ತಮಿಳುನಾಡು ರಾಜ್ಯಪಾಲರಾಗಿ ಡಿ.ಎಚ್.ಶಂಕರಮೂರ್ತಿ ಆಯ್ಕೆ?
ಬೆಂಗಳೂರು, ಆಗಸ್ಟ್ 11 : ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು ತಮಿಳುನಾಡು ರಾಜ್ಯಪಾಲರಾಗಿ ನೇಮಕವಾಗುವ ಸಾಧ್ಯತೆ ಇದೆ. ಸಂಸತ್ ಅಧಿವೇಶನ ಮುಗಿದ ಬಳಿಕ ಈ ಕುರಿತು ಆದೇಶ ಹೊರಬೀಳುವ ನಿರೀಕ್ಷೆ ಇದೆ.
ನೈಋತ್ಯ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ಆಯ್ಕೆಯಾಗಿರುವ ಡಿ.ಎಚ್.ಶಂಕರಮೂರ್ತಿ (76) ಅವರ ಸದಸ್ಯತ್ವದ ಅವಧಿ 2018ಕ್ಕೆ ಅಂತ್ಯಗೊಳ್ಳಲಿದೆ. ಅಷ್ಟರೊಳಗೆ ಅವರನ್ನು ರಾಜ್ಯಪಾಲರಾಗಿ ನೇಮಕ ಮಾಡುವ ಸಾಧ್ಯತೆ ಇದೆ.[ರಾಜ್ಯಪಾಲರು ಹಿಂದಿಯಲ್ಲೇಕೆ ಭಾಷಣ ಮಾಡಬೇಕು?]

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಈ ಕುರಿತು ಶಂಕರಮೂರ್ತಿ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಸದ್ಯ, ತಮಿಳುನಾಡು ರಾಜ್ಯಪಾಲರಾಗಿರುವ ರೋಸಯ್ಯ ಅವರ ಅವಧಿ ಆಗಸ್ಟ್ 31ಕ್ಕೆ ಅಂತ್ಯಗೊಳ್ಳಲಿದೆ.[ಕರ್ನಾಟಕ ಮಾಜಿ ರಾಜ್ಯಪಾಲ ಠಾಕೂರ್ ವಿಧಿವಶ]
ರೋಸಯ್ಯ ಅವರಿಂದ ತೆರವಾಗುವ ಸ್ಥಾನಕ್ಕೆ ಶಂಕರಮೂರ್ತಿ ಅವರನ್ನು ನೇಮಿಸಲು ಕೇಂದ್ರ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಸದ್ಯ ನಡೆಯುತ್ತಿರುವ ಸಂಸತ್ ಅಧಿವೇಶನ ಅಂತ್ಯಗೊಂಡ ಬಳಿಕ ಈ ಕುರಿತು ಆದೇಶ ಹೊರಬೀಳುವ ಸಾಧ್ಯತೆ ಇದೆ.[ಕರ್ನಾಟಕದ ಪ್ರಥಮ ಪ್ರಜೆಗಳ ಪಟ್ಟಿ 1956-2014]
1988ರಿಂದ ಶಂಕರಮೂರ್ತಿ ಅವರು ನೈಋತ್ಯ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ಆಯ್ಕೆ ಯಾಗುತ್ತಿದ್ದಾರೆ. ಪರಿಷತ್ ಸಭಾಪತಿಯಾಗಿಯೂ ಅವರು ಕೆಲಸ ಮಾಡುತ್ತಿದ್ದಾರೆ. ಉನ್ನತ ಶಿಕ್ಷಣ ಸಚಿವರಾಗಿ, ಪರಿಷತ್ ವಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications