Get Updates
Get notified of breaking news, exclusive insights, and must-see stories!

Dharmasthala Case: ಧರ್ಮಸ್ಥಳ ಪ್ರಕರಣ: ನೀವು ಜನ ಪ್ರತಿನಿಧಿಗಳಾ.. ಅಥವಾ ಇನ್ಯಾರದೋ ದಲ್ಲಾಳಿಗಳಾ ಎಂದ ನಟ ಪ್ರಕಾಶ್‌ ರಾಜ್‌!

Dharmasthala Case: ಧರ್ಮಸ್ಥಳದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಹಲವು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಚುರುಕುಪಡೆದುಕೊಂಡಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಷಯದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿರುವಾಗಲೇ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಅವರು ನೀಡಿರುವ ಹೇಳಿಕೆಯು ಚರ್ಚೆಗೆ ಕಾರಣವಾಗಿದೆ. ಇದೀಗ ನಟ ಪ್ರಕಾಶ್ ರಾಜ್‌ ಅವರು ಈ ವಿಚಾರದಲ್ಲಿ ಬಿಜೆಪಿ ಹಾಗೂ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಅವರಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಇನ್ನು ಅನಾಮಧೇಯ (ದೂರುದಾರ) ವ್ಯಕ್ತಿಯು ಧರ್ಮಸ್ಥಳದ ನೇತ್ರಾವತಿ ಸ್ನಾನಘ ಟ್ಟದ ಸಮೀಪದಲ್ಲೇ 13 ಜಾಗಗಳನ್ನು ತೋರಿಸಿದ್ದು. ಎಸ್‌ಐಟಿ ಅಧಿಕಾರಿಗಳು ಅತ್ಯಂತ ಸೂಕ್ಷ್ಮವಾಗಿ ಈ ಪ್ರದೇಶಗಳಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಈ ಜಾಗಗಳ ಜಿಪಿಎಸ್ ಗುರುತು ಮಾಡಲಾಗಿದೆ. ಆದರೆ, ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಅವರು ಈ ಪ್ರಕರಣದಲ್ಲಿ ಗಂಭೀರ ಆರೋಪವೊಂದನ್ನು ಮಾಡಿದ್ದು. ಇದೀಗ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಅವರ ಹೇಳಿಕೆಗೆ ನಟ ಪ್ರಕಾಶ್ ರಾಜ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Dharmasthala case Actor Prakash Raj asks R Ashok if he is a representative of the people or someone else s agent

ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ನಟ ಪ್ರಕಾಶ್ ರಾಜ್ ಅವರು, ಅಲ್ರೀ ಆರ್‌. ಅಶೋಕ್ ಬಿಜೆಪಿ ಅವರೆ, ದಶಕಗಳಿಂದ ನಮ್ಮ ಹೆಣ್ಣು ಮಕ್ಕಳ ಅತ್ಯಾಚಾರಗಳಾಗಿವೆ. ಅಮಾನವೀಯ ಹತ್ಯೆಗಳಾಗಿವೆ, ಜನರ ಆಕ್ರೋಶ ಭುಗಿಲೆದ್ದಿದೆ. ಕೊನೆಗೂ ಸರ್ಕಾರ ಸ್ಪಂದಿಸಿ SIT ರಚನೆಯಾಗಿದೆ ತನಿಖೆ ನಡೆಯುತಿದೆ. ಮಧ್ಯದಲ್ಲಿ ನಿಮ್ದೇನ್ರಿ .ನೀವು ಜನ ಪ್ರತಿನಿಧಿಗಳಾ.. ಅಥವಾ ಇನ್ಯಾರದೋ ದಲ್ಲಾಳಿಗಳಾ.. #justasking #DharmasthalaHorror ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ನಟ ಪ್ರಕಾಶ್‌ ರಾಜ್ ಅವರ ಟ್ವೀಟ್ ಇದೀಗ ವೈರಲ್ ಆಗುತ್ತಿದೆ.

ಆರ್‌. ಅಶೋಕ್ ಹೇಳಿದ್ದೇನು: ಧರ್ಮಸ್ಥಳ ಪ್ರಕರಣದಲ್ಲಿ ಆರೋಪ ಮಾಡುತ್ತಿರುವವರು ಮುಸ್ಲಿಮರು. ಅಲ್ಲದೇ ಇದಕ್ಕೆ ಬೆಂಬಲ ಕೊಡುತ್ತಿರುವುದು ಕೇರಳ ಸರ್ಕಾರ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ದೂರಿದ್ದಾರೆ. ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚನೆ ಮಾಡಿರುವುದಕ್ಕೆ ಧರ್ಮಸ್ಥಳದವರೂ ಸ್ವಾಗತಿಸಿದ್ದಾರೆ. ನಾನೂ ತನಿಖೆಯನ್ನು ಸ್ವಾಗತಿಸುತ್ತೇನೆ. ಮೊದಲು ತನಿಖೆ ನಡೆಯಲಿ ತಪಿತಸ್ಥರು ಯಾರೆಂದು ಸತ್ಯಾಂಶ ತಿಳಿಯಲಿ ಎಂದಿದ್ದಾರೆ.

ಇನ್ನು ಧರ್ಮಸ್ಥಳದ ಮಂಜುನಾಥನಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಈ ಪ್ರಕರಣಗಳ ಹಿಂದೆ ಯಾರೇ ಇದ್ದರೂ ಅವರಿಗೆ ಶಿಕ್ಷೆ ಆಗಲಿ. ಇದು ಒಂದು ಪಿತೂರಿಯ ಭಾಗವಾಗಿದೆಯಷ್ಟೇ ಮೊದಲು ಬುರುಡೆಗಳು ಸಿಗಲಿ ಆ ಮೇಲೆ ಎಲ್ಲವೂ ಗೊತ್ತಾಗಲಿದೆ ಎಂದು ಆರ್‌. ಅಶೋಕ್‌ ಅವರು ಹೇಳಿದ್ದರು. ಈ ಹೇಳಿಕೆಯನ್ನು ಪ್ರಕಾಶ್‌ ರಾಜ್‌ ಅವರು ಗಂಭೀರವಾಗಿ ಖಂಡಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+