ಅಂಜನಾದ್ರಿ ಬೆಟ್ಟಕ್ಕೆ ಪುನೀತ್ ಫೋಟೋ ಜೊತೆ ಭಕ್ತರ ಪಾದಯಾತ್ರೆ!
ಕೊಪ್ಪಳ, ಡಿಸೆಂಬರ್ 05; ಹನುಮ ಜಯಂತಿ ಅಂಗವಾಗಿ ಹನುಮ ಜನಿಸಿದ ಭೂಮಿ ಕೊಪ್ಪಳದ ಅಂಜನಾದ್ರಿಗೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರ ಗುಪೊಂದು ಕನ್ನಡ ನಟ ದಿ. ಪುನೀತ್ ರಾಜ್ ಕುಮಾರ್ ಫೋಟೋ ಹಿಡಿದು ಪಾದಯಾತ್ರೆ ಮಾಡುತ್ತಿದೆ.
ಹನುಮ ಜನಿಸಿದ ಭೂಮಿ ಅಂಜನಾದ್ರಿಯಲ್ಲಿ ಹನುಮ ಜಯಂತಿಯಂದು ಪಾವನ ಹೋಮ ನಡೆಯುತ್ತದೆ. ಆದರೆ ಹನುಮ ಜಯಂತಿ ಮುನ್ನಾ ದಿನವಾದ ಡಿಸೆಂಬರ್ 4ರಂದೇ ಬೆಟ್ಟದಲ್ಲಿ ಹಬ್ಬದ ಸಂಭ್ರಮ ಕಂಡುಬಂದಿತು.
ಹನುಮವ್ರತ ಆಚರಿಸಿದ ಮಾಲಾಧಾರಿಗಳು ಪಾದಯಾತ್ರೆ ಮೂಲಕ ಕಿಷ್ಕಿಂದೆಯ ಅಂಜನಾದ್ರಿ ಪರ್ವತದತ್ತ, ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಆಗಮಿಸಿದರು. ಭಕ್ತರು ಕೈಯಲ್ಲಿ ಭಗವಾದ್ವಜ ಹಿಡಿದು ಕೇಸರಿ ಧರಿಸಿನೊಂದಿಗೆ ಬೆಟ್ಟದತ್ತ ಸಾಲುಸಾಲಾಗಿ ಸಾಗುತ್ತಿರುವ ದೃಶ್ಯ ಕಂಡುಬಂದಿತು.

ದೇವರ ದರ್ಶನಕ್ಕಾಗಿ ಕುಟುಂಬ ಸಮೇತ ಆಗಮಿಸುವ ಹಲವು ಭಕ್ತರು ಬಯಲು ಗದ್ದೆಗಳಲ್ಲಿ ವಾಸ್ತವ್ಯ ಹೂಡಿದ್ದರು. ಕೊಪ್ಪಳ, ಗಂಗಾವತಿ, ಕಾರಟಗಿ, ಕನಕಗಿರಿ ಮತ್ತು ರಾಜ್ಯದ ಬೇರೆ-ಬೇರೆ ಜಿಲ್ಲೆಗಳ ಹನುಮ ಮಾಲಾಧಾರಿಗಳು ತಂಡೋಪತಂಡವಾಗಿ ಬೆಟ್ಟಕ್ಕೆ ಆಗಮಿಸಿದ್ದಾರೆ.
ದೇವಾಲಯಗಳಲ್ಲಿ ಪೂಜೆ: ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುತ್ತಿರುವ ಭಕ್ತರು ತಾವುಗಳು ನಡೆಯುವ ದಾರಿಯಲ್ಲಿನ ಹನುಮ ದೇವಾಲಯಗಳಲ್ಲಿ ಪೂಜೆ ನೆರವೇರಿಸಿ, ದೇವಾಲಯದ ಆವರಣದಲ್ಲಿ ವಿರಮಿಸಿ ಸಾಗಿದರು. ಅಭಯ ಆಂಜನೇಯ ಸ್ವಾಮಿ ದೇವಾಲಯ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಭಕ್ತರು ಆಶ್ರಯ ಪಡೆದಿದ್ದರು.
ಸಿಂಧೋಗಿ ಹತ್ತಿರದ ಒದ್ನಾಳದಿಂದ ಅಂಜನಾದ್ರಿಗೆ ಹೊರಟಿದ್ದ ಮಾಲಾಧಾರಿಗಳು ಅಗಳಕೇರಾದಲ್ಲಿರುವ ಜಮೀನಿನಲ್ಲಿ ವಿಶ್ರಾಂತಿ ಪಡೆದಿದ್ದರು. ದಾರಿಯಲ್ಲಿ ಸಂಚರಿಸುತ್ತಿದ್ದ ಮಾಲಾಧಾರಿಗಳಿಗೆ ಬನ್ನಿ ಸ್ವಾಮಿಗಳೇ ಎಂದು ಕರೆಯುತ್ತ ಅಗಳಕೇರಾದ ಮಂಜುನಾಥ ಶೆಟ್ರು, ರಾಜು ಗಡಾದ ಮತ್ತು ಮೇಘರಾಜ ಸಿಂಧೋಗಿ ಅವರು ಫಲಾವ್ ಮತ್ತು ಮಜ್ಜಿಗೆಯ ವಿತರಣೆ ಸೇವೆ ಮಾಡಿದರು.

ಅಂಜನಾದ್ರಿ ಬೆಟ್ಟದತ್ತ ಹೆಜ್ಜೆ ಹಾಕುತ್ತಿದ್ದ ಭಕ್ತರು ಮೊಬೈಲ್ನಲ್ಲಿ ಆಂಜನೇಯ ದೇವರ ಕುರಿತ ಭಕ್ತಿ ಗೀತೆ ಕೇಳುತ್ತ, ಕೆಲ ಭಕ್ತರು ನಟ ಪುನೀತ್ ರಾಜಕುಮಾರ್ ಫೋಟೋ ಹಿಡಿದು ಸಾಗುತ್ತಿರುವುದು ಕಂಡು ಬಂದಿತು.
ಹೆಚ್ಚಿನ ಪೊಲೀಸ್ ಬಂದೋಬಸ್ತ್; ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುವ ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಹಾಯವಾಣಿ ಸ್ಥಾಪಿಸಲಾಗಿದೆ. ಮಾಲಾಧಾರಿಗಳು ನಿರ್ಭಯದಿಂದ ಬಂದು ಹೋಗಬಹುದು ಎಂದು ಜಿಲ್ಲಾಡಳಿತ ಹೇಳಿದೆ.
ಹನುಮ ಮಾಲಾಧಿಕಾರಿಗಳಿಗೆ ಆಂಜನೇಯ ದರ್ಶನಕ್ಕಾಗಿ ಅನುಕೂಲವಾಗಲು ವಿಶೇಷ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಕೊಪ್ಪಳ ಜಿಲ್ಲಾಡಳಿತ ಸಹ ಅಗತ್ಯ ವ್ಯವಸ್ಥೆ ಮಾಡಿದೆ.
ಹನುಮಮಾಲಧಾರಿಗಳಾದ ಹಗರಿಬೊಮ್ಮನಹಳ್ಳಿ ಮಹೇಶ ಮತ್ತು ಬ್ಯಾಲ್ಯಾಳದ ಶ್ರೀಧರ ಮಾತನಾಡಿ, "ನಮ್ಮ ನೆಚ್ಚಿನ ದೇವರಾದ ಆಂಜನೇಯ ದರ್ಶನಕ್ಕಾಗಿ ನಾವು ಪ್ರತಿ ವರ್ಷವೂ ನಮ್ಮೂರಿನಿಂದ ನಡೆದು ಬರುತ್ತೇವೆ" ಎಂದರು.
-
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ವಿಶೇಷ: ಬೆಟ್ಟದ ಹೂವಿನಿಂದ ಗಂಧದ ಗುಡಿಯವರೆಗೆ, ಅಪ್ಪು ಎಂಬ ಅಳಿಸಲಾಗದ ನಗು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications