5 ಲಕ್ಷ ಲಂಚ ಕೇಳಿದ್ದ ದೇವನಹಳ್ಳಿ ತಹಶೀಲ್ದಾರ್ ಅಮಾನತು
ಬೆಂಗಳೂರು, ನವೆಂಬರ್ 21 : ದೇವನಹಳ್ಳಿ ತಹಶೀಲ್ದಾರ್ ನಾರಾಯಣಸ್ವಾಮಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆರ್ಟಿಸಿ ವರ್ಗಾವಣೆ ಮಾಡಲು ಲಂಚ ಕೇಳಿದ್ದ ಶಹಶೀಲ್ದಾರ್ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿತ್ತು.
ನಾರಾಯಣಸ್ವಾಮಿ ಲಂಚ ಕೇಳಿದ್ದಾರೆ ಎಂದು ಉಮೇಶ್ ಎಂಬುವವರು ದೂರು ನೀಡಿದ್ದರು. ಸರ್ಕಾರ ಈ ಬಗ್ಗೆ ತನಿಖೆ ನಡೆಸುವಂತೆ ಎಸಿಬಿಗೆ ಸೂಚನೆ ನೀಡಿತ್ತು. ಎಫ್ಐಆರ್ ದಾಖಲು ಮಾಡಿದ್ದ ಎಸಿಬಿ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.

ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಎಸಿಬಿ ವರದಿಯ ಅನ್ವಯ ತಹಶೀಲ್ದಾರ್ ನಾರಾಯಣಸ್ವಾಮಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಏನಿದು ಪ್ರಕರಣ? : ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದ ಸರ್ವೆ ನಂ 12ರ 4 ಎಕರೆ 10 ಗುಂಟೆ ಜಮೀನಿನಲ್ಲಿ ಉಮೇಶ್ ಎಂಬುವವರು 2 ಎಕರೆ ನಮ್ಮ ಪಿತ್ರಾರ್ಜಿತ ಆಸ್ತಿ ಎಂದು ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದರು.
ಅರ್ಜಿಯನ್ನು ಪರಿಗಣಿಸಿದ ಜಿಲ್ಲಾಧಿಕಾರಿಗಳು ಪ್ರಕರಣದ ತನಿಖೆ ನಡೆಸಿ ಕ್ರಮ ಕೈಗೊಳ್ಳಿ ಎಂದು ದೇವನಹಳ್ಳಿ ತಹಶೀಲ್ದಾರ್ ನಾರಾಯಣಸ್ವಾಮಿ ಅವರಿಗೆ ಕಳುಹಿಸಿದ್ದರು. ನಾರಾಯಣಸ್ವಾಮಿ ಅವರು ಆರ್ಟಿಸಿ ಮಾಡಿಕೊಡುವುದಕ್ಕೆ 5 ಲಕ್ಷ ರೂ. ಲಂಚ ಕೇಳಿದ್ದರು.












Click it and Unblock the Notifications