ಬ್ರಾಹ್ಮಣ ಸಮುದಾಯದ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.

ಮಂತ್ರಾಲಯ ಶ್ರೀಗಳ ಮನವಿ
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ದೂರವಾಣಿಯ ಮೂಲಕ ಬ್ರಾಹ್ಮಣ ಸಮುದಾಯದ ಭಾವನೆಗಳನ್ನು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಗಮನಕ್ಕೆ ತಂದಿದ್ದರು. ತಕ್ಷಣವೇ ಆಗಿರುವ ತಪ್ಪನ್ನು ಸರಿಪಡಿಸುವಂತೆ ಸ್ವಾಮೀಜಿಗಳು ಶಿಕ್ಷಣ ಸಚಿವರನ್ನು ಆಗ್ರಹಿಸಿದ್ದರು.
Recommended Video

ಶಿಕ್ಷಣ ಸಚಿವರ ಭರವಸೆ
ಈ ಕುರಿತು ಸ್ಪಷ್ಟನೆ ನೀಡಿರುವ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು, ನಮ್ಮ ಸರ್ಕಾರ ಬಂದ ಮೇಲೆ ಯಾವುದೇ ಪಠ್ಯಪುಸ್ತಕದ ಪರಿಷ್ಕರಣೆ ಆಗಿಲ್ಲ. ಅಥವಾ ಹೊಸ ಪಾಠ ಸೇರಿಸಿಲ್ಲ ಎಂದಿದ್ದಾರೆ. ಈ ಹಿಂದೆಯೇ ಆಗಿರುವ, ಆದರೆ ಈಗ ಬೆಳಕಿಗೆ ಬಂದಿರುವ ಈ ಪ್ರಮಾದವನ್ನು ತಕ್ಷಣ ಸರಿಪಡಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಪೂಜ್ಯ ಮಂತ್ರಾಲಯದ ಸ್ವಾಮೀಜಿಗಳಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಭರವಸೆ ನೀಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications