Get Updates
Get notified of breaking news, exclusive insights, and must-see stories!

Dharmasthala Case: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ವೀರೇಂದ್ರ ಹೆಗ್ಗಡೆ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು, ಆಗಸ್ಟ್‌ 19: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಅನಾಮಿಕನೊಬ್ಬ ದೂರು ನೀಡಿರುವುದು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿದೆ. ಅನಾಮಿಕನ ದೂರಿನ ಬೆನ್ನಲ್ಲೇ ತನಿಖೆಗಾಗಿ ಎಸ್ಐಟಿ ಕೂಡ ರಚನೆಯಾಗಿತ್ತು. ಬರೋಬ್ಬರಿ 20 ದಿನಗಳ ಕಾಲ ಎಸ್ಐಟಿ ತಂಡ ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದೆ. ಇದರ ಮಧ್ಯ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಮೊದಲ ಬಾರಿಗೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಪಿಟಿಐಗೆ ಶ್ರೀಕ್ಷೇತ್ರದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರು ನೀಡಿರುವ ಸಂದರ್ಶನದಲ್ಲಿ ಮಾತನಾಡಿ, ಧರ್ಮಸ್ಥಳದ ಬಗ್ಗೆ ಗೊಂದಲ ಮೂಡಿಸುತ್ತಿದ್ದಾರೆ. ಎಸ್‌ಐಟಿ ತನಿಖೆಗೆ ನಮ್ಮ ಸಂಪೂರ್ಣ ಬೆಂಬಲ ಇದ್ದು, ಸತ್ಯ ಹೊರ ಬರಲಿದೆ ಎಂಬ ವಿಶ್ವಾಸ ಇದೆ. ಸೌಜನ್ಯ ಕೇಸ್‌ನಲ್ಲಿ ನಾನು ಸರ್ಕಾರಕ್ಕೆ ಮಾಹಿತಿ ನೀಡಿ, ತಕ್ಷಣವೇ ಅಪರಾಧಿಯನ್ನು ಪತ್ತೆಹಚ್ಚುವಂತೆ ಮಾಡಿದೆ. ಪೊಲೀಸರಿಗೆ ಮಾಹಿತಿ ನೀಡುವುದನ್ನು ಬಿಟ್ಟು ನಮಗೆ ಬೇರೆ ಯಾವುದೇ ವಿಚಾರ ನಮಗೆ ಸಂಬಂಧವಿಲ್ಲ.

Dharmasthala Case D Veerendra Heggade First Reaction

ಘಟನೆ ನಡೆದಾಗ ನಮ್ಮ ಕುಟುಂಬದ ಸದಸ್ಯರು ದೇಶದಲ್ಲೇ ಇರಲಿಲ್ಲ. ಅವರು ಶಿಕ್ಷಣಕ್ಕಾಗಿ ವಿದೇಶದಲ್ಲಿದ್ದರು. ಆದರೂ, ಅವರೇ ಈ ಕೃತ್ಯ ಎಸಗಿದ್ದಾರೆ ಎಂದು ಸುಳ್ಳು ಆರೋಪಗಳನ್ನು ಹೊರಿಸಲಾಯಿತು. ನಮ್ಮನ್ನು ಅನಾವಶ್ಯಕವಾಗಿ ಈ ಪ್ರಕರಣದಲ್ಲಿ ಎಳೆದು ತರಲಾಗಿದೆ ಎಂದು ವೀರೇಂದ್ರ ಹೆಗ್ಗಡೆ ಅವರು ಬೇಸರ ವ್ಯಕ್ತಪಡಿಸಿದರು. ನಾವು ಯಾವುದೇ ರೀತಿಯ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧರಿದ್ದೇವೆ. ನಾವು ಏನನ್ನೂ ಮುಚ್ಚಿಟ್ಟಿಲ್ಲ. ಯಾವುದೇ ತನಿಖೆಯನ್ನು ನಾವು ಸ್ವಾಗತಿಸುತ್ತೇವೆ. ಎಸ್‌ಐಟಿ ತನಿಖೆಯ ಅಂತಿಮ ವರದಿಗಾಗಿ ನಾವು ಕಾಯುತ್ತಿದ್ದೇವೆ ಎಂದು ಹೇಳಿದರು.

ಭಕ್ತರನ್ನು ದಾರಿ ತಪ್ಪಿಸಲು ಸಾಮಾಜಿಕ ಮಾಧ್ಯಮಗಳಲ್ಲಿ ಈ ಆರೋಪಗಳನ್ನು ಮಾಡಲಾಗಿದೆ. ಇದರಿಂದ ತೀವ್ರ ನೋವುಂಟಾಗಿದೆ. ಈ ಕುರಿತು ತನಿಖೆಗೆ ಕರ್ನಾಟಕ ಸರಕಾರ ವಿಶೇಷ ತನಿಖಾ ತಂಡ(ಎಸ್ಐಟಿ)ವನ್ನು ರಚಿಸಿರುವುದನ್ನು ಸ್ವಾಗತ, ಎಸ್ಐಟಿ ರಚಿಸಿರುವುದು ಒಳ್ಳೆಯದಾಗಿದೆ. ಸತ್ಯ ಎಲ್ಲರಿಗೂ ತಿಳಿಯಲು ಆದಷ್ಟು ಬೇಗ ತನಿಖೆ ಪೂರ್ಣಗೊಳ್ಳಲಿ. ನಾವು ನಮ್ಮ ಎಲ್ಲಾ ದಾಖಲೆಗಳನ್ನು ತೆರೆದಿಟ್ಟಿದ್ದೇವೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸಲು ಸಿದ್ಧರಿದ್ದೇವೆ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯುತ್ತಿಲ್ಲ. ಎಲ್ಲಾ ಶೈಕ್ಷಣಿಕ ಮತ್ತು ಸಾಮಾಜಿಕ ಸಂಸ್ಥೆಗಳು ಟ್ರಸ್ಟ್ ಅಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದೆ. ನಮ್ಮ ಕುಟುಂಬದ ಒಡೆತನದ ಆಸ್ತಿ ಬಹಳ ಕಡಿಮೆಯಿದೆ. ಹೆಚ್ಚಿನ ಆಸ್ತಿಯು ಟ್ರಸ್ಟ್‌ನದ್ದಾಗಿದೆ ಮತ್ತು ಅದಕ್ಕೆ ದಾಖಲೆಗಳಿವೆ. ಕಳೆದ 14 ವರ್ಷಗಳಿಂದ ಧರ್ಮಸ್ಥಳದ ವಿರುದ್ಧ ಸುಳ್ಳು ಪ್ರಚಾರ ನಡೆಯುತ್ತಿದ್ದರೂ ನಾವು ಅಚಲವಾಗಿ ನಮ್ಮ ಸಮಾಜ ಸೇವೆಯನ್ನು ಮುಂದುವರಿಸಿದ್ದೇವೆ ಎಂದು ಶ್ರೀಕ್ಷೇತ್ರದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+