ಧರ್ಮಸ್ಥಳ ಪ್ರಕರಣ: ಆ ಅಯೋಗ್ಯ ಹೇಳಿದ್ದಕ್ಕೆ ಧರ್ಮಸ್ಥಳ ತನಿಖೆ, ಸ್ಫೋಟಕ ಮಾಹಿತಿ ಹಂಚಿಕೊಂಡ ಪ್ರಹ್ಲಾದ್ ಜೋಶಿ! Dharmasthala Case
Dharmasthala Case: ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಮುಂದುವರಿದಿದೆ. ಆದರೆ ಎಸ್ಐಟಿ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಭಾರೀ ಪರ - ವಿರೋಧ ವ್ಯಕ್ತವಾಗುತ್ತಿದೆ. ಧರ್ಮಸ್ಥಳ ಕ್ಷೇತ್ರದಲ್ಲಿ ಎಸ್ಐಟಿ ತನಿಖೆ ನಡೆಸುವುದಕ್ಕೆ ಆ ಅಯೋಗ್ಯ ಹೇಳಿರುವುದೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಹ್ಲಾದ್ ಜೋಶಿ ಅವರು ಯಾರನ್ನು ಅಯೋಗ್ಯ ಎಂದರು ಹಾಗೂ ಧರ್ಮಸ್ಥಳ ವಿಚಾರವಾಗಿ ಅವರು ಮಾತನಾಡಿದ ಸ್ಫೋಟಕ ವಿಚಾರಗಳು ಏನು ಎನ್ನುವ ವಿವರ ಇಲ್ಲಿದೆ.
ಕರ್ನಾಟಕದ ಧರ್ಮಸ್ಥಳ ವಿಚಾರವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲ ಅಂತಾರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗೆ ಕಾರಣವಾಗಿದೆ. ಧರ್ಮಸ್ಥಳದ ವಿವಿಧ ಪ್ರದೇಶಗಳಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಆ ವಿಷಯದ ಬಗ್ಗೆ ಎಸ್ಐಟಿ ತನಿಖೆ ಮುಂದುವರಿದಿದೆ. ವಿವಿಧ ಜಾಗಗಳಲ್ಲಿ ಉತ್ಖನನ ಮಾಡಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಈ ರೀತಿ ಇರುವಾಗಲೇ ಮಹತ್ವದ ಮಾಹಿತಿಯನ್ನು ಪ್ರಹ್ಲಾದ್ ಜೋಶಿ ಅವರು ಹಂಚಿಕೊಂಡಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರ ಹಾಗೂ ನಡೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಖಂಡಿಸಿದ್ದಾರೆ. ಮುಸ್ಲಿಂ ಲೀಗ್ ಸೇರಿದಂತೆ ಹಲವು ಹಿಂದೂ ವಿರೋಧಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಕಾಂಗ್ರೆಸ್ ದೇಶದಲ್ಲಿಯೇ ಹಿಂದೂ ದೇವಾಲಯಗಳನ್ನು ಮುಚ್ಚುವ ಪ್ರಯತ್ನ ನಡೆಸಿದೆ ಎನ್ನುವ ಗಂಭೀರವಾದ ಆರೋಪವನ್ನು ಪ್ರಹ್ಲಾದ್ ಜೋಶಿ ಅವರು ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಧರ್ಮಸ್ಥಳದ ವಿಚಾರವಾಗಿ ಯಾವ ಕಾರಣಕ್ಕಾಗಿ ಎಸ್ಐಟಿ ರಚನೆ ಮಾಡಲಾಗಿದೆ ಎನ್ನುವ ಬಗ್ಗೆಯೂ ಮಾತನಾಡಿದ್ದಾರೆ.
ಯಾರೋ ಅಯೋಗ್ಯ ಹೇಳಿದಾ ಅಂತಾ ಧರ್ಮಸ್ಥಳ ಪ್ರಕರಣವನ್ನು ತನಿಖೆ ಮಾಡುವುದಕ್ಕೆ ಕೊಟ್ಟಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ವಿರುದ್ಧ ಬಾಯಿಗೆ ಬಂದ ರೀತಿ ಮಾತನಾಡಿದ್ದಾರೆ. ಈ ರೀತಿಯ ಅಯೋಗ್ಯರು ಎಲ್ಲಿ ಹುಡುಕಿದರೂ ಸಿಗುವುದಿಲ್ಲ ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ. ಈ ಸರ್ಕಾರಕ್ಕೆ ಯಾವುದೇ ಬದ್ಧತೆ ಎನ್ನುವುದೇ ಇಲ್ಲ. ಇವರು ಎರಡು ದೋಣಿಗಳ ಮೇಲೆ ಕಾಲಿರಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಹೇಳಿಕೆಗಳೇ ಉದಾ ಎಂದು ಜೋಶಿ ಅವರು ಹೇಳಿದ್ದಾರೆ.
ಭಿನ್ನ ಹೇಳಿಕೆ: ಇನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಧರ್ಮಸ್ಥಳ ಪ್ರಕರಣದ ವಿಚಾರದಲ್ಲಿ ಯಾವ ರೀತಿ ಬೇರೆ ಬೇರೆ ಹೇಳಿಕೆಗಳನ್ನು ಕೊಟ್ಟಿದ್ದಾರೆ ಎನ್ನುವ ಬಗ್ಗೆಯೂ ಪ್ರಹ್ಲಾದ್ ಜೋಶಿ ಅವರು ಮಾತನಾಡಿದ್ದಾರೆ. ಅದರಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ನಡೆದಿದೆ ಎಂದು ಹೇಳಿರುವ ಬಗ್ಗೆಯೂ ಅವರು ಮಾತನಾಡಿದ್ದಾರೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications