ಐದು ದಿನಗಳ ವಿಜೃಂಭಣೆಯ ಲಕ್ಷದೀಪ ಉತ್ಸವಕ್ಕೆ ತೆರೆ
ಧರ್ಮಸ್ಥಳ, ನ.24: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪುಣ್ಯ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ವಿಶೇಷ ಪೂಜೆ ಪುನಸ್ಕಾರದ ಜತೆಗೆ ಸರ್ವಧರ್ಮ ಸಮ್ಮೇಳನ, ವಿಜ್ಞಾನ ಮತ್ತು ತಂತ್ರಜ್ಞಾನ ವಸ್ತು ಪ್ರದರ್ಶನ, ಲಕ್ಷದೀಪೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನವಾಗಿದೆ. ಅಂತಿಮ ದಿನದ ವರದಿ ಇಲ್ಲಿದೆ..ಫೋಟೋ: ಶ್ರೇಯಸ್
ಐದು ದಿನಗಳ ವಿಜೃಂಭಣೆಯ ಲಕ್ಷದೀಪೋತ್ಸವಕ್ಕೆ ಅದ್ದೂರಿಯಾಗಿ ತೆರೆ ಎಳೆಯಲಾಗಿದೆ. ಐದನೇ ದಿನ ಶ್ರೀಸ್ವಾಮಿಗೆ ಗೌರಿಮಾರುಕಟ್ಟೆ ಉತ್ಸವ ನಡೆಯತು. ಹೂ ಹಣ್ಣುಗಳಿಂದ ಸಿಂಗರಿಸಿದ ಬೆಳ್ಳಿ ರಥ ದೇವಸ್ಥಾನದ ಮುಂಭಾಗದಿಂದ ಹೊರಟು, ನೆರದಿದ್ದ ಲಕ್ಷ, ಲಕ್ಷ ಭಕ್ತರ ನಡುವೆ, ರಥಿಬೀದಿಯಾಗಿ ಗೌರಿಮಾರುಕಟ್ಟೆಗೆ ಸಾಗಿತು. [ಗ್ಯಾಲರಿ: ಧರ್ಮಸ್ಥಳದ ದೀಪಾಲಂಕಾರ ವೈಭವ]
ಉತ್ಸವದುದ್ದಕ್ಕೂ ನಾದ ಸ್ವರಗಳು, ವಾಲಗ, ಡೊಳ್ಳು ಕುಣಿತ, ಶಂಖದಾಸರು ಮತ್ತು ಕಹಳೆ, ವೀರಗಾಸೆಯರು, ಬ್ಯಾಂಡ ಸೆಟ್ಟುಗಳು ಸಾಥ್ ನೀಡಿದವು. ಆ ಮೂಲಕ ಇಡೀ ಧರ್ಮಸ್ಥಳವೇ ಭಕ್ತಿ ಬಾವದಲ್ಲಿ ಲೀನಾವಾಗುವಂತೆ ಮಾಡಿದರು. ಮುಖ್ಯಧ್ವಾರದ ಎಡಬದಿಯ ಗೌರಿಮಾರುಕಟ್ಟೆಗೆ ತಲುಪಿದ ಶ್ರೀಸ್ವಾಮಿಯ ಉತ್ಸವ ಮೂರ್ತಿಗೆ ವಿಧ ವಿಧದ ದೀಪಗಳಿಂದ ಮಂಗಳಾರತಿ ನೇರವೇರಿಸಿ ಪೂಜಾ, ವಿಧ ವಿಧಾನಗಳನ್ನು ಪೂರೈಸಲಾಯಿತು. [ಲಲಿತೋದ್ಯಾನ ಉತ್ಸವದ ಚಿತ್ರಗಳು]
ನಂತರ ಉತ್ಸವ ದೇವಸ್ಥಾನಕ್ಕೆ ಆಗಮಿಸಿ ಮಂಜುನಾಥನ ಸನ್ನಿಧಿಯಲ್ಲಿ ಉತ್ಸವ ಮೂರ್ತಿಯನ್ನು ಕೂರಿಸಿ ಭಕ್ತಾದಿಗಳಿಗೆ ಪ್ರಸಾದವನ್ನು ವಿತರಿಸಾಲಾಯಿತು.ಮಂಜುನಾಥನ ಈ ಲಕ್ಷದೀಪ ವೈಭವವನ್ನು ನೋಡಲು ನಾಡಿನಾದ್ಯಂತದಿಂದ ಲಕ್ಷ, ಲಕ್ಷ ಭಕ್ತರು ಆಗಮಿಸಿದ್ದರು.

ದೇಗುಲದ ಬಳಿ ಅಪಾರ ಜನಸ್ತೋಮ
ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ವೈಭವದಿಂದ ನಡೆಯಿತು. ಅಪಾರ ಜನಸ್ತೋಮ ದೇವರ ಕೃಪೆಗಾಗಿ ಬಂದಿದ್ದರು.

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಉಪಸ್ಥಿತಿ
ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು. ನಾಡಿನೆಲ್ಲೆಡೆಯಿಂದ ಬಂದ ಲಕ್ಷಾಂತರ ಮಂದಿ ಭಕ್ತಾದಿಗಳು ಉತ್ಸವವನ್ನು ವೀಕ್ಷಿಸಿ, ದೇವರ ದರ್ಶನ ಮಾಡಿ ಪುಣ್ಯಭಾಗಿಗಳಾದರು.

ಸಮವಸರಣ ಪೂಜೆ
ಭಾನುವಾರ ಮಹೋತ್ಸವ ಸಭಾ ಭವನದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಸಮಾಪನಗೊಂಡವು.

ಅಂತಿಮ ದಿನದ ವಿಧಿ ವಿಧಾನಗಳು
ಅಂತಿಮ ದಿನದಂದು ಚಂದ್ರನಾಥ ಸ್ವಾಮಿ ದೇಗುಲದಲ್ಲಿ ಅಷ್ಟವಿಧಾರ್ಚನೆ ಪೂಜೆ, ಸಂಗೀತ ಪೂಜೆ ಮೊದಲಾದ ಕಾರ್ಯಕ್ರಮಗಳು ನಡೆದವು.

ತೀರ್ಥಂಕರರಿಂದ ಧರ್ಮೋಪದೇಶ ಸಭೆ
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications