ಸಂಕ್ರಾಂತಿ ನಂತರ ರಾಜಕೀಯ ಬಿರುಗಾಳಿ ಎಬ್ಬಿಸಲಿದೆ ದೇವೇಗೌಡರ ಆತ್ಮಚರಿತ್ರೆ
ಬೆಂಗಳೂರು, ಜನವರಿ 01: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡರ ಬಹು ನಿರೀಕ್ಷಿತ ಆತ್ಮಚರಿತ್ರೆ ಸಂಕ್ರಾಂತಿ ಹಬ್ಬದ ನಂತರ ಮಾರುಕಟ್ಟೆಗೆ ಬರಲಿದೆ.
ದೇವೇಗೌಡ ಅವರ ಆತ್ಮಚರಿತ್ರೆ 2017 ರಲ್ಲಿಯೇ ಬಿಡುಗಡೆ ಆಗುತ್ತದೆ ಎನ್ನಲಾಗಿತ್ತು. ಆದರೆ ವಿಧಾನಸಭೆ ಚುನಾವಣೆ, ಮೈತ್ರಿ ಸರ್ಕಾರ, ನಂತರ ಲೋಕಸಭೆ ಚುನಾವಣೆ ಹೀಗೆ ಸಾಲು-ಸಾಲು ರಾಜಕೀಯ ಘಟನಾವಳಿಗಳ ಕಾರಣ ಆತ್ಮಚರಿತ್ರೆ ಬಿಡುಗಡೆ ತಡವಾಗಿದೆ.
ದೇವೇಗೌಡ ಅವರ ಆತ್ಮಚರಿತ್ರೆ ಅಂತಿಮ ರೂಪ ಪಡೆಯುತ್ತಿದ್ದು, ಇದೇ ಸಂಕ್ರಾಂತಿ ನಂತರ ಬಿಡುಗಡೆ ಆಗಲಿದೆ. ಬಿಡುಗಡೆ ಆದ ನಂತರ ರಾಜ್ಯ-ರಾಷ್ಟ್ರ ರಾಜಕಾರಣದಲ್ಲಿ ಸಂಚಲನವನ್ನು ಆತ್ಮಚರಿತ್ರೆ ಉಂಟು ಮಾಡಲಿದೆ ಎನ್ನಲಾಗುತ್ತಿದೆ.

ಐದಾರು ದಶಕದ ಸುದೀರ್ಘ ರಾಜಕೀಯ ಅನುಭವ ಇರುವ ದೇವೇಗೌಡ ಅವರು ತಮ್ಮ ಸ್ಮೃತಿಯ ರಾಜಕೀಯ ಘಟನಾವಳಿಗಳನ್ನು ಅಕ್ಷರ ರೂಪಕ್ಕೆ ಇಳಿಸಿದ್ದಾರೆ.
ರಾಜ್ಯ-ರಾಷ್ಟ್ರದ ಹಲವಾರು ಪ್ರಮುಖ ರಾಜಕೀಯ ಘಟನೆಗಳಲ್ಲಿ ದೇವೇಗೌಡ ಅವರು ಭಾಗಿಯಾಗಿದ್ದರು. ರಾಜಕೀಯ ಘಟನೆಗಳ ಹಿಂದೆ ನಡೆದ 'ಒಳ ರಾಜಕಾರಣ'ದ ವಿಷಯವನ್ನು ತಮ್ಮ ಆತ್ಮಚರಿತ್ರೆಯಲ್ಲಿ ದೇವೇಗೌಡ ಅವರು ಹೊರಗಿಡಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.
ದೇವೇಗೌಡರ ಆತ್ಮಚರಿತ್ರೆ ಕರ್ನಾಟಕ ರಾಜ್ಯ ರಾಜಕೀಯದ ಇತಿಹಾಸದ ದಾಖಲೆಯಾಗಿಯೂ ಆಗಲಿದೆ. ಐದುನೂರು ಪುಟಗಳ ದೊಡ್ಡ ಪುಸ್ತಕ ಇದಾಗಿರಲಿದೆ.
ದೇವೇಗೌಡ ಅವರ ಆತ್ಮಚರಿತ್ರೆಯನ್ನು ಜೆಡಿಎಸ್ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರು ಅಕ್ಷರ ರೂಪಕ್ಕೆ ಇಳಿಸಿದ್ದಾರೆ ಎನ್ನಲಾಗುತ್ತಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications