ಬೇಕಿದ್ದರೆ ವಿದೇಶಕ್ಕೆ ಹೋಗುತ್ತೇನೆ : ಮೋದಿಗೆ ಗೌಡರ ಟಾಂಗ್
ಹಾಸನ, ಏ. 13 : "ನಾನ್ಯಾಕೆ ಗುಜರಾತ್ ಗೆ ಹೋಗಿ ನೆಲೆಸಲಿ? ನನಗೆ ಆಶ್ರಯ ಕೊಡಲು ಮೋದಿ ಯಾರು? ಬೇಕಿದ್ದರೆ ವಿದೇಶಕ್ಕೆ ಹೋಗಿ ನೆಲೆಸುತ್ತೇನೆ. ಮೋದಿಗೆ ವೀಸಾ ನೀಡಲು ವಿದೇಶಿ ಸರಕಾರಗಳು ಹಿಂಜರಿಯುತ್ತಿವೆ. ನನಗೆ ಆ ತೊಂದರೆಯಿಲ್ಲ" ಎಂದು ಮಾಜಿ ಪ್ರಧಾನಿ, ಹಾಸನ ಕ್ಷೇತ್ರದ ಜಾತ್ಯತೀತ ಜನತಾದಳ ಅಭ್ಯರ್ಥಿ 80 ವರ್ಷ ವಯಸ್ಸಿನ ಎಚ್.ಡಿ. ದೇವೇಗೌಡ ಅವರು ಮೋದಿಗೆ ಟಾಂಗ್ ನೀಡಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಭಾನುವಾರ ಪ್ರಚಾರ ಮಾಡುತ್ತಿದ್ದ ಅವರು, 'ದೇವೇಗೌಡ ಅವರು ಗುಜರಾತ್ ಗೆ ಬಂದು ನನ್ನ ಮನೆಯಲ್ಲಿ ನೆಲೆಸಲಿ ಅಥವಾ ವೃದ್ಧಾಶ್ರಮ ಸೇರಿಕೊಳ್ಳಲಿ' ಎಂದು ಚಿಕ್ಕಮಗಳೂರಿನಲ್ಲಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆಗೆ ದೇವೇಗೌಡರು ಮೇಲಿನಂತೆ ಖಾರವಾಗಿ ನುಡಿದಿದ್ದಾರೆ. [ಚಿಕ್ಕಬಳ್ಳಾಪುರದಲ್ಲಿ ಗೌಡರ ಕಾಲೆಳೆದ ಮೋದಿ]
"ನನಗೆ ಆಶ್ರಯ ಕೊಡಲು ನನ್ನ ಮಕ್ಕಳಿದ್ದಾರೆ. ಆದರೆ, ಮೋದಿಗೆ ಗೊತ್ತಾ? ಗುಜರಾತ್ ನಲ್ಲಿ ಲಕ್ಷಾಂತರ ಅಲ್ಪ ಸಂಖ್ಯಾತರಿದ್ದಾರೆ. ಬೇಕಿದ್ದರೆ ಅವರಿಗೆ ಆಶ್ರಯ ಕೊಡಲಿ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯಕ್ಕೆ ಏನು ಮಾಡಿದ್ದೇನೆಂದು ಜನ ಗುರುತಿಸಿದ್ದಾರೆ. ನನ್ನ ಬಗ್ಗೆ ಹೇಳಿಕೆ ನೀಡಲು ಅವರಾರು? ಈಗಲೂ ಹೇಳುತ್ತೇನೆ, ಸ್ವಂತ ಪ್ರಯತ್ನದಿಂದ ಮೋದಿ 276 ಸೀಟು ಗೆದ್ದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ" ಎಂದು ಗೌಡರು ಹರಿಹಾಯ್ದರು.

ಚಿಕ್ಕಬಳ್ಳಾಪುರದಲ್ಲಿ ಬಚ್ಚೇಗೌಡ ಪರವಾಗಿ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಪರವಾಗಿ ಪ್ರಚಾರಕ್ಕೆ ಬಂದಿದ್ದ ನರೇಂದ್ರ ಮೋದಿ ಅವರು, ದೇವೇಗೌಡರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 'ಮೋದಿ ಪ್ರಧಾನಿಯಾದರೆ ನಾನು ಕರ್ನಾಟಕ ಬಿಟ್ಟು ಹೋಗುತ್ತೇನೆ' ಎಂದು ದೇವೇಗೌಡರು ಆಡಿದ್ದ ಮಾತಿಗೆ ಪ್ರತಿಯಾಗಿ, "ಗೌಡರು ವಯೋವೃದ್ಧರಿದ್ದಾರೆ. ನನ್ನ ಗುಜರಾತ್ ಮನೆಗೆ ಬಂದರೆ ಅವರ ಮಕ್ಕಳಿಗಿಂತ ಚೆನ್ನಾಗಿ ನೋಡಿಕೊಳ್ಳುತ್ತೇನೆ. ಬೇಡವೆಂದರೆ ವೃದ್ಧಾಶ್ರಮ ಸೇರಿಕೊಳ್ಳಲಿ" ಎಂದು ವ್ಯಂಗ್ಯವಾಡಿದ್ದರು. [ಮೋದಿ ಬಗ್ಗೆ ದೇವೇಗೌಡ ಹೇಳಿದ್ದೇನು?]
ಈಶ್ವರಪ್ಪ ಪ್ರತಿಕ್ರಿಯೆ : "ದೇವೇಗೌಡರು ಕರ್ನಾಟಕ ಬಿಟ್ಟು ಹೋಗುವುದು ಬೇಡ. ಅವರಿಗೆ ರಾಜಕೀಯದಲ್ಲಿ ಅಪಾರವಾದ ಅನುಭವವಿದೆ, ರೈತರ ಬಗ್ಗೆ ಸಾಕಷ್ಟು ಕಾಳಜಿಯಿದೆ. ಅವರ ಅನುಭವ ಮುಂದೆ ನಮಗೆ ಬೇಕಾಗುತ್ತದೆ. ಹಾಸನದಲ್ಲಿ ಮಾತ್ರವಲ್ಲ ಕರ್ನಾಟಕದ್ದೆಲ್ಲೂ ಜೆಡಿಎಸ್ ಗೆಲ್ಲುವುದಿಲ್ಲ. ಮೋದಿ ಪ್ರಧಾನಿ ಆಗುವುದನ್ನು ಜೆಡಿಎಸ್ ಅಷ್ಟೇ ಏಕೆ, ಸೂರ್ಯ ಚಂದ್ರರು ಕೂಡ ತಡೆಯಲು ಸಾಧ್ಯವಿಲ್ಲ" ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ವ್ಯಂಗ್ಯಭರಿತ ಟೀಕಾಪ್ರಹಾರ ಮಾಡಿದ್ದಾರೆ. [ಬಚ್ಚೇಗೌಡರ ಸಂದರ್ಶನ]
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು












Click it and Unblock the Notifications