Dharmasthala Case: ಧರ್ಮಸ್ಥಳ ಪ್ರಕರಣ: "ಭೀಮ"ನಿಗೆ ಎಸ್ಐಟಿ ತನಿಖಾ ತಂಡದಿಂದಲೇ ಬೆದರಿಕೆ, ಗಂಭೀರ ಆರೋಪ!
Dharmasthala Investigation: ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳಿಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ. ಎಸ್ಐಟಿ ತಂಡವು ತೀವ್ರವಾಗಿ ವಿಚಾರಣೆ ಹಾಗೂ ಸಂಶೋಧನೆ ನಡೆದಿದೆ. ಆದರೆ ದೂರುದಾರನ ಮೇಲೆ ಒತ್ತಡ ಹೇರಲಾಗುತ್ತಿದೆ ಹಾಗೂ ಎಸ್ಐಟಿ ತಂಡದ ಅಧಿಕಾರಿಯೊಬ್ಬರಿಂದಲೇ ಬೆದರಿಕೆ ಬಂದಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವರ್ಷಗಳ ಹಿಂದೆ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನುವ ವಿಚಾರವು ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ವಿಷಯವು ಭಾರತದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ಜನರ ಒತ್ತಾಯಕ್ಕೆ ಮಣಿದು ಕೊನೆಗೂ ವಿಶೇಷ ತನಿಖಾ ದಳ (ಎಸ್ಐಟಿ)ವನ್ನು ರಚನೆ ಮಾಡಿದೆ. ಆದರೆ, ಇದೀಗ ದೂರುದಾರ / ಭೀಮನಿಗೆ ಎಸ್ಐಟಿ ತಂಡದಲ್ಲಿರುವ ಅಧಿಕಾರಿಯಿಂದಲೇ ಗಂಭೀರವಾದ ಬೆದರಿಕೆ ಬಂದಿದೆ ಎಂದು ದೂರುದಾರರ ಪರ ಇರುವ ವಕೀಲರು ಆರೋಪ ಮಾಡಿದ್ದಾರೆ.

ವಕೀಲರಾದ ಅನನ್ಯ ಗೌಡ ಅವರು, ನಮ್ಮ ಕಕ್ಷಿದಾರರಿಗೆ ಬೆಳ್ತಂಗಡಿಯ ಎಸ್ಐಟಿ ಕಚೇರಿಯಲ್ಲಿ ಅಧಿಕಾರಿಯೊಬ್ಬರು ಆಗಸ್ಟ್ 1 ರಂದು ಬೆದರಿಕೆ ಹಾಕಿದ್ದಾರೆ. ನೀನು ಈ ವಿಷಯದಲ್ಲಿ ಗಂಭೀರವಾದ ಪರಿಣಾಮವನ್ನು ಎದುರಿಸಬೇಕಾಗಿತ್ತು. ಹಲವು ವರ್ಷಗಳ ಕಾಲ ನೀನು ಬಂಧನಕ್ಕೆ ಒಳಗಾಗಲಿದ್ದೀಯ ಎಂದು ಬೆದರಿಸಿದ್ದಾರೆ. ಹೀಗಾಗಿ ಆ ಅಧಿಕಾರಿಯನ್ನು ಎಸ್ಐಟಿ ತನಿಖಾ ತಂಡದಿಂದ ಕೂಡಲೇ ಹೊರಕ್ಕೆ ಕಳುಹಿಸಬೇಕು. ನಮ್ಮ ಕಕ್ಷಿದಾರರು ಮುಕ್ತವಾಗಿ ಹಾಗೂ ನಿರ್ಭಯವಾಗಿ ತನಿಖೆಗೆ ಸಹಕರಿಸುವುದಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಈ ಸಂಬಂಧ ಎಸ್ಐಟಿಗೆ ಮೇಲ್ ಮಾಡಲಾಗಿದೆ. ಇನ್ನು ಈ ದೂರಿನ ಬಗ್ಗೆ ಪರಿಶೀಲನೆ ಮಾಡುವುದಾಗಿ ಎಸ್ಐಟಿ ಹೇಳಿದೆ ಎಂದು ಹೇಳಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ: ಇನ್ನು ಭೀಮನಿಗೆ ಬೆದರಿಕೆ ಹಾಕಲಾಗುತ್ತಿದೆ. ಅವನ ಮೇಲೆ ಒತ್ತಡ ಹೇರಲಾಗುತ್ತಿದೆ ಎನ್ನುವುದು ಆಕ್ರೋಶಕ್ಕೆ ಕಾರಣವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಜನ ಇದರ ಬಗ್ಗೆ ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ












Click it and Unblock the Notifications