ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: 13 ಸ್ಥಳ ಗುರುತಿಸಿದ ದೂರುದಾರ ವ್ಯಕ್ತಿ, ಇಂದು 2 ಸ್ಥಳ ನಿರೀಕ್ಷೆ
ಧರ್ಮಸ್ಥಳ, ಜುಲೈ 29: ಧರ್ಮಸ್ಥಳ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮಹತ್ವದ ಬೆಳವಣಿಗೆ ನಡೆದಿದೆ. ಧರ್ಮಸ್ಥಳದಲ್ಲಿ ಸಾಕಷ್ಟು ಅಪರಾಧ ಕೃತ್ಯ ನಡೆದಿವೆ ಎಂದು ಹೇಳಿದ್ದ ಅನಾಮಿಕ ವ್ಯಕ್ತಿ (ಸಾಕ್ಷಿ ದೂರುದಾರ) ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಶವಗಳ ಹೂತ 13 ಜಾಗಗಳನ್ನು ತೋರಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ. ಇಂದು ಸಹ ಎರಡು ಸ್ಥಳ ಗುರುತಿಸುವ ನಿರೀಕ್ಷೆ ಇದೆ. ಮಹಜರು ಜೊತೆಗೆ ಇಂದು ಎರಡನೇ ದಿನ ಮಳೆಯಲ್ಲೇ ಗುಂಡಿ ಅಗೆಯುವ ಕಾರ್ಯ ನಡೆದಿದೆ.
ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿದ್ದೆ ಎಂದ ದೂರುದಾರ ವ್ಯಕ್ತಿ ಶವ ಅವಶೇಷಗಳಿರುವ ಜಾಗಗಳನ್ನು ಸೋಮವಾರ ತೋರಿಸಿದ್ದಾನೆ. ಇದರಲ್ಲಿ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮತ್ತು ಅರಣ್ಯ ವ್ಯಾಪ್ತಿಯ ಜಾಗಗಳು ಸೇರಿವೆ. ಆತ ತೋರಿಸಿದ್ದಂತೆ ಎಸ್ಐಟಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಂಡ ಜಾಗದಲ್ಲಿ ಟೇಪ್ ಕಟ್ಟಿದ್ದಾರೆ. ನಿರ್ದಿಷ್ಟ ಅಳತೆಯ ಜಾಗ ಗುರುತಿಸಿ ಎಲ್ಲವುಗಳಿಗೆ ಸಂಖ್ಯೆ ನೀಡಿದ್ದಾರೆ. ರಾತ್ರಿಯಿಡಿ ಆ ಅಲ್ಲಿ ಗಸ್ತು ನಿಯೋಜಿಸಲಾಗಿದೆ. ಈ ಮೂಲಕ ಧರ್ಮಸ್ಥಳ ಪ್ರಕರಣಗಳ ತನಿಖೆಗೆ ಮತ್ತಷ್ಟು ವೇಗ ಸಿಕ್ಕಂತಾಗಿದೆ. ಇಂದು ಮಂಗಳವಾರ ಸಹ ಸ್ಥಳ ಗುರುತಿಸುವುದು, ಮಹಜರು ಮುಂದುವರಿದಿದೆ.

ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ನದಿ ಬದಿಯಲ್ಲಿ ನೆನ್ನೆ ಮೊದಲ ಸ್ಥಳ ಗುರುತಿಸಿದ್ದ ವ್ಯಕ್ತಿ, ನಂತರ ಅರಣ್ಯ ಪರಿಸರದಲ್ಲಿ ಒಟ್ಟು ಎಂಟು ಸ್ಥಳ ಹೀಗೆ ಹದಿಮೂರು ಸ್ಥಳ ಗುರುತಿಸಿದ್ದಾನೆ. ಎಸ್ಐಟಿ ಸಿಬ್ಬಂದಿ ಮಹಜರು ನಡೆಸಿದ್ದಾರೆ. ಇಂದು ಮಂಗಳವಾರ ಸಹ ಅಧಿಕಾರಿಗಳ ತಂಡ ಸ್ಥಳದಲ್ಲಿ ಬೀಡು ಬಿಟ್ಟಿದೆ. ಎಸ್ಐಟಿ ಮಾತ್ರವಲ್ಲದೆ ವಿಧಿ ವಿಜ್ಞಾನದ ತಜ್ಞರು, ಭದ್ರತಾ ಸಿಬ್ಬಂದಿ ದೂರುದಾರನ ಜೊತೆ ಎರಡು ಕಿಲೋ ಮೀಟರ್ ಸುತ್ತಮುತ್ತ ಮಹಜರು ಎರಡನೇ ದಿನವು ಮುಂದುವರಿದಿದೆ.
ಜಾಗ ಗುರುತಿಸಿದ ಪ್ರಕ್ರಿಯೆ ಹೇಗಿತ್ತು?
ಮುಖಕ್ಕೆ ಮುಸುಕು ಹಾಕಿದ್ದ ವ್ಯಕ್ತಿಯನ್ನು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಕರೆದೊಯ್ಯಲಾಯಿತು. ಬೆಳಗ್ಗೆ 10 ಗಂಟೆ ಹೊತ್ತಿಗೆ ಅಧಿಕಾರಿಗಳು ಹಾಜರಿದ್ದರು. ನಂತರ ದೂರುದಾರ ವ್ಯಕ್ತಿಯನ್ನು ಬೆಳಗ್ಗೆ 11.50ರ ಹೊತ್ತಿಗೆ ತನಿಖಾಧಿಕಾರಿಗಳು ಧರ್ಮಸ್ಥಳದ ಸ್ಥಾನಘಟ್ಟದ ಕಡೆಗೆ ಕರೆದೊಯ್ದರು. ಆತ ಒಂದೊಂದಾಗೆ ತಾನು ಈ ಜಾಗದಲ್ಲಿ ಹೆಣ ಹೂತಿದ್ದೆ ಎಂದು ಜಾಗ ಗುರುತಿಸಿದೆ. ತನಿಖಾ ಸಿಬ್ಬಂದಿ ಆ ಸ್ಥಳದಲ್ಲಿ ಕೆಂಪು ಬಣ್ಣದ ಟೇಪ್ ಹಾಕಲು ಆರಂಭಿಸಿದರು.
ಬೆಳಗ್ಗೆಯಿಂದ ಮಧ್ಯಾಹ್ನ ವರೆಗೆ ಒಂದಷ್ಟು ಜಾಗಗಳು ನಂತರ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಊಟ ಮಾಡಿದ ಬಳಿಕ ಮತ್ತೆ ಕಾಡಿನೊಳ್ಳಕ್ಕೆ ಮುಸುಕುದಾರಿ ವ್ಯಕ್ತಿಯನ್ನು ಕರೆದೊಯ್ದ ತನಿಖಾಧಿಕಾರಿಗಳಿಗೆ ಮತ್ತೆ ನಾಲ್ಕು ಸ್ಥಳಗಳನ್ನು ತೋರಿಸಿದ್ದಾರೆ. ಇತ್ತೀಚೆಗೆ ಸಾಕ್ಷಿ ದೂರದಾರನನ್ನು ಶನಿವಾರ ಮತ್ತು ಭಾನುವಾರ ಮಂಗಳೂರಿನ ಕಚೇರಿಯಲ್ಲಿ ತನಿಖಾಧಿಕಾರಿಗಳು ವಿಚಾರಣೆ ನಡೆಸಿದ್ದರು. ಸ್ಥಳ ಮಹಜರು ಸೇರಿದಂತೆ, ದೂರು, ಹೂತಿಟ್ಟ ಶವಗಳ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications