ಪಿಎಸ್ಐ ನೇಮಕಾತಿ ಅಕ್ರಮ ಎಸಗಿದವರ ಖಾಕಿ ಕನಸು ಶಾಶ್ವತವಾಗಿ ಭಗ್ನ!
ಬೆಂಗಳೂರು, ಏಪ್ರಿಲ್ 22: ''545 ಪಿಎಸ್ಐ ನೇಮಕಾತಿ ಅಕ್ರಮ ಎನ್ನಲಾದ ಪ್ರಕರಣ ಸಂಬಂಧ ಮೊದಲನೆಯದಾಗಿ ಮಾಹಿತಿ ಬಂದ ಬಳಿಕ ಒಂದು ತಿಂಗಳು ವಿಚಾರಣೆ ನಡೆಸಲಾಗಿತ್ತು. ವಿಚಾರ ಗಮನಕ್ಕೆ ಬಂದ ನಂತರ ಎವಿಡೆನ್ಸ್ ಸಿಕ್ಕ ತಕ್ಷಣ ಎಫ್ಐಅರ್ ದಾಖಲು ಮಾಡಲಾಗಿತ್ತು. ಯಾರು ಆಯ್ಕೆ ಅಗಿದ್ದಾರೆ, ಯಾರು ಸೆಲೆಕ್ಟ್ ಅಗಿಲ್ಲ ಎಲ್ಲದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ'' ಎಂದು ಡಿಜಿ ಪ್ರವೀಣ್ ಸೂದ್ ತಿಳಿಸಿದ್ದಾರೆ.
''ಇದನ್ನು ಹಗರಣ ಎನ್ನಲಾಗುವುದಿಲ್ಲ, ಕೆಲ ವ್ಯಕ್ತಿಗಳು ಅಕ್ರಮದಲ್ಲಿ ಭಾಗಿಯಾಗಿದ್ದಾರೆ, ಈ ರೀತಿ ಎಸಗಿದವರ ಖಾಕಿ ಕನಸು ಶಾಶ್ವತವಾಗಿ ಭಗ್ನವಾಗಲಿದೆ. ಅವರು ಪೊಲೀಸ್ ನೇಮಕಾತಿ ಅಷ್ಟೇ ಅಲ್ಲ, ಯಾವುದೇ ಸ್ಪರ್ಧಾತ್ಮಾಕ ಪರೀಕ್ಷೆ ಅನರ್ಹರಾಗುವಂತೆ ಮಾಡಲಾಗುವುದು'' ಎಂದು ಪ್ರವೀಣ್ ಸೂದ್ ಗುಡುಗಿದ್ದಾರೆ.
ಅಕ್ರಮ ಹಿಂದಿರುವ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಆಗಲಿದೆ. ಈಗಾಗಲೇ ಹಲವರನ್ನು ಅರೆಸ್ಟ್ ಮಾಡಲಾಗಿದೆ. ತಪ್ಪಿತಸ್ಥರನ್ನು ಮುಂದಿನ ಪೊಲೀಸ್ ಪರೀಕ್ಷೆ ಬರೆಯದಂತೆ ಮಾಡುತ್ತೇವೆ. ಯಾರನ್ನು ಹಾಗೆ ಬಿಡಲ್ಲ. ಪ್ರತಿಯೊಂದು ಉತ್ತರಪತ್ರಿಕೆಯನ್ನು ಮೂರು ಬಾರಿ ಪರಿಶೀಲಿಸಲಿದ್ದೇವೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಏನು ಆಗಲ್ಲ. ಅದ್ರೆ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿದೆ ಎಂದು ಅಭಯ ನೀಡಿದರು.
ಪಿಎಸ್ಐ ನೇಮಕಾತಿ ಅಕ್ರಮ: ನಿರೀಕ್ಷಣಾ ಜಾಮೀನಿಗಾಗಿ ದಿವ್ಯಾ ಅರ್ಜಿ

ಸಮಗ್ರ ತನಿಖೆ
ಬ್ಲೂಟೂತ್ ಬಳಿಸಿ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಜಾಲ ಇಡೀ ಸಿಐಡಿ ತನಿಖಾ ತಂಡವನ್ನೇ ನಿದ್ದೆ ಗೆಡಿಸಿದೆ. 545 ಪಿಎಸ್ಐ ನೇಮಕಾತಿಗಳ ಪೈಕಿ ಹೆಚ್ಚು ಮಂದಿ ಕಲಬುರಗಿ ಸುತ್ತಮುತ್ತಲಿನಿಂದಲೇ ನೇಮಕವಾಗಿದ್ದಾರೆ. ಹೀಗಾಗಿ ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೇವಲ ಪರೀಕ್ಷಾ ಕೇಂದ್ರಗಳಲ್ಲಿ ಉತ್ತರ ಬರೆದಿರುವುದು ಮಾತ್ರವಲ್ಲದೇ ಬ್ಲೂಟೂತ್ ಬಳಿಸಿ ಪರೀಕ್ಷೆ ಬರೆದಿರುವ ಸಂಖ್ಯೆ ಹೆಚ್ಚಾಗಿದೆ.

ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್
545 ಪಿಎಸ್ಐಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮಾಹಿತಿ ನಂತರ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ. ಇದರಲ್ಲಿ ಯಾರೇ ಶಾಮೀಲಾಗಿದ್ದರೂ ಕಟ್ಟು ನಿಟ್ಟಿನ ಕ್ರಮ ಜರುಗಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿದ್ದವರ ಪೈಕಿ ಈಗಾಗಲೇ ಕೆಲವರು ಬಂಧನಕ್ಕೆ ಒಳಗಾಗಿದ್ದರೆ. ತಪ್ಪಿತಸ್ಥರನ್ನು ಜೀವನ ಪರ್ಯಂತ ಅನರ್ಹಗೊಳಿಸಲಾಗುತ್ತದೆ. ಪ್ರತಿ ಉತ್ತರ ಹಾಳೆಯನ್ನು ಮೂರು ಬಾರಿ ಪರಿಶೀಲನೆ ನಡೆಸಲಾಗುತ್ತಿದೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

8 ಜನರನ್ನು ಬಂಧಿಸಲಾಗಿದೆ
ಈ ಪ್ರಕರಣದಲ್ಲಿ ಇದುವರೆಗೂ 8 ಜನರನ್ನು ಬಂಧಿಸಲಾಗಿದೆ. ಭಾನುವಾರ ಕಲಬುರಗಿಯ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪತಿ ರಾಜೇಶ್ ಬಂಧಿಸಿದ್ದು, ಅಧಿಕಾರಿಗಳು ವಾಹನ ವಶಕ್ಕೆ ಪಡೆದಿದ್ದರು. ಸೋಮವಾರ ಜ್ಞಾನ ಜ್ಯೋತಿ ಇಂಗ್ಲಿಶ್ ಮಾಧ್ಯಮ ಶಾಲೆಯ ಮೇಲೆ ಪೊಲೀಸರು ದಾಳಿ ಮಾಡಿದ್ದರು. ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಇನ್ನೂ ಪತ್ತೆಯಾಗಿಲ್ಲ. ಜ್ಞಾನಜ್ಯೋತಿ ಆಂಗ್ಲಮಾಧ್ಯಮ ಶಾಲೆಯ ದಿವ್ಯಾ ಹಾಗರಗಿ ಅಲ್ಲದೆ, ಮುಖ್ಯೋಪಾಧ್ಯಾಯರಾದ ಕಾಶಿನಾಥ್ ಹಾಗೂ ಸಹ ಶಿಕ್ಷಕಿ ಅರ್ಚನಾ ಎಂಬುವರು ಕಲಬುರಗಿಯ ಜೆಎಫ್ಎಂಎ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ.
Recommended Video

ಹುಬ್ಬಳ್ಳಿ ಗಲಭೆ ಪ್ರಕರಣ
ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಯಾರೆಲ್ಲಾ ತಪ್ಪು ಮಾಡಿದ್ದಾರೆ ಅವರಿಗೆ ಕಠಿಣ ಶಿಕ್ಷೆ ಆಗುತ್ತೆ.ನೇರವಾಗಿ ಭಾಗಿಯಾದವರನ್ನು ಬಂಧಿಸಲಾಗಿದೆ. ಪರೋಕ್ಷವಾಗಿ ಯಾರ ಕೈವಾಡವಿದೆ ಅದನ್ನ ಪತ್ತೆ ಹಚ್ಚುವ ಕೆಲಸ ಮಾಡಲಾಗುತ್ತಿದೆ. ಅವರನ್ನ ಕೂಡ ಬಂಧನ ಮಾಡಲಾಗುತ್ತೆ. ಸೋಷಿಯಲ್ ಮೀಡಿಯಾ ಬಹಳ ಕೇರ್ ಫುಲ್ ಬಳಕೆ ಮಾಡಬೇಕು. ಹಿಂದೂ ಮುಸ್ಲಿಂ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬೇಡದ ವಿಚಾರಗಳ ಗಮನ ಸೆಳೆಯುತ್ತಿದೆ. ಸಮಾಜದ ಶಾಂತಿ ಕೆಡಿಸುವವರು ಯಾರೇ ಆಗಿದ್ರು ಅವ್ರನ್ನ ಬಿಡಲ್ಲ ಎಂದರು
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications