ಧರ್ಮಸ್ಥಳ ಸಾಮಾಜಿಕ ಜಾಲ ತಾಣಗಳ ಅನಾವರಣ
ಧರ್ಮಸ್ಥಳ, ನ.23: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪುಣ್ಯ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ವಿಶೇಷ ಪೂಜೆ ಪುನಸ್ಕಾರದ ಜತೆಗೆ ಸರ್ವಧರ್ಮ ಸಮ್ಮೇಳನ, ವಿಜ್ಞಾನ ಮತ್ತು ತಂತ್ರಜ್ಞಾನ ವಸ್ತು ಪ್ರದರ್ಶನ, ಲಕ್ಷದೀಪೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನವಾಗಿದೆ. ಸಾಹಿತ್ಯ ಸಮ್ಮೇಳನ ಹಾಗೂ ಸಾಮಾಜಿಕ ಜಾಲತಾಣಗಳ ಅಧಿಕೃತ ಲೋಕಾರ್ಪಣೆ ಕುರಿತ ವರದಿ ಇಲ್ಲಿದೆ...ಫೋಟೋ : ಶ್ರೇಯಸ್
ಶ್ರೀ ಕ್ಷೇತ್ರ ಧರ್ಮಸ್ಥಳದ ಅಧೀಕೃತ ಸಾಮಾಜಿಕ ಜಾಲತಾಣಗಳಿಗೆ ಐಟಿ ಬಿಟಿ ಸಚಿವ ಎಸ್ಆರ್ ಪಾಟೀಲ್ ಅವರು ಚಾಲನೆ ನೀಡಿದರು.ಎಸ್. ಆರ್. ಪಾಟೀಲ್ ಅವರು ಶ್ರೀ ಕ್ಷೇತ್ರದ ಫೇಸ್ಬುಕ್ ಪುಟ ಹಾಗೂ ಯೂಟ್ಯೂಬ್ ಪುಟವನ್ನು ಅನ್ನು ಮೌಸ್ ಒತ್ತುವ ಮೂಲಕ ಅಧೀಕೃತವಾಗಿ ಸಮರ್ಪಿಸಿದರು. ಇದರೊಂದಿಗೆ 51 ದೇಶಗಳ ಸುಮಾರು 1.91 ಲಕ್ಷ ಅನುಯಾಯಿಗಳು ನೇರವಾಗಿ ಸಂಪರ್ಕವನ್ನು ಇಟ್ಟುಕೊಳ್ಳಬಹುದಾಗಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಚಿವರಾದ ಅಭಯಚಂದ್ರ ಜೈನ್, ಹರ್ಷೇಂದ್ರ ಕುಮಾರ್, ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಡಾ. ಸಿ. ಸೋಮಶೇಖರ್, ಡಾ. ಪಿ. ಕೆ. ರಾಜಶೇಖರ್, ಡಾ. ಧರಣೀದೇವಿ ಮಾಲಗತ್ತಿ ವಿಶೇಷ ಉಪನ್ಯಾಸ ನೀಡಿದರು. [ದೀಪೋತ್ಸವ ಯಶಸ್ಸಿಗೆ ಕಾರಣರಾದ ಪೊಲೀಸರಿಗೆ ಸಲಾಂ]
ಧರ್ಮಸ್ಥಳದ ಸಾಹಿತ್ಯ ಸಮ್ಮೇಳನ: ಸಾಹಿತಿಗಳಾದವರು ಮಾನವೀಯತೆಯ ಪರವಾಗಿ ವಕಾಲತ್ತು ವಹಿಸಬೇಕು, ಸತ್ಯದ ಪರವಾಗಿ ಮಾತಾಡಬೇಕು. ಜಾತಿಯ, ಕುರ್ಚಿಯ ಪರವಾಗಿ ವಕಾಲತ್ತು ಮಾಡಬಾರದು ಎಂದು ಕರ್ನಾಟಕದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎಸ್.ಆರ್. ಪಾಟೀಲ್ ಅಭಿಪ್ರಾಯಪಟ್ಟರು.
ಶ್ರೀ ಕೇತ್ರ ಧರ್ಮಸ್ಥಳದಲ್ಲಿ ನಡೆದ 82ನೇ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬದುಕನ್ನು ಬಿಟ್ಟು ಸಾಹಿತ್ಯವಿಲ್ಲ. ಬದುಕಿನ ಎಲ್ಲಾ ಆಯಾಮಗಳನ್ನು ಹಿಡಿದಿಡುವವರು ಬರಹಗಾರರು ಮಾತ್ರ. ಸಾಹಿತ್ಯ ಸಮಾಜದ ಪ್ರತಿಬಿಂಬ. ಮನುಕುಲದ ಶ್ರೇಯಸ್ಸಿಗೆ, ಒಳಿತಿಗೆ ಸಾಹಿತ್ಯ ಶ್ರಮಿಸುತ್ತದೆ ಎಂದರು.

ದಾರಿ ತಪ್ಪಿ ಹೋದ ಸಾಹಿತ್ಯವನ್ನು ಸರಿದಾರಿಗೆ ತರುವ ಹಕ್ಕು ಮತ್ತು ಜವಾಬ್ದಾರಿ ಬರಹಗಾರರ ಮೇಲಿದೆ. ಸಮಾಜದಲ್ಲಿನ ಅನ್ಯಾಯಗಳನ್ನು ಹೊಡೆದೋಡಿಸುವ ಕಾರ್ಯದಲ್ಲಿ ಸಾಹಿತಿಗಳು ತೊಡಗಿಸಿಕೊಳ್ಳಬೇಕು. ಸಾಹಿತ್ಯ ಅನ್ಯಾಯದ ವಿರುದ್ಧ ಬಡಿದೇಳುವ ಧ್ವನಿಯಾಬೇಕು ಎಂದು ಕರೆ ನೀಡಿದರು. [[ಗ್ಯಾಲರಿ: ಧರ್ಮಸ್ಥಳದ ಲಕ್ಷದೀಪೋತ್ಸವ ಸಂಭ್ರಮ] ]
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಾಹಿತಿ ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿಯವರು, ಜಾತಿ ಪಂಗಡಗಳನ್ನು ಮೀರಿ ಸಾಹಿತಿಗಳು ಬೆಳೆಯಬೇಕು. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನವನ್ನು ಕೊಡಬೇಕಾದುದು ಮಾತ್ರ ಸರಕಾರದ ಕೆಲಸ, ಶಾಸ್ತ್ರೀಯ ಮಾನವನ್ನು ಕೊಡಬೇಕಾದವರು ಜನರು. ಸುಸಜ್ಜಿತ, ಸುಸಂಸ್ಕøತ, ಮಾದರಿ ಕನ್ನಡ ಶಾಲೆಗಳನ್ನು ಸರಕಾರ ಮತ್ತು ಸ್ಥಳೀಯರೂ ತೆರೆಯಬೇಕು ಎಂದು ಆಗ್ರಹಿಸಿದರು.
ಇತರ ಭಾಷೆಗಳ ಜ್ಞಾನ ನಮಗೆ ಅಗತ್ಯ. ವಿವಿಧ ಭಾಷೆಗಳನ್ನು ಕಲಿಯಬೇಕು, ಆದರೆ ಅಲ್ಲಿಯ ಜ್ಞಾನವನ್ನು ಕನ್ನಡ ಭಾಷೆಯಲ್ಲೇ ಇತರರಿಗೆ ತಿಳಿಸಿಕೊಡುವಂತಾಗಬೇಕು. ಕನ್ನಡದ ಮೂಲಕವೇ ಮಾತನಾಡಬೇಕು, ಅಭಿವ್ಯಕ್ತಿಸಬೇಕು. ಹೀಗೆ ಕನ್ನಡವನ್ನು ಬಳಸುವುದರ ಮೂಲಕವಷ್ಟೇ ಉಳಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸ್ವಾಗತಿಸಿ, ನಮ್ಮ ನಾಡಿನ ಎಲ್ಲಾ ಗ್ರಂಥ ಭಂಡಾರಗಳಲ್ಲೂ ಕೋಮು ಸೌಹಾರ್ದಕ್ಕೆ ಪೂರಕವಾದ ವೈವಿಧ್ಯದಿಂದ ಕೂಡಿದ ಧರ್ಮ, ನೀತಿ, ಆಚಾರ, ಶೀಲ, ಸದಾಚಾರಗಳಿಗೆ ಪೂರಕವಾದ ಸಾಹಿತ್ಯ ಗ್ರಂಥಗಳನ್ನು ಒದಗಿಸಿದರೆ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಲು ಸಾಧ್ಯ ಎಂದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications