ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪಡೆದ ಗಿರೀಶ್ ಲಿಂಗಣ್ಣ ಅವರನ್ನು ಶ್ಲಾಘಿಸಿದ ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಬೆಂಗಳೂರು, ಜನವರಿ, 04: ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆ ನೀಡುವ ಪ್ರತಿಷ್ಠಿತ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಅಂಕಣಕಾರರಾದ ಗಿರೀಶ್ ಲಿಂಗಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಬಾಹ್ಯಾಕಾಶ, ರಕ್ಷಣೆ ಮತ್ತು ವಿದೇಶಾಂಗ ನೀತಿಯ ವಿಚಾರಗಳಲ್ಲಿ ಮಾಹಿತಿ ಪೂರ್ಣ ಲೇಖನಗಳನ್ನು ಬರೆಯುತ್ತಿರುವ ಗಿರೀಶ್ ಲಿಂಗಣ್ಣ ಅವರ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ಘೋಷಿಸಲಾಗಿದೆ.
ಪ್ರಶಸ್ತಿಯ ಜೊತೆಗೆ 1,00,000 ರೂಪಾಯಿಗಳ ನಗದು ಬಹುಮಾನವನ್ನೂ ನೀಡಲಾಗುತ್ತದೆ. ಆದರೆ, ಗಿರೀಶ್ ಲಿಂಗಣ್ಣ ಅವರು ಈ ಬಹುಮಾನದ ಮೊತ್ತವನ್ನು ಕರ್ನಾಟಕ ವೃತ್ತಿ ನಿರತ ಪತ್ರಕರ್ತರ ಸಂಘಕ್ಕೆ ಹಸ್ತಾಂತರಿಸಿದ್ದಾರೆ. ಅಲ್ಲದೆ, ಹಿರಿಯ ಪರಮಾಣು ವಿಜ್ಞಾನಿ, ಕರ್ನಾಟಕದವರೇ ಆದ ಡಾ.ರಾಜಾ ರಾಮಣ್ಣ ಅವರ ಹೆಸರಿನಲ್ಲಿ ದತ್ತಿ ನಿಧಿಯೊಂದನ್ನು ಸ್ಥಾಪಿಸಿ, ಅದರಿಂದ ಬರುವ ಮೊತ್ತವನ್ನು ಪ್ರತಿ ವರ್ಷವೂ ವಿಜ್ಞಾನದ ಕುರಿತು ಮಾಹಿತಿಪೂರ್ಣ ಲೇಖನಗಳನ್ನು ಪ್ರಕಟಿಸುವ ಪತ್ರಕರ್ತ ಅಥವಾ ಅಂಕಣಕಾರರಿಗೆ ನೀಡಬೇಕೆಂದು ಕೆಯುಡಬ್ಲ್ಯುಜೆಗೆ ಮನವಿ ಮಾಡಿಕೊಂಡಿದ್ದರು.

ಅವರ ಮನವಿಯನ್ನು ಕರ್ನಾಟಕ ರಾಜ್ಯ ವೃತ್ತಿ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಒಪ್ಪಿಕೊಂಡು, ಪ್ರಶಂಸೆ ವ್ಯಕ್ತಪಡಿಸಿ, ದತ್ತಿ ನಿಧಿಯನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ. ಇನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ, ಸ್ವತಃ ಪ್ರತಿಷ್ಠಿತ ಐಐಟಿ ಪದವೀಧರರಾದ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಗಿರೀಶ್ ಲಿಂಗಣ್ಣ ಅವರಿಗೆ ಪ್ರಶಸ್ತಿ ಘೋಷಿಸಿರುವುದನ್ನು ಸ್ವಾಗತಿಸಿ, ಗಿರೀಶ್ ಲಿಂಗಣ್ಣ ಅವರನ್ನು ಅಭಿನಂದಿಸಿದ್ದಾರೆ.
"ಹೊಸ ಪೀಳಿಗೆಗೆ ಸ್ಫೂರ್ತಿ ನೀಡುವಲ್ಲಿ, ಸುಶಿಕ್ಷಿತರನ್ನಾಗಿಸುವಲ್ಲಿ ಬಾಹ್ಯಾಕಾಶ, ರಕ್ಷಣಾ ವ್ಯವಸ್ಥೆ ಹಾಗೂ ವಿದೇಶಾಂಗ ವ್ಯವಹಾರಗಳ ಕ್ಷೇತ್ರಗಳಲ್ಲಿ ಸಮರ್ಥವಾಗಿ ಬರವಣಿಗೆ ಮಾಡಬಲ್ಲ ಪ್ರತಿಭಾವಂತ ಲೇಖಕರ ಪಾತ್ರ ಬಹು ನಿರ್ಣಾಯಕವಾದುದು. ಅಂತಹ ಪ್ರತಿಭಾಶಾಲೀ ಲೇಖಕರು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಸೃಷ್ಟಿಯಾಗಬೇಕಾದ ಅಗತ್ಯವಿದೆ. ಈ ಹಿನ್ನೆಲೆ ಒಕ್ಕಲಿಗ ಸಮುದಾಯದ ಹೆಮ್ಮೆಗೆ ಕಾರಣಕರ್ತರಾದ ಗಿರೀಶ್ ಲಿಂಗಣ್ಣನವರ ಸಾಧನೆ ಶ್ಲಾಘನೀಯವಾದುದು," ಎಂದು ಸ್ವಾಮೀಜಿ ಹೇಳಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications