Dharmasthala Case: ಧರ್ಮಸ್ಥಳ ಕೇಸ್ ಬಗ್ಗೆ ನಟಿ ರಮ್ಯಾ ಪೋಸ್ಟ್; ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸಂಚಲನ
ಬೆಂಗಳೂರು, ಜುಲೈ 20: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಚರ್ಚೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನ ಹೂತಿಟ್ಟ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಇದೀಗ ಧರ್ಮಸ್ಥಳ ಕೇಸ್ಗೆ ಸಂಬಂಧಿಸಿದಂಯೆ ನಟಿ ರಮ್ಯಾ ದಿವ್ಯಾ ಸ್ಪಂದನ ಕೂಡ ಟ್ವೀಟ್ ಮಾಡಿದ್ದಾರೆ.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಈ ಕೇಸ್ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದ್ದು, ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಯಲಿ, ಎಸ್ಐಟಿ ರಚನೆಯಾಗಲಿ ಎಂದು ಆನೇಕರು ಆಗ್ರಹಿಸಿದ್ದರು. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ಕೂಡ ಟ್ವೀಟ್ ಮಾಡುವ ಮೂಲಕ ಸತ್ಯದ ಪರ ಧ್ವನಿಯೆತ್ತಿದ್ದರು. ಧರ್ಮಸ್ಥಳದಲ್ಲಿ ಸಾಮೂಹಿಕ ಸಮಾಧಿ ಮತ್ತು ಮಹಿಳೆಯರ ನಾಪತ್ತೆ ಘಟನೆಗಳ ಬಗ್ಗೆ ಕೇಳಿ ನನಗೆ ತುಂಬಾ ಆಘಾತವಾಗಿದೆ. ಧರ್ಮಸ್ಥಳ ಎಂಬುದು ಅನೇಕ ಮಂದಿಗೆ ಆರಾಧನೆಯ ಸ್ಥಳವಾಗಿದೆ. ಕರ್ನಾಟಕದ ಜನರು ಈ ಪೂಜ್ಯ ಸ್ಥಳವನ್ನು ಹೆಚ್ಚು ಗೌರವಿಸುತ್ತಾರೆ. ಈ ಪ್ರಕರಣದ ಬಗ್ಗೆ ನ್ಯಾಯಯುತ ತನಿಖೆಯಾಗಬೇಕು ಎಂದು ನಾನು ಆಶಿಸುತ್ತೇನೆ. ನಾವು ಸತ್ಯವನ್ನು ತಿಳಿದುಕೊಳ್ಳಬೇಕು ಎಂದು ನಟಿ ರಮ್ಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದರು.

ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ.
ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇದೀಗ ತನಿಖಾ ತಂಡವನ್ನ ರಚನೆ ಮಾಡಿದೆ. ಧರ್ಮಸ್ಥಳ ಆರೋಪಗಳ ತನಿಖೆಗಾಗಿ ಕರ್ನಾಟಕದ ಮುಖ್ಯಮಂತ್ರಿಗಳು ಎಸ್ಐಟಿಯನ್ನು ರಚಿಸಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳು ಮತ್ತು ನ್ಯಾಯಯುತ ತನಿಖೆ ನಡೆಸಲು ಅವರಿಗೆ ಮುಕ್ತ ಅವಕಾಶ ನೀಡಲಾಗುವುದು ಎಂದು ನಾನು ಭಾವಿಸುತ್ತೇನೆ ಎಂದು ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?
ಇದೀಗ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧರ್ಮಸ್ಥಳ ಕೇಸ್ ವಿಚಾರವಾಗಿ ಟ್ವೀಟ್ ಮಾಡಿದ್ದು, ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ.
ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ. ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications