ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇವೇಗೌಡರ ಹೋರಾಟದ ಕೆಚ್ಚು ನನಗೆ ಪ್ರೇರಣೆ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಮೇ 18: ದೇವೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ ಹಲವು ರಾಷ್ಟ್ರ ಹಾಗೂ ರಾಜ್ಯ ನಾಯಕರುಗಳು ದೇವೇಗೌಡ ಅವರಿಗೆ ಶುಭಾಶಯ ಕೋರಿದ್ದಾರೆ. ಸಿದ್ದರಾಮಯ್ಯ ಅವರು ಸಹ ತಮ್ಮ ಒಂದು ಕಾಲದ ರಾಜಕೀಯ ಗುರುವಿಗೆ ಆತ್ಮೀಯವಾಗಿ ಶುಭಾಶಯಗಳನ್ನು ಹೇಳಿದ್ದಾರೆ.

ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರೈತರು ಮತ್ತು ಗ್ರಾಮ ಭಾರತದ ಬಗೆಗಿನ ಅವರ ಕಾಳಜಿ ಹಾಗೂ ಇಳಿವಯಸ್ಸಿನಲ್ಲಿಯೂ ದಣಿವರಿಯದ ಹೋರಾಟದ ಕೆಚ್ಚು ನನಗೆ ಸದಾ ಪ್ರೇರಣೆ ಎಂದಿದ್ದಾರೆ.

ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರಕಾರದ ಹಿರಿ ತಲೆಗಳಿಗೆ 4 ಪ್ರಶ್ನೆ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರಕಾರದ ಹಿರಿ ತಲೆಗಳಿಗೆ 4 ಪ್ರಶ್ನೆ

ವಿಧಾನಸಭೆ ಚುನಾವಣೆಗೆ ಮುನ್ನಾ ಹಾವು-ಮುಂಗುಸಿಯಂತೆ ಎಂಬಂತಾಗಿದ್ದ ಸಿದ್ದರಾಮಯ್ಯ-ದೇವೇಗೌಡ ಅವರುಗಳು ಮೈತ್ರಿ ಬಳಿಕ ಪರಸ್ಪರ ಗೌರವದ ಮಾತುಗಳನ್ನಾಡುತ್ತಿದ್ದಾರೆ. ಅದರಲ್ಲಿಯೂ ಸಿದ್ದರಾಮಯ್ಯ ಅವರು ದೇವೇಗೌಡ ಅವರನ್ನು ತಮ್ಮ ಆದರ್ಶಪ್ರಾಯ ಎಂದಿರುವುದು ಸಹಜವಾಗಿಯೇ ಆಶ್ಚರ್ಯ ಮೂಡಿಸಿದೆ.

Deve Gowdas always motivats me: Siddaramaiah

'ದೇವೇಗೌಡ ಅವರು ನನ್ನ ರಾಜಕೀಯ ಗುರು ಅಲ್ಲ, ಅರಸು ನನ್ನ ರಾಜಕೀಯ ಗುರು' ಸಿದ್ದರಾಮಯ್ಯ ಅವರು ಒಮ್ಮೆ ಹೇಳಿದ್ದರು. ದೇವೇಗೌಡ ಅವರು ನನ್ನನ್ನು ಜೆಡಿಎಸ್‌ ನಿಂದ ಉಚ್ಛಾಟಿಸಿದರು ಎಂದೂ ಸಹ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೆ ಹೇಳಿದ್ದರು, ಆದರೆ ಹಳೆಯ ರಾಜಕೀಯ ಕಿತ್ತಾಟವನ್ನು ಮರೆತು, ದೇವೇಗೌಡ ಅವರು ಹೋರಾಟವನ್ನು ಇಂದು ಸಿದ್ದರಾಮಯ್ಯ ನೆನಪಿಸಿಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮೌನ: ಮೋದಿಯನ್ನು ಅಣಕಿಸಿದ ಕಾಂಗ್ರೆಸ್ ಸುದ್ದಿಗೋಷ್ಠಿಯಲ್ಲಿ ಮೌನ: ಮೋದಿಯನ್ನು ಅಣಕಿಸಿದ ಕಾಂಗ್ರೆಸ್

ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಹೇಳಿರುವ ಸಿದ್ದರಾಮಯ್ಯ, ದೇವೇಗೌಡ ಅವರಿಗೆ ದೇವರು ಆರೋಗ್ಯ, ಆಯುಷ್ಯವನ್ನು ನೀಡಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

English summary
Siddaramaiah tweeted today and said Deve Gowda always motivats me. He wished Deve Gowda on his birthday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X