ಬೀದರ್, ದೇವದುರ್ಗ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕು
ಬೆಂಗಳೂರು, ನವೆಂಬರ್ 18 : ಇಬ್ಬರು ಶಾಸಕರ ಅಕಾಲಿಕ ಮರಣದಿಂದಾಗಿ ಕರ್ನಾಟಕ ವಿಧಾನಸಭೆಯ ಎರಡು ಕ್ಷೇತ್ರಗಳು ತೆರವಾಗಿದ್ದು, ಉಪ ಚುನಾವಣೆ ನಡೆಯಬೇಕಾಗಿದೆ. 2016ರ ಜನವರಿ 6ರೊಳಗೆ ಮೇಲ್ಮನೆಯ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ನಂತರ ಉಪ ಚುನಾವಣೆ ನಡಯುವ ಸಾಧ್ಯತೆ ಇದೆ.
ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದು ಮೂರು ವರ್ಷಗಳು ಪೂರ್ಣಗೊಳ್ಳವ ಮುನ್ನವೇ ಉಪ ಚುನಾವಣೆ ಎದುರಾಗಿದೆ. ಬೀದರ್ ಮತ್ತು ದೇವದುರ್ಗ ಕ್ಷೇತ್ರಗಳ ಜನಪ್ರತಿನಿಧಿಗಳ ಆಯ್ಕೆಯಾಗಿ ಉಪ ಚುನಾವಣೆ ನಡೆಯಬೇಕಿದೆ. [2013ರ ಚುನಾವಣೆ ಗೆದ್ದವರು, ಸೋತವರು]

ಆಂಧ್ರಪ್ರದೇಶದ ಮಡಕಶಿರ ಬಳಿ 2015 ಆಗಸ್ಟ್ 24ರಂದು ನಡೆದ ರೈಲ್ವೆ ಅಪಘಾತದಲ್ಲಿ ದೇವದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ವೆಂಕಟೇಶ ನಾಯಕ್ ಅವರು ಮೃತಪಟ್ಟಿದ್ದಾರೆ. ಆದ್ದರಿಂದ, ಕ್ಷೇತ್ರದಲ್ಲಿ ಜನಪ್ರತಿನಿಧಿಗಳಿಲ್ಲ. [ದೇವದುರ್ಗ ಶಾಸಕ ವೆಂಕಟೇಶ ನಾಯಕ್ ಸಾವು]
ನವೆಂಬರ್ 17ರ ಮಂಗಳವಾರ ಬೀದರ್ ಕ್ಷೇತ್ರದ ಬಿಜೆಪಿ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದರಿಂದಾಗಿ ಕ್ಷೇತ್ರ ಖಾಲಿಯಾಗಿದೆ. [ಗುರುಪಾದಪ್ಪ ನಾಗಮಾರಪಲ್ಲಿ ವಿಧಿವಶ]
ಸಂಖ್ಯಾಬಲ ಕುಸಿತ : ಒಬ್ಬರು ಕಾಂಗ್ರೆಸ್ ಮತ್ತು ಒಬ್ಬರು ಬಿಜೆಪಿ ಶಾಸಕರ ಅಕಾಲಿಕ ಮರಣದಿಂದಾಗಿ ವಿಧಾನಸಭೆಯಲ್ಲಿ ಸಂಖ್ಯಾಬಲ ಕುಸಿತಗೊಂಡಿದೆ. ಕಾಂಗ್ರೆಸ್ 122 ಮತ್ತು ಬಿಜೆಪಿ 44 ಸದಸ್ಯ ಬಲ ಹೊಂದಿತ್ತು. ಸದ್ಯ, ಕಾಂಗ್ರೆಸ್ 121 ಮತ್ತು ಬಿಜೆಪಿ 43 ಸದಸ್ಯ ಬಲ ಹೊಂದಿದೆ.
ಯಾವಾಗ ಚುನಾವಣೆ? : 2016ರ ಜನವರಿ 6ರೊಳಗೆ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ. ಅದಕ್ಕೂ ಮೊದಲೇ ಎರಡು ಕ್ಷೇತ್ರಗಳ ಚುನಾವಣೆ ಘೋಷಣೆಯಾಗುತ್ತದೆಯೇ? ಅಥವ ನಂತರ ನಡೆಯಲಿದೆಯೇ? ಎಂಬುದು ಸದ್ಯದ ಪಶ್ನೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications