ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ದೇವೇಗೌಡರ ಹಸಿರು ನಿಶಾನೆ?

|
Google Oneindia Kannada News

ಮಂಗಳೂರು, ಮಾರ್ಚ್ 03 : 'ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡುವುದಾದರೆ ಮಾಡಲಿ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಬರುವುದಕ್ಕೆ ದೇವೇಗೌಡರ ಒಪ್ಪಿಗೆ ಸಿಕ್ಕಿತೇ ಎಂಬ ಪ್ರಶ್ನೆ ಈಗ ಹುಟ್ಟಿಕೊಂಡಿದೆ.

ಭಾನುವಾರ ಮಂಗಳೂರಿನಲ್ಲಿ ಮಾತನಾಡಿದ ದೇವೇಗೌಡರು, 'ನಿಖಿಲ್ ಚುನಾವಣೆಗೆ ನಿಲ್ಲುತ್ತೇನೆ ಎಂದಿದ್ದರು. ತಾತನಿಗೆ ಪ್ರಜ್ವಲ್ ಬಗ್ಗೆ ಮಾತ್ರ ಆಸಕ್ತಿ ಇದೆ ಎಂದು ಜನರು ಹೇಳುವಂತಾಗಬಾರದು. ಅದಕ್ಕೆ ನಿಖಿಲ್‌ಗೂ ಅವಕಾಶ ಕೊಡಲು ನಿರ್ಧಾರ ಮಾಡಿದ್ದೇವೆ' ಎಂದು ಹೇಳಿದರು.

ನಿಖಿಲ್ ಕುಮಾರಸ್ವಾಮಿ ಮೈಸೂರಿಂದ ಸ್ಪರ್ಧೆ? ಎಚ್‌ಡಿಕೆ ಲೆಕ್ಕಾಚಾರವೇನು? ನಿಖಿಲ್ ಕುಮಾರಸ್ವಾಮಿ ಮೈಸೂರಿಂದ ಸ್ಪರ್ಧೆ? ಎಚ್‌ಡಿಕೆ ಲೆಕ್ಕಾಚಾರವೇನು?

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ. ಹಾಲಿ ಜೆಡಿಎಸ್ ಸಂಸದರು ಗೆದ್ದಿರುವ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಕಾಂಗ್ರೆಸ್ ನಿರ್ಧರಿಸಿದೆ. ಆದ್ದರಿಂದ, ಅಭ್ಯರ್ಥಿ ಯಾರು? ಎಂಬುದು ಪ್ರಶ್ನೆಯಾಗಿದೆ.

ಮಂಡ್ಯದಿಂದ ದಿ.ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಯಸಿದ್ದರು. ಆದರೆ, ಈಗ ಜೆಡಿಎಸ್‌ ಅವರ ಸ್ಪರ್ಧೆಗೆ ಒಪ್ಪಿಗೆ ನೀಡದೆ ಪಕ್ಷದಿಂದ ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ ಇದೆ...

ದೇವೇಗೌಡರು ಹೇಳಿದ್ದೇನು?

ದೇವೇಗೌಡರು ಹೇಳಿದ್ದೇನು?

'ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮಗ ನಿಖಿಲ್ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾನೆ' ಎಂದು ಎಚ್.ಡಿ.ದೇವೇಗೌಡರು ಹೇಳಿದರು.

ಕಾಂಗ್ರೆಸ್ ಈ 3 ಕ್ಷೇತ್ರ ಬಿಟ್ಟು ಕೊಡಲೇಬೇಕೆಂದು ಜೆಡಿಎಸ್ ಹಠವೇಕೆ?ಕಾಂಗ್ರೆಸ್ ಈ 3 ಕ್ಷೇತ್ರ ಬಿಟ್ಟು ಕೊಡಲೇಬೇಕೆಂದು ಜೆಡಿಎಸ್ ಹಠವೇಕೆ?

ನಾನು ಕೂಡಾ ಸಮ್ಮತಿ ಸೂಚಿಸಿದ್ದೇನೆ

ನಾನು ಕೂಡಾ ಸಮ್ಮತಿ ಸೂಚಿಸಿದ್ದೇನೆ

'ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಮ್ಮ ಪಕ್ಷದ ಎಲ್.ಆರ್.ಶಿವರಾಮೇಗೌಡ ಆಯ್ಕೆಯಾಗಿದ್ದರು. ಆದರೆ, ಸ್ಥಳೀಯ ಜನರು ನಿಖಿಲ್ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ. ಅವರು ಕೂಡಾ ಆಕಾಂಕ್ಷಿಯಾಗಿದ್ದಾರೆ. ಮನಸ್ಸಿದ್ದರೆ ಸ್ಪರ್ಧಿಸುವಂತೆ ನಾನು ಕೂಡಾ ಸಮ್ಮತಿ ಸೂಚಿಸಿದ್ದೇನೆ' ಎಂದು ದೇವೇಗೌಡರು ಹೇಳಿದರು.

ಮಂಡ್ಯದಲ್ಲಿ‌ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮುನ್ಸೂಚನೆ ನೀಡಿದ ಸಿಎಂಮಂಡ್ಯದಲ್ಲಿ‌ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮುನ್ಸೂಚನೆ ನೀಡಿದ ಸಿಎಂ

ಮಂಡ್ಯದಿಂದ ಟಿಕೆಟ್ ಆಕಾಂಕ್ಷಿ

ಮಂಡ್ಯದಿಂದ ಟಿಕೆಟ್ ಆಕಾಂಕ್ಷಿ

ಸುಮಲತಾ ಅಂಬರೀಶ್ ಸ್ಪರ್ಧೆ ಬಗ್ಗೆ ಮಾತನಾಡಿದ ದೇವೇಗೌಡರು, 'ಆಕಾಂಕ್ಷೆ ಇರುವುದು ಸ್ವಾಭಾವಿಕ. ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳು ಮೊದಲಿನಿಂದಲೂ ಜೆಡಿಎಸ್ ಪಕ್ಷದ ಹಿಡಿತದಲ್ಲಿವೆ' ಎಂದು ದೇವೇಗೌಡರು ಹೇಳಿದರು.

ಮಗನ ರಾಜಕೀಯ ಪ್ರವೇಶಕ್ಕೆ ತೊಡಕಾದ ಸುಮಲತಾ ವಿರುದ್ಧ ಎಚ್‌ಡಿಕೆ ಗರಂಮಗನ ರಾಜಕೀಯ ಪ್ರವೇಶಕ್ಕೆ ತೊಡಕಾದ ಸುಮಲತಾ ವಿರುದ್ಧ ಎಚ್‌ಡಿಕೆ ಗರಂ

ಪ್ರಜ್ವಲ್ ರೇವಣ್ಣ ಸ್ಪರ್ಧೆ

ಪ್ರಜ್ವಲ್ ರೇವಣ್ಣ ಸ್ಪರ್ಧೆ

'ಪ್ರಜ್ವಲ್ ರೇವಣ್ಣ ಹಲವು ವರ್ಷಗಳಿಂದ ಲೋಕಸಭಾ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಹಲವು ಚುನಾವಣೆಗಳಲ್ಲಿ ಜವಾಬ್ದಾರಿ ನಿಭಾಯಿಸಿದ್ದಾರೆ' ಎಂದು ಹೇಳಿದ ದೇವೇಗೌಡರು ಪರೋಕ್ಷವಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧೆಯ ಸುಳಿವು ನೀಡಿದರು.

ಹಾಸನದಿಂದ ದೇವೇಗೌಡರೇ ಸ್ಪರ್ಧಿಸಲಿ : ಪ್ರಜ್ವಲ್ ರೇವಣ್ಣಹಾಸನದಿಂದ ದೇವೇಗೌಡರೇ ಸ್ಪರ್ಧಿಸಲಿ : ಪ್ರಜ್ವಲ್ ರೇವಣ್ಣ

English summary
JD(S) chief and former PM H.D.Deve Gowda gives green signal to Nikhil Kumaraswamy contest for 2019 Lok Sabha Elections. Karnataka Chief Minister H.D.Kumaraswamy son Nikhil Kumaraswamy may contest from Mandya seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X