ಉಪನ್ಯಾಸಕರ ಪ್ರತಿರೋಧದ ನಡುವೆ ಪಿಯು ಕಾಲೇಜು ಆರಂಭ
ಬೆಂಗಳೂರು, ಮೇ.3: ಪಿಯು ಉಪನ್ಯಾಸಕರ ಪ್ರತಿಭಟನೆ, ಬೆದರಿಕೆಗೆ ಕಿವಿಗೊಡದೆ ಪದವಿಪೂರ್ವ ಶಿಕ್ಷಣ ಇಲಾಖೆಯ ಆದೇಶದಂತೆ ಬುಧವಾರದಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗಿದೆ.
ಎಂದಿನಂತೆ ಎಲ್ಲಾ ಕಾಲೇಜುಗಳಲ್ಲಿ ಉಪನ್ಯಾಸಕರು ಕಾರ್ಯ ನಿರ್ವಹಿಸಿದರು. ಮೇ.2ರಿಂದ ದ್ವಿತೀಯ ಪಿಯುಸಿ ತರಗತಿಗಳನ್ನು ಪ್ರಾರಂಭಿಸುವ ಮೂಲಕ ಉಪನ್ಯಾಸಕರಿಗೆ ಬೇಸಿಗೆ ರಜೆಯನ್ನು ಇಲಾಖೆ ಕಡಿತಗೊಳಿಸಿತ್ತು. ಇಲಾಖೆಯ ಕ್ರಮಕ್ಕೆ ರಾಜ್ಯಾದ್ಯಂತ ಉಪನ್ಯಾಸಕರು ವಿರೋಧ ವ್ಯಕ್ತಪಡಿಸಿದ್ದರು.
ಮೇ 12ರಂದು ವಿಧಾನಸಭೆ ಚುನಾವಣೆಯಿದ್ದು,ಮೇ 15ಕ್ಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ಕಾರ್ಯಗಳಿಗೆ ಉಪನ್ಯಾಸಕರನ್ನು ಸಹ ನಿಯೋಜನೆ ಮಾಡುವುದರಿಂದ ತೀವ್ರ ತೊಂದರೆ ಉಂಟಾಗಲಿದೆ. ಆದ್ದರಿಂದ ಚುನಾವಣಾ ಫಲಿತಾಂಶ ಬಂದ ನಂತರ ದ್ವಿತೀಯ ಪಿಯುಸಿ ತರಗತಿಗಳನ್ನು ಪ್ರಾರಂಭಿಸುವಂತೆ ಒತ್ತಡ ಹಾಕಿದ್ದರು.

ಆದರೆ ಉಪನ್ಯಾಸಕರ ಒತ್ತಡಕ್ಕೆ ಬಗ್ಗದ ಇಲಾಖೆಯ ನಿರ್ದೇಶಕಿ ಸಿ. ಶಿಖಾ, ಮೇ.2 ರಂದು ಕಡ್ಡಾಯವಾಗಿ ಉಪನ್ಯಾಸಕರು ತರಗತಿಗಳಿಗೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಿದ್ದರು. ಜತೆಗೆ ಗೈರು ಹಾಜರಾದವರ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆಯನ್ನು ನೀಡಿದ್ದರು.
ಚುನಾವಣೆ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ತರಗತಿಗಳು ಫೆ.21 ರಂದೇ ಕೊನೆಗೊಂಡಿದ್ದು 69 ದಿನ ರಜೆಗಳು ದೊರೆತಿದೆ. ಜೂನ್ 1 ರಿಂದ ತರಗತಿಗಳು ಪ್ರಾರಂಭವಾದರೆ 100 ದಿನ ರಜೆ ಸಿಕ್ಕಂತಾಗುತ್ತದೆ ಇದರಿಂದ ವಿದ್ಯಾರ್ಥಿಗಳಿಗೆ, ಪಾಠ, ಪ್ರವಚನಕ್ಕೆ ಅಡಚಣೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಇಲಾಖೆ ಕಚೇರಿಗೆ ಮುತ್ತಿಗೆ: ಪದವಿಪೂರ್ವ ಶಿಕ್ಷಣ ಒಲಾಖೆಯು ಉಪನ್ಯಾಸಕರ ಬೇಸಿಗೆ ರಜೆಯನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ಗುರುವಾರ ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications