ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪಡೆದ ಗಿರೀಶ್ ಲಿಂಗಣ್ಣ ಅವರನ್ನು ಶ್ಲಾಘಿಸಿದ ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಬೆಂಗಳೂರು, ಜನವರಿ, 04: ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆ ನೀಡುವ ಪ್ರತಿಷ್ಠಿತ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಅಂಕಣಕಾರರಾದ ಗಿರೀಶ್ ಲಿಂಗಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಬಾಹ್ಯಾಕಾಶ, ರಕ್ಷಣೆ ಮತ್ತು ವಿದೇಶಾಂಗ ನೀತಿಯ ವಿಚಾರಗಳಲ್ಲಿ ಮಾಹಿತಿ ಪೂರ್ಣ ಲೇಖನಗಳನ್ನು ಬರೆಯುತ್ತಿರುವ ಗಿರೀಶ್ ಲಿಂಗಣ್ಣ ಅವರ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ಘೋಷಿಸಲಾಗಿದೆ.
ಪ್ರಶಸ್ತಿಯ ಜೊತೆಗೆ 1,00,000 ರೂಪಾಯಿಗಳ ನಗದು ಬಹುಮಾನವನ್ನೂ ನೀಡಲಾಗುತ್ತದೆ. ಆದರೆ, ಗಿರೀಶ್ ಲಿಂಗಣ್ಣ ಅವರು ಈ ಬಹುಮಾನದ ಮೊತ್ತವನ್ನು ಕರ್ನಾಟಕ ವೃತ್ತಿ ನಿರತ ಪತ್ರಕರ್ತರ ಸಂಘಕ್ಕೆ ಹಸ್ತಾಂತರಿಸಿದ್ದಾರೆ. ಅಲ್ಲದೆ, ಹಿರಿಯ ಪರಮಾಣು ವಿಜ್ಞಾನಿ, ಕರ್ನಾಟಕದವರೇ ಆದ ಡಾ.ರಾಜಾ ರಾಮಣ್ಣ ಅವರ ಹೆಸರಿನಲ್ಲಿ ದತ್ತಿ ನಿಧಿಯೊಂದನ್ನು ಸ್ಥಾಪಿಸಿ, ಅದರಿಂದ ಬರುವ ಮೊತ್ತವನ್ನು ಪ್ರತಿ ವರ್ಷವೂ ವಿಜ್ಞಾನದ ಕುರಿತು ಮಾಹಿತಿಪೂರ್ಣ ಲೇಖನಗಳನ್ನು ಪ್ರಕಟಿಸುವ ಪತ್ರಕರ್ತ ಅಥವಾ ಅಂಕಣಕಾರರಿಗೆ ನೀಡಬೇಕೆಂದು ಕೆಯುಡಬ್ಲ್ಯುಜೆಗೆ ಮನವಿ ಮಾಡಿಕೊಂಡಿದ್ದರು.

ಅವರ ಮನವಿಯನ್ನು ಕರ್ನಾಟಕ ರಾಜ್ಯ ವೃತ್ತಿ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಒಪ್ಪಿಕೊಂಡು, ಪ್ರಶಂಸೆ ವ್ಯಕ್ತಪಡಿಸಿ, ದತ್ತಿ ನಿಧಿಯನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ. ಇನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ, ಸ್ವತಃ ಪ್ರತಿಷ್ಠಿತ ಐಐಟಿ ಪದವೀಧರರಾದ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಗಿರೀಶ್ ಲಿಂಗಣ್ಣ ಅವರಿಗೆ ಪ್ರಶಸ್ತಿ ಘೋಷಿಸಿರುವುದನ್ನು ಸ್ವಾಗತಿಸಿ, ಗಿರೀಶ್ ಲಿಂಗಣ್ಣ ಅವರನ್ನು ಅಭಿನಂದಿಸಿದ್ದಾರೆ.
"ಹೊಸ ಪೀಳಿಗೆಗೆ ಸ್ಫೂರ್ತಿ ನೀಡುವಲ್ಲಿ, ಸುಶಿಕ್ಷಿತರನ್ನಾಗಿಸುವಲ್ಲಿ ಬಾಹ್ಯಾಕಾಶ, ರಕ್ಷಣಾ ವ್ಯವಸ್ಥೆ ಹಾಗೂ ವಿದೇಶಾಂಗ ವ್ಯವಹಾರಗಳ ಕ್ಷೇತ್ರಗಳಲ್ಲಿ ಸಮರ್ಥವಾಗಿ ಬರವಣಿಗೆ ಮಾಡಬಲ್ಲ ಪ್ರತಿಭಾವಂತ ಲೇಖಕರ ಪಾತ್ರ ಬಹು ನಿರ್ಣಾಯಕವಾದುದು. ಅಂತಹ ಪ್ರತಿಭಾಶಾಲೀ ಲೇಖಕರು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಸೃಷ್ಟಿಯಾಗಬೇಕಾದ ಅಗತ್ಯವಿದೆ. ಈ ಹಿನ್ನೆಲೆ ಒಕ್ಕಲಿಗ ಸಮುದಾಯದ ಹೆಮ್ಮೆಗೆ ಕಾರಣಕರ್ತರಾದ ಗಿರೀಶ್ ಲಿಂಗಣ್ಣನವರ ಸಾಧನೆ ಶ್ಲಾಘನೀಯವಾದುದು," ಎಂದು ಸ್ವಾಮೀಜಿ ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications