ದೇವರಾಯನದುರ್ಗ ಜಾತ್ರೆ: ಮಾ.3ರ ಮಧ್ಯಾಹ್ನವೇ ಅದ್ಧೂರಿ ರಥೋತ್ಸವ, ಗ್ರಹಣ ಪ್ರಭಾವದಿಂದ ತೇರು ಸಾಗದೆಂಬ ಚರ್ಚೆ
ತುಮಕೂರು: ತಾಲೂಕಿನ ಸುಪ್ರಸಿದ್ಧ ಯಾತ್ರೆ ಸ್ಥಳ ದೇವರಾಯನದುರ್ಗದಲ್ಲಿ ಜಾತ್ರಾ ಮಹೋತ್ಸವದ ಸಂಭ್ರಮ, ಸಡಗರ ಮನೆ ಮಾಡಿದೆ. ಈಗಾಗಲೇ ಜಾತ್ರೆಯ ಆಚರಣೆಗಳು ಶುರುವಾಗಿವೆ. ಶ್ರೀ ಯೋಗ ಮತ್ತು ಭೋಗ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯಗಳಲ್ಲಿ ದೇವಸ್ಥಾನ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ. ಧ್ವಜಾರೋಹಣ ನೆರವೇರಿಸುವ ಮೂಲಕ ದೇವಸ್ಥಾನ ಸಮಿತಿ ಹಾಗೂ ಊರ ಭಕ್ತರು ಜಾತ್ರೆಯ ಆರಂಭಕ್ಕೆ ಸಾಕ್ಷಿಯಾದರು. ಈ ಬಾರಿ ಚಂದ್ರಗ್ರಹಣ ಇರುವ ದಿವಸವೇ ದೇವಸ್ಥಾನ ರಥೋತ್ಸವ ಜರುಗಲಿದೆ.
ಅಂಕುರಾರ್ಪಣ ನೆರವೇರಿಸುವ ಮೂಲಕ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ಸಂಜೆ ಚಾಲನೆ ನೀಡಲಾಯಿತು. ಆಗಮಿಕರಾದ ವಾಸುದೇವ ಭಟ್ಟರ್ ಹಾಗೂ ಪ್ರಧಾನ ಅರ್ಚಕರಾದ ವೆಂಕಟರಾಜ ಭಟ್ಟರ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಈಗಾಗಲೇ ನೆರವೇರುತ್ತಿವೆ. ಮಾರ್ಚ್ 3ರಂದು ಅದ್ಧೂರಿ ರಥೋತ್ಸವ ನಡೆಯಲಿದೆ.

ಈ ಬಾರಿ ಹುಣ್ಣಿಮೆಯ ದಿನವೇ ಚಂದ್ರಗ್ರಹಣ ಇರುವುದರಿಂದ ಮಧ್ಯಾಹ್ನ 11 ಗಂಟೆ ವೇಳೆಗೆ ರಥೋತ್ಸವ ನಡೆಸಲು ದೇವಸ್ಥಾನ ಆಡಳಿತ ಮಂಡಳಿ, ಗ್ರಾಮದ ಭಕ್ತರು ತೀರ್ಮಾನಿಸಿದ್ದಾರೆ. ಇಲ್ಲಿ ಮತ್ತೊಂದು ವಿಶೇಷವೆಂದರೆ ಚಂದ್ರಗ್ರಹಣಕ್ಕೂ ಮೊದಲೇ ರಥೋತ್ಸವ ಹಮ್ಮಿಕೊಂಡರು ಸಹಿತ ಗ್ರಹಣದ ಪ್ರಭಾವದಿಂದ 'ತೇರು' ಸಾಗದೇ ನಿಲ್ಲಲಿದೆ ಎನ್ನಲಾಗುತ್ತಿದೆ. ಹೀಗಾಗಿ ಈ ಬಾರಿ ರಥೋತ್ಸವ ಮತ್ತಷ್ಟು ಮಹತ್ವ ಪಡೆದುಕೊಳ್ಳಲಿದ್ದು, ಅದನ್ನು ನೋಡಲು ಅಪಾರ ಭಕ್ತರು ಸೇರುವ ನಿರೀಕ್ಷೆ ಇದೆ.
ಸಂತಾನ ಪ್ರಾಪ್ತಿಗಾಗಿ ಗರುಡಬುತ್ತಿ ಪ್ರಸಾದ
ಜಾತ್ರಾ ಮಹೋತ್ಸವದ ಎರಡನೇ ದಿನವಾದ ಇಂದು ಭಾನುವಾರ ಗರುಡ ದೋಷದಿಂದ ಮಕ್ಕಳಾಗದ ದಂಪತಿಗಳಿಗೆ ಸಂತಾನ ಪ್ರಾಪ್ತಿಗಾಗಿ 'ಗರುಡಬುತ್ತಿ' ನೀಡಲಾಗುತ್ತದೆ. ಸಂಜೆ ಬೆಟ್ಟದ ಮೇಲಿರುವ ಶ್ರೀ ಯೋಗಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ನೇರವೇರಲಿದ್ದು, ಈ ವೇಳೆ ಪ್ರಸಾದ ರೂಪದಲ್ಲಿ 'ಗರುಡಬುತ್ತಿ' ನೀಡಲಾಗುತ್ತದೆ, ಪ್ರತಿ ವರ್ಷ ಜಾತ್ರಾ ಮಹೋತ್ಸವದ ಧ್ವಜಾರೋಹಣ ಹಾಗೂ ಧ್ವಜಾವರೋಹಣ ಸಂದರ್ಭದಲ್ಲಿ ಗರುಡಬುತ್ತಿ ನೀಡಲಾಗುತ್ತದೆ. ಇಲ್ಲಿ ಪ್ರಸಾದ ಸ್ವೀಕರಿಸಿದ ಅನೇಕ ಭಕ್ತರು ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಅನೇಕ ದಂಪತಿಗಳು ಇಲ್ಲಿನ ಬುತ್ತಿ ಸವಿದು ಸಂತಾನ ಪಡೆದಿರುವ ಐತಿಹಾಸಕ ಘಟನೆಗಳು ಸಾಕಷ್ಟಿವೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications