ಫೇಸ್ಬುಕ್ ಸಿಂಗಂಗಳಿಗೆ ಡಿಜಿಪಿ ಸೂದ್ ಖಡಕ್ ವಾರ್ನಿಂಗ್ !
ಬೆಂಗಳೂರು, ಅ. 03: ಪೊಲೀಸ್ ಠಾಣೆಗಳಲ್ಲಿ ಠಾಣೆ ಕೆಲಸ ಬಿಟ್ಟು ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಸಮಾರಂಭ ಮಾಡುವಂತಿಲ್ಲ. ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಯಾವ ಪೊಲೀಸ್ ಸಿಬ್ಬಂದಿಯೂ ಸಾರ್ವಜನಿಕ ಸಭೆಗಳಿಗೆ ಅತಿಥಿಗಳಾಗಿ ಹೋಗುವಂತಿಲ್ಲ. ಫೋಟೋ ಸೆಷನ್ ವಿಡಿಯೋ ಮಾಡುವಂತಿಲ್ಲ. ವೈಟ್ ಕಾಲರ್ ಕ್ರಿಮಿನಲ್ಗಳ ಜತೆ ಸಂಪರ್ಕ ಬೆಳೆಸಿ ಫೋಟೋ ತೆಗೆಸಿಕೊಳ್ಳುವಂತಿಲ್ಲ. ಫೇಸ್ಬುಕಲ್ಲಿ ಅಭಿಮಾನಿ ಸಂಘ ಕಟ್ಟಿಕೊಳ್ಳುವಂತಿಲ್ಲ. ಸಿಂಗಂ ಎಂದು ಬಿಂಬಿಸುವ ವಿಡಿಯೋ ಹಾಕುವಂತಿಲ್ಲ!
ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ರಾಜ್ಯ ಪೊಲೀಸ್ ಠಾಣೆಗಳಿಗೆ ರವಾನಿಸಿರುವ ಸಂದೇಶವಿದು. ಅಭಿಮಾನಿ ಬಳಗ ಕಟ್ಟಿಕೊಂಡು ಫೇಸ್ ಬುಕ್ ನಲ್ಲಿ ಮಿಂಚುತ್ತಿದ್ದ ಪೊಲೀಸ್ ಸಿಂಗಂಗಳ ಸಾಮಾಜಿಕ ಜಾಲ ತಾಣದ ಅಭಿಮಾನಿ ಕೂಟಗಳಿಗೆ ಇದೀಗ ಬ್ರೇಕ್ ಬೀಳಲಿದೆ.
ಆದೇಶಕ್ಕೆ ನಾಂದಿ ಹಾಡಿದ ಪ್ರಕರಣ: ಹೊಸಕೋಟೆಯಲ್ಲಿ ಇತ್ತೀಚೆಗೆ ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗೆ ಬಡ್ತಿ ಹೊಂದಿದ ಪೊಲೀಸ್ ಅಧಿಕಾರಿ ಪೊಲೀಸ್ ಠಾಣೆಯಲ್ಲಿಯೇ ಸಮಾರಂಭ ಆಯೋಜಿಸಿದ್ದರು. ಕ್ರಿಮಿನಲ್ಗಳ ಜತೆ ತೆಗೆಸಿಕೊಂಡಿದ್ದ ಪೋಟೋ ಕೂಡ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಆ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ಕೆಲ ಪೊಲೀಸ್ ಅಧಿಕಾರಿಗಳು ಸಾಮಾಜಿಕ ಜಾಲ ತಾಣದಲ್ಲಿ ಅಭಿಮಾನಿ ಕೂಟ ಕಟ್ಟಿಕೊಂಡು "ಸಿಂಗಂ"ಎನಿಸಿಕೊಳ್ಳುತ್ತಿದ್ದವರ ಬಗ್ಗೆ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಅವರ ವೈಯಕ್ತಿಕ ಬರಹ ಪ್ರಕಟಿಸಿದ್ದರು.

ಇದು ಪೊಲೀಸ್ ವಲಯದಲ್ಲಿ ಭಾರೀ ಸಂಚಲನ ಮೂಡಿಸಿ ಚರ್ಚೆಗೆ ನಾಂದಿ ಹಾಡಿತ್ತು. ಇದಾದ ಬಳಿಕವೂ ಹಲವು ಪೊಲೀಸ್ ಅಧಿಕಾರಿಗಳ ಸಾಮಾಜಿಕ ಜಾಲ ತಾಣದಲ್ಲಿ ಅಭಿಮಾನಿ ಕೂಟ ಕಟ್ಟಿಕೊಂಡಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈ ಬೆಳವಣಿಗೆಗೆ ಸಂಪೂರ್ಣ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಮಹಾ ನಿರ್ದೇಶಕರು ಮಹತ್ವದ ಆದೇಶ ಹೊರಡಿಸಿದ್ದಾರೆ.
ಪೊಲೀಸ್ ಠಾಣೆಗಳು ಕೇವಲ ಸಾರ್ವಜನಿಕ ಸೇವೆಗೆ ಸೀಮಿತವಾಗಿರಬೇಕು. ಯಾವುದೇ ಸಭೆ ಸಮಾರಂಭ ಮಾಡಬಾರದು. ಅಪರಾಧಿಗಳ ಜತೆ ಸಂಪರ್ಕ ಹೊಂದಬಾರದು. ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಕಾರ್ಯಕ್ರಮ ಬಿಟ್ಟು ಬೇರೆ ಯಾವುದೇ ಕಾರ್ಯಕ್ರಮ ಮಾಡುವಂತಿಲ್ಲ. ಪ್ರಮುಖವಾಗಿ ಸಾಂಆಜಿಕ ಜಾಲ ತಾಣದಲ್ಲಿ ಬಿಲ್ಡಪ್ ವಿಡಿಯೋ ಹಾಕುವಂತಿಲ್ಲ. ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ರವಾನಿಸಿದ್ದಾರೆ. ಈ ಅದೇಶದ ಪ್ರತಿಯನ್ನು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ರವಾನಿಸಲಾಗಿದೆ.

ಸಿಂಗಂ ಪೇಜ್ಗಳು ಡಿಲೀಟ್ ಆಗುತ್ತವೆಯೇ?:
Recommended Video
ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಆದೇಶದ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಗಳು ಹಾಗೂ ಡಿವೈಏಸ್ಪಿಗಳು ಕೆಲವು ಪೋಸ್ಟ್ ಗಳನ್ನು ಡಿಲೀಟ್ ಮಾಡಿದ್ದಾರೆ. ಈಗಾಗಲೇ ಲಕ್ಷಾಂತರ ಅಭಿಮಾನಿ ಬಳಗ ಹೊಂದಿರುವ ಸಿಂಗಂ ಪೇಜ್ ಗಳು ಡಿಲೀಟ್ ಆಗುತ್ತವೆಯೇ ಎಂಬುದು ಸದ್ಯ ಎದ್ದಿರುವ ಪ್ರಶ್ನೆ. ಇತ್ತೀಚೆಗೆ ಕೆಲವು ಅಧಿಕಾರಿಗಳು ತಮ್ಮ ಪ್ರಚಾರವನ್ನು ಹೆಚ್ಚಿಸಿಕೊಳ್ಳಲು ಸಾಮಾಜಿಕ ಜಾಲ ತಾಣಗಳ ಮೊರೆ ಹೋಗಿರುವ ಆರೋಪವಿದೆ. ಮೈಸೂರು ಡಿಸಿ ರೋಹಿಣಿ ಸಿಂಧೂರಿ ಟ್ರೋಲ್ ಪೇಜ್ಗಳಿಗೆ ಪಾವತಿಸಿ ತನ್ನ ವ್ಯಕ್ತಿತ್ವ ಪ್ರಚುರ ಪಡಿಸಿಕೊಂಡಿದ್ದಾರೆ ಎಂಬ ಆರೋಪವನ್ನು ಪೊಲೀಸ್ ಅಧಿಕಾರಿಯೇ ಮಾಡಿದ್ದರು. ಅಂತೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಾಮಾಜಿಕ ಜಾಲ ತಾಣದ ಪ್ರಚಾರ ಮೇನಿಯಕ್ಕೆ ಬ್ರೇಕ್ ಹಾಕಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ನಾಂದಿ ಹಾಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications