ಅಂಜನಾದ್ರಿ ಬೆಟ್ಟಕ್ಕೆ ಪುನೀತ್ ಫೋಟೋ ಜೊತೆ ಭಕ್ತರ ಪಾದಯಾತ್ರೆ!
ಕೊಪ್ಪಳ, ಡಿಸೆಂಬರ್ 05; ಹನುಮ ಜಯಂತಿ ಅಂಗವಾಗಿ ಹನುಮ ಜನಿಸಿದ ಭೂಮಿ ಕೊಪ್ಪಳದ ಅಂಜನಾದ್ರಿಗೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರ ಗುಪೊಂದು ಕನ್ನಡ ನಟ ದಿ. ಪುನೀತ್ ರಾಜ್ ಕುಮಾರ್ ಫೋಟೋ ಹಿಡಿದು ಪಾದಯಾತ್ರೆ ಮಾಡುತ್ತಿದೆ.
ಹನುಮ ಜನಿಸಿದ ಭೂಮಿ ಅಂಜನಾದ್ರಿಯಲ್ಲಿ ಹನುಮ ಜಯಂತಿಯಂದು ಪಾವನ ಹೋಮ ನಡೆಯುತ್ತದೆ. ಆದರೆ ಹನುಮ ಜಯಂತಿ ಮುನ್ನಾ ದಿನವಾದ ಡಿಸೆಂಬರ್ 4ರಂದೇ ಬೆಟ್ಟದಲ್ಲಿ ಹಬ್ಬದ ಸಂಭ್ರಮ ಕಂಡುಬಂದಿತು.
ಹನುಮವ್ರತ ಆಚರಿಸಿದ ಮಾಲಾಧಾರಿಗಳು ಪಾದಯಾತ್ರೆ ಮೂಲಕ ಕಿಷ್ಕಿಂದೆಯ ಅಂಜನಾದ್ರಿ ಪರ್ವತದತ್ತ, ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಆಗಮಿಸಿದರು. ಭಕ್ತರು ಕೈಯಲ್ಲಿ ಭಗವಾದ್ವಜ ಹಿಡಿದು ಕೇಸರಿ ಧರಿಸಿನೊಂದಿಗೆ ಬೆಟ್ಟದತ್ತ ಸಾಲುಸಾಲಾಗಿ ಸಾಗುತ್ತಿರುವ ದೃಶ್ಯ ಕಂಡುಬಂದಿತು.

ದೇವರ ದರ್ಶನಕ್ಕಾಗಿ ಕುಟುಂಬ ಸಮೇತ ಆಗಮಿಸುವ ಹಲವು ಭಕ್ತರು ಬಯಲು ಗದ್ದೆಗಳಲ್ಲಿ ವಾಸ್ತವ್ಯ ಹೂಡಿದ್ದರು. ಕೊಪ್ಪಳ, ಗಂಗಾವತಿ, ಕಾರಟಗಿ, ಕನಕಗಿರಿ ಮತ್ತು ರಾಜ್ಯದ ಬೇರೆ-ಬೇರೆ ಜಿಲ್ಲೆಗಳ ಹನುಮ ಮಾಲಾಧಾರಿಗಳು ತಂಡೋಪತಂಡವಾಗಿ ಬೆಟ್ಟಕ್ಕೆ ಆಗಮಿಸಿದ್ದಾರೆ.
ದೇವಾಲಯಗಳಲ್ಲಿ ಪೂಜೆ: ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುತ್ತಿರುವ ಭಕ್ತರು ತಾವುಗಳು ನಡೆಯುವ ದಾರಿಯಲ್ಲಿನ ಹನುಮ ದೇವಾಲಯಗಳಲ್ಲಿ ಪೂಜೆ ನೆರವೇರಿಸಿ, ದೇವಾಲಯದ ಆವರಣದಲ್ಲಿ ವಿರಮಿಸಿ ಸಾಗಿದರು. ಅಭಯ ಆಂಜನೇಯ ಸ್ವಾಮಿ ದೇವಾಲಯ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಭಕ್ತರು ಆಶ್ರಯ ಪಡೆದಿದ್ದರು.
ಸಿಂಧೋಗಿ ಹತ್ತಿರದ ಒದ್ನಾಳದಿಂದ ಅಂಜನಾದ್ರಿಗೆ ಹೊರಟಿದ್ದ ಮಾಲಾಧಾರಿಗಳು ಅಗಳಕೇರಾದಲ್ಲಿರುವ ಜಮೀನಿನಲ್ಲಿ ವಿಶ್ರಾಂತಿ ಪಡೆದಿದ್ದರು. ದಾರಿಯಲ್ಲಿ ಸಂಚರಿಸುತ್ತಿದ್ದ ಮಾಲಾಧಾರಿಗಳಿಗೆ ಬನ್ನಿ ಸ್ವಾಮಿಗಳೇ ಎಂದು ಕರೆಯುತ್ತ ಅಗಳಕೇರಾದ ಮಂಜುನಾಥ ಶೆಟ್ರು, ರಾಜು ಗಡಾದ ಮತ್ತು ಮೇಘರಾಜ ಸಿಂಧೋಗಿ ಅವರು ಫಲಾವ್ ಮತ್ತು ಮಜ್ಜಿಗೆಯ ವಿತರಣೆ ಸೇವೆ ಮಾಡಿದರು.

ಅಂಜನಾದ್ರಿ ಬೆಟ್ಟದತ್ತ ಹೆಜ್ಜೆ ಹಾಕುತ್ತಿದ್ದ ಭಕ್ತರು ಮೊಬೈಲ್ನಲ್ಲಿ ಆಂಜನೇಯ ದೇವರ ಕುರಿತ ಭಕ್ತಿ ಗೀತೆ ಕೇಳುತ್ತ, ಕೆಲ ಭಕ್ತರು ನಟ ಪುನೀತ್ ರಾಜಕುಮಾರ್ ಫೋಟೋ ಹಿಡಿದು ಸಾಗುತ್ತಿರುವುದು ಕಂಡು ಬಂದಿತು.
ಹೆಚ್ಚಿನ ಪೊಲೀಸ್ ಬಂದೋಬಸ್ತ್; ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುವ ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಹಾಯವಾಣಿ ಸ್ಥಾಪಿಸಲಾಗಿದೆ. ಮಾಲಾಧಾರಿಗಳು ನಿರ್ಭಯದಿಂದ ಬಂದು ಹೋಗಬಹುದು ಎಂದು ಜಿಲ್ಲಾಡಳಿತ ಹೇಳಿದೆ.
ಹನುಮ ಮಾಲಾಧಿಕಾರಿಗಳಿಗೆ ಆಂಜನೇಯ ದರ್ಶನಕ್ಕಾಗಿ ಅನುಕೂಲವಾಗಲು ವಿಶೇಷ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಕೊಪ್ಪಳ ಜಿಲ್ಲಾಡಳಿತ ಸಹ ಅಗತ್ಯ ವ್ಯವಸ್ಥೆ ಮಾಡಿದೆ.
ಹನುಮಮಾಲಧಾರಿಗಳಾದ ಹಗರಿಬೊಮ್ಮನಹಳ್ಳಿ ಮಹೇಶ ಮತ್ತು ಬ್ಯಾಲ್ಯಾಳದ ಶ್ರೀಧರ ಮಾತನಾಡಿ, "ನಮ್ಮ ನೆಚ್ಚಿನ ದೇವರಾದ ಆಂಜನೇಯ ದರ್ಶನಕ್ಕಾಗಿ ನಾವು ಪ್ರತಿ ವರ್ಷವೂ ನಮ್ಮೂರಿನಿಂದ ನಡೆದು ಬರುತ್ತೇವೆ" ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications