ಯಡಿಯೂರಪ್ಪ ಭೇಟಿ ಮಾಡಿದ ಧನಂಜಯ್ ಕುಮಾರ್!
ಬೆಂಗಳೂರು, ಮೇ 04 : 'ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಮುಗಿಸಿದ ಬಳಿಕ, ದಿನಾಂಕ ನಿಗದಿ ಮಾಡಿಕೊಂಡು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ' ಎಂದು ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಕುಮಾರ್ ಹೇಳಿದರು.
ಬುಧವಾರ ಧನಂಜಯ್ ಕುಮಾರ್ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಭೇಟಿ ಮಾಡಿದರು. ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ಧನಂಜಯ್ ಕುಮಾರ್ ಅವರು, 'ಬಿಜೆಪಿಗೆ ಮರಳುತ್ತೇನೆ' ಎಂದು ಘೋಷಿಸಿದರು. [ಬ್ರೇಕಿಂಗ್ ನ್ಯೂಸ್ ಕೊಟ್ಟ ಧನಂಜಯ್ ಕುಮಾರ್]

ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಅವರನ್ನು ಭೇಟಿ ಮಾಡಿದ್ದ ಧನಂಜಯ್ ಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದರು. ಅರಮನೆ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿಯೂ ಅವರು ಕಾಣಿಸಿಕೊಂಡಿದ್ದರು. ಅವರು ಪುನಃ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. [ಯಡಿಯೂರಪ್ಪಗೆ ಹೈಕಮಾಂಡ್ ನಾಯಕರು ಕೊಟ್ಟ ಸಂದೇಶ ಏನು?]
ಧನಂಜಯ್ ಕುಮಾರ್ ಹೇಳಿದ್ದೇನು? : ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ಧನಂಜಯ್ ಕುಮಾರ್ ಅವರು, 'ನಾನು ಪುನಃ ಬಿಜೆಪಿಗೆ ಸೇರುತ್ತೇನೆ. ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಮುಗಿಸಿಕೊಂಡು ಬಂದ ಬಳಿಕ, ದಿನಾಂಕ ನಿಗದಿ ಮಾಡಿಕೊಂಡು ಪಕ್ಷ ಸೇರುತ್ತೇನೆ' ಎಂದು ಹೇಳಿದರು. [ಧನಂಜಯ್ ಕುಮಾರ್ ಸಂದರ್ಶನ ಓದಿ]
'ಬಿಜೆಪಿ ಪಕ್ಷಕ್ಕೆ ನಾನು ಸೇರ್ಪಡೆಗೊಳ್ಳುವುದಕ್ಕೆ ಯಾವ ನಾಯಕರೂ ವಿರೋಧ ವ್ಯಕ್ತಪಡಿಸುವುದಿಲ್ಲ. ಹಿಂದಿನದನ್ನು ನಾನು ಮರೆತಿದ್ದೇನೆ. ಅವರು ಮರೆತಿರುತ್ತಾರೆ ಎಂಬ ನಂಬಿಕೆ ಇದೆ. ಪಕ್ಷ ಸಂಘಟನೆ ದೃಷ್ಟಿಯಿಂದ ಯಾವ ನಾಯಕರು ನಾನು ಪಕ್ಷಕ್ಕೆ ಮರಳುವುದನ್ನು ವಿರೋಧಿಸುವುದಿಲ್ಲ ಎಂಬ ವಿಶ್ವಾಸವಿದೆ' ಎಂದರು.
ಧನಂಜಯ್ ಕುಮಾರ್ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, 'ಧನಂಜಯ್ ಕುಮಾರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕುರಿತು ಹಿರಿಯ ನಾಯಕರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ' ಎಂದು ತಿಳಿಸಿದರು.
ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರು : ಧನಂಜಯ್ ಕುಮಾರ್ ಅವರು ಹಿಂದೆ ಯಡಿಯೂರಪ್ಪ ಅವರ ಜೊತೆಗೆ ಬಿಜೆಪಿ ಪಕ್ಷ ತೊರೆದು ಕೆಜೆಪಿ ಸೇರಿದ್ದರು. ಯಡಿಯೂರಪ್ಪ ಅವರು ಪಕ್ಷಕ್ಕೆ ಮರು ಸೇರ್ಪಡೆಯಾದರೂ ಧನಂಜಯ್ ಕುಮಾರ್ ಬಿಜೆಪಿ ಸೇರಿರಲಿಲ್ಲ.
2014ರ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಧನಂಜಯ್ ಕುಮಾರ್ ಅವರು, ಬಿಜೆಪಿಯ ಶೋಭಾ ಕರಂದ್ಲಾಜೆ ಅವರ ವಿರುದ್ಧ ಸೋಲು ಅನುಭವಿಸಿದ್ದರು. ಈಗ ಪುನಃ ಬಿಜೆಪಿಗೆ ಮರಳುವಾಗಿ ಘೋಷಣೆ ಮಾಡಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications