ಉಪನ್ಯಾಸಕರ ಪ್ರತಿರೋಧದ ನಡುವೆ ಪಿಯು ಕಾಲೇಜು ಆರಂಭ
ಬೆಂಗಳೂರು, ಮೇ.3: ಪಿಯು ಉಪನ್ಯಾಸಕರ ಪ್ರತಿಭಟನೆ, ಬೆದರಿಕೆಗೆ ಕಿವಿಗೊಡದೆ ಪದವಿಪೂರ್ವ ಶಿಕ್ಷಣ ಇಲಾಖೆಯ ಆದೇಶದಂತೆ ಬುಧವಾರದಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗಿದೆ.
ಎಂದಿನಂತೆ ಎಲ್ಲಾ ಕಾಲೇಜುಗಳಲ್ಲಿ ಉಪನ್ಯಾಸಕರು ಕಾರ್ಯ ನಿರ್ವಹಿಸಿದರು. ಮೇ.2ರಿಂದ ದ್ವಿತೀಯ ಪಿಯುಸಿ ತರಗತಿಗಳನ್ನು ಪ್ರಾರಂಭಿಸುವ ಮೂಲಕ ಉಪನ್ಯಾಸಕರಿಗೆ ಬೇಸಿಗೆ ರಜೆಯನ್ನು ಇಲಾಖೆ ಕಡಿತಗೊಳಿಸಿತ್ತು. ಇಲಾಖೆಯ ಕ್ರಮಕ್ಕೆ ರಾಜ್ಯಾದ್ಯಂತ ಉಪನ್ಯಾಸಕರು ವಿರೋಧ ವ್ಯಕ್ತಪಡಿಸಿದ್ದರು.
ಮೇ 12ರಂದು ವಿಧಾನಸಭೆ ಚುನಾವಣೆಯಿದ್ದು,ಮೇ 15ಕ್ಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ಕಾರ್ಯಗಳಿಗೆ ಉಪನ್ಯಾಸಕರನ್ನು ಸಹ ನಿಯೋಜನೆ ಮಾಡುವುದರಿಂದ ತೀವ್ರ ತೊಂದರೆ ಉಂಟಾಗಲಿದೆ. ಆದ್ದರಿಂದ ಚುನಾವಣಾ ಫಲಿತಾಂಶ ಬಂದ ನಂತರ ದ್ವಿತೀಯ ಪಿಯುಸಿ ತರಗತಿಗಳನ್ನು ಪ್ರಾರಂಭಿಸುವಂತೆ ಒತ್ತಡ ಹಾಕಿದ್ದರು.

ಆದರೆ ಉಪನ್ಯಾಸಕರ ಒತ್ತಡಕ್ಕೆ ಬಗ್ಗದ ಇಲಾಖೆಯ ನಿರ್ದೇಶಕಿ ಸಿ. ಶಿಖಾ, ಮೇ.2 ರಂದು ಕಡ್ಡಾಯವಾಗಿ ಉಪನ್ಯಾಸಕರು ತರಗತಿಗಳಿಗೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಿದ್ದರು. ಜತೆಗೆ ಗೈರು ಹಾಜರಾದವರ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆಯನ್ನು ನೀಡಿದ್ದರು.
ಚುನಾವಣೆ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ತರಗತಿಗಳು ಫೆ.21 ರಂದೇ ಕೊನೆಗೊಂಡಿದ್ದು 69 ದಿನ ರಜೆಗಳು ದೊರೆತಿದೆ. ಜೂನ್ 1 ರಿಂದ ತರಗತಿಗಳು ಪ್ರಾರಂಭವಾದರೆ 100 ದಿನ ರಜೆ ಸಿಕ್ಕಂತಾಗುತ್ತದೆ ಇದರಿಂದ ವಿದ್ಯಾರ್ಥಿಗಳಿಗೆ, ಪಾಠ, ಪ್ರವಚನಕ್ಕೆ ಅಡಚಣೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಇಲಾಖೆ ಕಚೇರಿಗೆ ಮುತ್ತಿಗೆ: ಪದವಿಪೂರ್ವ ಶಿಕ್ಷಣ ಒಲಾಖೆಯು ಉಪನ್ಯಾಸಕರ ಬೇಸಿಗೆ ರಜೆಯನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ಗುರುವಾರ ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications