ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಮೀಸಲಾತಿ ನಿರ್ಣಯಕ್ಕೆ ದೇವೇಗೌಡ ಬೆಂಬಲ
ಬೆಂಗಳೂರು, ಜನವರಿ 08: ಆರ್ಥಿಕವಾಗಿ ಹಿಂದುಳಿದಿರುವ ಮೇಲ್ಜಾತಿ ಸಮುದಾಯಗಳಿಗೆ 10% ಮೀಸಲಾತಿ ನೀಡುವ ಕೇಂದ್ರ ಬಿಜೆಪಿ ಸರ್ಕಾರದ ನಿರ್ಣಯಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಬೆಂಬಲ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ದೇವೇಗೌಡ ಅವರು, ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿ ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡುವ ನಿರ್ಣಯಕ್ಕೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂದು ದೇವೇಗೌಡ ಹೇಳಿದ್ದಾರೆ.
ಮೇಲ್ವರ್ಗದವರಿಗೂ ಉದ್ಯೋಗದಲ್ಲಿ ಮೀಸಲಾತಿ, ಯಾರು ಇದಕ್ಕೆ ಅರ್ಹರು?
ಸಮಾಜದ ದುರ್ಬಲ ವರ್ಗಗಳ ಪರ ನಾವು ಸದಾ ನಿಂತಿದ್ದೇವೆ ಮತ್ತು ಮುಂದೆಯೂ ಅದನ್ನೇ ಮುಂದುವರೆಸುತ್ತೇವೆ ಎಂದು ದೇವೇಗೌಡ ಹೇಳಿದ್ದಾರೆ.
Janata Dal (Secular) supports the 10% reservation in jobs and educational institutions for economically weaker sections of the upper castes.
— H D Devegowda (@H_D_Devegowda) January 8, 2019
We have always stood for, and will continue to stand for betterment of the underprivileged and weaker sections of the society.
ಮೇಲ್ವರ್ಗದ ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಮೀಸಲಾತಿ
ಮೇಲ್ವರ್ಗದಲ್ಲಿರುವ ಆರ್ಥಿಕವಾಗಿ ಹಿಂದುಳಿದವರಿಗೂ ಸರ್ಕಾರಿ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸೋಮವಾರ ನವದೆಹಲಿಯಲ್ಲಿ ನಡೆಸ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದಾಗಿ ಮೇಲ್ವರ್ಗದಲ್ಲಿ ಹುಟ್ಟಿದ ಬುದ್ಧಿವಂತ ಯುವಕರಿಗೂ ಇನ್ನುಮುಂದೆ ಉದ್ಯೋಗದಲ್ಲಿ ಮೀಸಲಾತಿ ದೊರೆಯಲಿದೆ.