ಸೈಕಲ್ ಏರಲು ಧನಂಜಯ್ ಕುಮಾರ್ ತಯಾರಿ?
ಬೆಂಗಳೂರು, ನ.4 : ಮಾಜಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಧನಂಜಯ್ ಕುಮಾರ್ ಸಮಾಜವಾದಿ ಪಕ್ಷ ಸೇರಲಿದ್ದಾರೆಯೇ?. ಪಕ್ಷ ಸೇರುವಂತೆ ಧನಂಜಯ್ ಕುಮಾರ್ ಅವರಿಗೆ ಈಗಾಗಲೇ ಸಮಾಜವಾದಿ ಪಕ್ಷದ ನಾಯಕರು ಆಹ್ವಾನ ನೀಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಅವರು ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷರಾಗುವ ಸಾಧ್ಯತೆ ಇದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಬಿಜೆಪಿ ಬಿಟ್ಟು ಕೆಜೆಪಿ ಸೇರಿದ್ದ ಧನಂಜಯ್ ಕುಮಾರ್, ನಂತರ ಬಿಜೆಪಿಗೆ ಮರಳಲಿಲ್ಲ. ಲೋಕಸಭೆ ಚುನಾವಣೆ ವೇಳೆ ಜೆಡಿಎಸ್ ಸೇರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಿ 14,895 ಮತಗಳನ್ನುಗಳಿಸಿ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. [ಲೋಕಸಭೆ ಚುನಾವಣೆ ಫಲಿತಾಂಶ]

ಆದರೆ, ಇತ್ತೀಚಿನ ಬೆಳವಣಿಗೆಯಂತೆ ದೆಹಲಿಯಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿ ಮಾಡಿ ಬಂದಿರುವ ಧನಂಜಯ್ ಕುಮಾರ್ ಸೈಕಲ್ ಪಕ್ಷ ಸೇರಲು ಮುಂದಾಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಧನಂಜಯ್ ಕುಮಾರ್ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷರಾಗಬಹುದು. [ಜೆಡಿಎಸ್ ಬಿಟ್ಟು ಹೋಗುವವರು ಸಂತೋಷದಿಂದ ಹೋಗಿ]
ಸೈಕಲ್ ಪಂಚರ್ : ಕರ್ನಾಟಕದಲ್ಲಿ ಸಮಾಜವಾದಿ ಪಕ್ಷ ನೆಲೆ ಕಂಡುಕೊಳ್ಳಲು ಪರದಾಡುತ್ತಿದೆ. ರಾಜ್ಯದ ಏಕೈಕ ಎಸ್ಪಿ ಶಾಸಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದಾರೆ. ಇನ್ನು ಉಳಿದವರು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಮಾತ್ರ.
ಕರ್ನಾಟಕದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ಮತ್ತು ವಿ.ಧನಂಜಯ್ ಕುಮಾರ್ ಹೆಸರು ಕೇಳಿಬರುತ್ತಿದೆ. ಕಳೆದ ತಿಂಗಳು ಲಕ್ನೋದಲ್ಲಿ ನಡೆದ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿಯೂ ಗೂಳಿಹಟ್ಟಿ ಅವರು ಪಾಲ್ಗೊಂಡಿದ್ದರು.
ಇವುಗಳ ಮಧ್ಯೆಯೇ ಧನಂಜಯ್ ಕುಮಾರ್ ದೆಹಲಿಯಲ್ಲಿ ಮುಲಾಯಂ ಸಿಂಗ್ ಯಾದವ್ ಭೇಟಿ ಮಾಡಿದ್ದು, ಹೊಸ ಲೆಕ್ಕಾಚಾರ ಹುಟ್ಟುಹಾಕಿದೆ. ನ.28ರಂದು ಧನಂಜಯ್ ಕುಮಾರ್ ಪುತ್ರನ ವಿವಾಹವಿದ್ದು, ಅದರಲ್ಲಿ ಅವರು ಬ್ಯುಸಿಯಾಗಿದ್ದಾರೆ. ಅದು ಮುಗಿದ ಬಳಿಕ ಮುಂದಿನ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಅಂದಹಾಗೆ ಅಬ್ದುಲ್ ಅಜೀಂ, ಸುನಿಲ್ ಹೆಗಡೆ ಈಗಾಗಲೇ ಜೆಡಿಎಸ್ ತೊರೆದಿದ್ದಾರೆ. ಧನಂಜಯ್ ಕುಮಾರ್ ಸೈಕಲ್ ಏರಿದರೆ ಅವರು ಪಕ್ಷ ತೊರೆಯುವುದು ಖಂಡಿತ. ಪಕ್ಷ ತೊರೆಯುವ ನಾಯಕರು ಸಂತೋಷದಿಂದ ಹೋಗಿ ಎಂದು ಎಚ್.ಡಿ.ದೇವೇಗೌಡರು ಈಗಾಗಲೇ ಖಡಕ್ ಸಂದೇಶ ರವಾನಿಸಿದ್ದಾರೆ. ಧನಂಜಯ್ ಕುಮಾರ್ ಪಕ್ಷ ತೊರೆಯುತ್ತಾರಾ?
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications