ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ಸಿಎಂ ಆಗಲೆಂದು ತಲೆ ಬೋಳಿಸಿಕೊಂಡು ಹರಕೆ ಹೊತ್ತ ಯುವಕರು!

By ಒನ್ಇಂಡಿಯಾ ಪ್ರತಿನಿಧಿ
|
Google Oneindia Kannada News

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ), ಏಪ್ರಿಲ್ 23 : ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕು ಎಂದು ಹರಕೆ ಹೊತ್ತು, ಯುವಕರು ತಲೆ ಬೋಳಿಸಿಕೊಂಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಬಳಿ ಸಿದ್ದರಾಮಯ್ಯ ಅಭಿಮಾನಿ ಕಾರ್ಯಕರ್ತರು ನೆರೆದು, ತಮ್ಮ ತಲೆ ಬೋಳಿಸಿಕೊಂಡು ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಪರಿಶಿಷ್ಟರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲಾ ಜಾತಿ, ಪಂಗಡಗಳ ಅಭಿವೃದ್ಧಿಗೆ ಶ್ರಮಿಸಿದ ಸಿದ್ದರಾಮಯ್ಯ ಜನತೆಯ ಆಶೋತ್ತರಗಳಿಗೆ ಸ್ಪಂದಿಸಿ, ಹೆಚ್ಚಿನ ಅನುದಾನಗಳನ್ನು ಬಿಡುಗಡೆ ಮಾಡಿ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ. ಟೀಕಿಸಲು ಯಾವುದೇ ವಿಷಯಗಳು ಇಲ್ಲದಿದ್ದರೂ ಬಿಜೆಪಿಯು ಮತದಾರರ ದಿಕ್ಕು ತಪ್ಪಿಸುತ್ತಿದೆ ಎಂದು ದೂರಿದ ಅಭಿಮಾನಿಗಳು, ಸಿದ್ದರಾಮಯ್ಯ ಗೆಲುವಿಗಾಗಿ ಶ್ರಮಿಸುವುದಾಗಿ ಹೇಳಿದರು.

Devanahalli youths shaved their head and offer prayer to God for Siddaramaiah

ತಲೆ ಬೋಳಿಸಿಕೊಂಡು ವಿನೂತನವಾಗಿ ಪ್ರಚಾರ ಕೈಗೊಂಡ ಯುವಕರಿಗೆ ಇದೇ ವೇಳೆ ಶುಭ ಹಾರೈಸಲಾಯಿತು.

English summary
Karnataka Assembly Elections 2018: Siddaramaiah to again become chief minister of Karnataka Bengaluru rural district, Devanahalli taluk youths shaved their head and offer their prayer to god.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X