ವಿಜಯದಶಮಿಯಂದು ದೇವರಗುಡ್ಡದಲ್ಲಿ ನಾಗಪ್ಪಜ್ಜ ಉರ್ಮಿ ನುಡಿದ ಭವಿಷ್ಯ
ದೇವರಗುಡ್ಡದ ಮಾಲತೇಶಸ್ವಾಮಿ ದೇವಾಲಯದಲ್ಲಿ ಕಾರ್ಣಿಕ ನುಡಿದ ನಾಗಪ್ಪಜ್ಜ ಉರ್ಮಿ, 'ನಂದಿ ಗಾಬಾದಿತಲೇ..ಪರಾಕ್' ಎಂದು ನುಡಿದಿದ್ದಾರೆ. ರಾಣೆಬೆನ್ನೂರು ಪಟ್ಟಣದಿಂದ ಹತ್ತು ಕಿಲೋಮೀಟರ್ ದೂರದಲ್ಲಿರುವ ಮಾಲತೇಶಸ್ವಾಮಿ ದೇವಾಲಯ.
ಹೂವಿನಹಡಗಲಿಯಲ್ಲಿರುವ ಮೈಲಾರ ಲಿಂಗೇಶ್ವರ ಮತ್ತು ರಾಣೆಬೆನ್ನೂರಿನಲ್ಲಿರುವ ದೇವರಗುಡ್ಡದ ಮಾಲತೇಶ ಸ್ವಾಮಿ ಸನ್ನಿಧಾನದಲ್ಲಿ ವರ್ಷಕ್ಕೊಮ್ಮೆ ಕಾರ್ಣಿಕ ನುಡಿಯುವ ಪದ್ದತಿ ತುಂಬಾ ದಿನದಿಂದ ನಡೆದುಕೊಂಡು ಬರುತ್ತಿದೆ.
ಅದರಂತೇ, ಫೆಬ್ರವರಿ ತಿಂಗಳಿನಲ್ಲಿನ ಭಾರತ ಹುಣ್ಣಿಮೆಯ ದಿನದಂದು ಮೈಲಾರದಲ್ಲಿ ಗೊರವಪ್ಪ ಭವಿಷ್ಯ ನುಡಿದಿದ್ದರು. ಇದಾದ ಮೇಲೆ ಎರಡು ದಿನದ ಹಿಂದೆ ವಿಜಯದಶಮಿಯ ಪ್ರಯುಕ್ತ ಶುಕ್ರವಾರ (ಸೆ 29) ದೇವರಗುಡ್ಡದಲ್ಲಿ ನಾಗಪ್ಪಜ್ಜ ಉರ್ಮಿ ಕಾರ್ಣಿಕ ನುಡಿದಿದ್ದಾರೆ.
ನವರಾತ್ರಿಯ ಒಂಬತ್ತು ದಿನ ಕಟ್ಟುನಿಟ್ಟಿನ ಉಪವಾಸದಲ್ಲಿದ್ದು ನಂತರ ವಿಜಯದಶಮಿ ಪ್ರಯುಕ್ತ ಒಂಬತ್ತನೇ ದಿನ 25 ಅಡಿಯ ಬಿಲ್ಲನ್ನೇರಿ ಮೈಲಾರದಲ್ಲಿ ಮತ್ತು ದೇವರಗುಡ್ಡದಲ್ಲಿ ನುಡಿಯುವ ಭವಿಷ್ಯವನ್ನು ಕೇಳಲೆಂದೇ ಲಕ್ಷಾಂತರ ಜನ ಭಾಗವಹಿಸುತ್ತಾರೆ.
ದಸರಾ ಹಬ್ಬದ ವೇಳೆ ಕೋಡಿಮಠದ ಶ್ರೀಗಳು ಭವಿಷ್ಯ ನುಡಿಯುವ ಪದ್ದತಿಯಿದೆ. ಆಯುಧಪೂಜೆಯ ದಿನದಂದು ಭವಿಷ್ಯ ನುಡಿದಿದ್ದ ಕೋಡಿಶ್ರೀಗಳು, ದೇಶ ಕಂಡ ಮಹಾನ್ ನಾಯಕ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸಾವಿನ ದುರ್ಘಟನೆಯನ್ನು ನೆನಪಿಸುವ ಸಾವೊಂದು ಸಂಭವಿಸಲಿದೆ ಎಂದು ಹೇಳಿದ್ದರು.
ದೇವರಗುಡ್ಡದ ಮಾಲತೇಶಸ್ವಾಮಿ ದೇವಾಲಯದಲ್ಲಿ ಕಾರ್ಣಿಕ ನುಡಿದ ನಾಗಪ್ಪಜ್ಜ ಉರ್ಮಿ, 'ನಂದಿ ಗಾಬಾದಿತಲೇ..ಪರಾಕ್' ಎಂದು ನುಡಿದು 25 ಅಡಿ ಬಿಲ್ಲಿನಿಂದ ಕೆಳಕ್ಕೆ ಹಾರಿದ್ದಾರೆ. ಇದು ಈ ವರ್ಷದ ಎರಡನೇ ಕಾರ್ಣಿಕ ದೇವವಾಣಿ ಎಂದು ಭಕ್ತರು ನಂಬುತ್ತಾರೆ.

ಐತಿಹಾಸಿಕ ಇತಿಹಾಸವುಳ್ಳ ಮಾಲತೇಶ ಸ್ವಾಮಿ ದೇವಾಲಯ
ಐತಿಹಾಸಿಕ ಇತಿಹಾಸವುಳ್ಳ ಹಾವೇರಿ ಜಿಲ್ಲೆ, ರಾಣೆಬೆನ್ನೂರು ತಾಲೂಕಿನ ದೇವರಗುಡ್ದದ ಮಾಲತೇಶ ಸ್ವಾಮಿ ದೇವಾಲಯ, ರಾಣೆಬೆನ್ನೂರು ಪಟ್ಟಣದಿಂದ ಹತ್ತು ಕಿಲೋಮೀಟರ್ ದೂರದಲ್ಲಿದೆ. ಶನಿವಾರ, ಭಾನುವಾರ, ಹುಣ್ಣಿಮೆ ಮತ್ತು ದಸರಾ ದಿನದಂದು ಮಾತ್ರ ಇಲ್ಲಿ ವಿಶೇಷ ಪೂಜೆ ನಡೆಸಲಾಗುತ್ತದೆ. ದೇವಾಲಯದ ಆವರಣದಲ್ಲಿರುವ ಹತ್ತಾರು ಗೊರಪ್ಪನವರು 'ಏಳು ಕೋಟಿ.. ಏಳು ಕೋಟಿ.. ಚಂಗಮಲೋ.. ಚಂಗಮಲೋ' ಎಂದು ಉದ್ಘರಿಸುತ್ತಿರುತ್ತಾರೆ.

ಕೋಡಿಮಠದ ಶ್ರೀಗಳು ನುಡಿದಿದ್ದ ಭವಿಷ್ಯ
'ನಾನು ಆಗ ಚೋಟುಗೇಣಿನ ವೀರ. ಭಾರತದ ಕುವರ ತಕ್ಕಡಿಯ ಊರಿನಲ್ಲಿ ವಿಷ ಪಾನ' ಎಂದು ಹೇಳಿದ್ದನ್ನು ಸ್ಮರಿಸಿಕೊಂಡ ಕೋಡಿಮಠದ ಶ್ರೀಗಳು, ನಾಯಕರೊಬ್ಬರ ಅಕಾಲಿಕ ಸಾವು, ಜನವರಿ ತಿಂಗಳಿನವರೆಗೆ ಅಕಾಲಿಕ ಮಳೆ ಮುಂದುವರೆಯಲಿದೆ ಎಂದು ಮೊನ್ನೆ ಮೊನ್ನೆ ಭವಿಷ್ಯ ನುಡಿದಿದ್ದರು.

ಅಂಬಲಿ ಹಳಸೀತು ಕಂಬಳಿ ಬೀಸಿತಲೇ ಪರಾಕ್
ಕಳೆದ ಫೆಬ್ರವರಿ ತಿಂಗಳಲ್ಲಿ ಮೈಲಾರ ಲಿಂಗೇಶ್ವರ ಸನ್ನಿಧಾನದಲ್ಲಿ ' ಅಂಬಲಿ ಹಳಸೀತು ಕಂಬಳಿ ಬೀಸಿತಲೇ ಪರಾಕ್' ಎಂದು ಗೊರವಪ್ಪ ಭವಿಷ್ಯ ನುಡಿದಿದ್ದರು. ಅದರರ್ಥ, ಗಲಾಟೆ, ಯುದ್ದದ ಭೀತಿ ದೇಶಕ್ಕೆ ಎದುರಾಗಲಿದೆ ಎಂದು ಅಲ್ಲಿದ್ದ ಹಿರಿಯರು ಅರ್ಥೈಸಿಕೊಂಡಿದ್ದರು.

'ನಂದಿ ಗಾಬಾದಿತಲೇ..ಪರಾಕ್ ಎನ್ನುವ ಕಾರ್ಣಿಕ ನುಡಿ
ದೇವರಗುಡ್ಡದಲ್ಲಿ 'ನಂದಿ ಗಾಬಾದಿತಲೇ..ಪರಾಕ್' ಎನ್ನುವ ಭವಿಷ್ಯವಾಣಿ ವಿಶ್ಲೇಷಣೆಗೊಂಡಿದ್ದು ಹೀಗೆ, ಅತಿವೃಷ್ಟಿಯಾಗಲಿ, ಅನಾವೃಷ್ಟಿಯಾಗಲಿ ಜಾನುವಾರುಗಳಿಗೆ ಸಂಕಷ್ಟ, ರೋಗರುಜಿನದ ಭಯ, ರೈತರಲ್ಲಿ ಗಾಭರಿ ಉಂಟಾಗಲಿದೆ ಎಂದು ವಿಶ್ಲೇಷಿಸಲಾಗಿದೆ. (ಚಿತ್ರ: ಮೈಲಾರದ ಕಾರ್ಣಿಕ ಉತ್ಸವ)

ಇಪ್ಪತ್ತೈದು ಅಡಿ ಬಿಲ್ಲನ್ನೇರಿ ನುಡಿಯುವ ಭವಿಷ್ಯ
ಈ ಕಾರ್ಣಿಕ ಕೇಳಲು ಬರುವ ಲಕ್ಷಾಂತರ ಭಕ್ತಾದಿಗಳನ್ನು ಒಮ್ಮೆ ದಿಟ್ಟಿಸಿ ನೋಡಿ, ಇಪ್ಪತ್ತೈದು ಅಡಿ ಬಿಲ್ಲನ್ನೇರಿ, ಜಗತ್ತಿನ ಮುಂದಿನ ಆಗುಹೋಗಿನ ಬಗ್ಗೆ ದೇವವಾಣಿ ನುಡಿಯುವ ಪದ್ದತಿ ದಶಕಗಳಿಂದಲೂ ನಡೆದುಕೊಂಡು ಬರುತ್ತಿದೆ. ಜೊತೆಗೆ, ಉತ್ತರಕರ್ನಾಟಕದ ಭಾಗದಲ್ಲಿ ಇದಕ್ಕೆ ಭಾರೀ ಮಹತ್ವವಿದೆ. (ಚಿತ್ರ: ಮೈಲಾರದ ಕಾರ್ಣಿಕ ಉತ್ಸವ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications