ಧರ್ಮಸ್ಥಳದ ಸೌಜನ್ಯ ಬಗ್ಗೆ ಮಾತನಾಡಿದ್ದ ಯುಟ್ಯೂಬರ್ಗೆ ಜೀವ ಭಯ... Sowjanya Case
ಧರ್ಮಸ್ಥಳದ ಸೌಜನ್ಯ ರೇಪ್ & ಮರ್ಡರ್ ಕೇಸ್ ಕುರಿತು ಮತ್ತೆ ಕಿಚ್ಚು ಹೊತ್ತಿಕೊಂಡಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬಿರುಗಾಳಿಯೇ ಎದ್ದಿದ್ದು, ಸೌಜನ್ಯ ರೇಪ್ & ಮರ್ಡರ್ ಕೇಸ್ ಕುರಿತು ಮಾತನಾಡಿದ್ದ ಕನ್ನಡದ ಖ್ಯಾತ ಯುಟ್ಯೂಬರ್ಗೆ ಜೀವ ಭಯ ಕಾಡುತ್ತಿದೆ. ಈ ಬಗ್ಗೆ ಖುದ್ದು ಯುಟ್ಯೂಬರ್ ಗಂಭೀರ ಆರೋಪ ಮಾಡಿದ್ದು, ಕರ್ನಾಟಕದಲ್ಲಿ ಹೊಸ ತಲ್ಲಣ ಸೃಷ್ಟಿಯಾಗಿದೆ.
ಕರ್ನಾಟಕದಲ್ಲಿ ಲಕ್ಷಾಂತರ ಕೊಲೆ ಕೇಸ್ಗಳು ನಡೆದು ಹೋಗಿವೆ, ಆದರೆ ಸೌಜನ್ಯ ರೇಪ್ & ಮರ್ಡರ್ ಕೇಸ್ ಮಾತ್ರ ಇಡೀ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ಯಾಕಂದ್ರೆ ಇದೇ ಕೇಸ್ ಕುರಿತು ಜಾಗತಿಕ ಮಟ್ಟದಲ್ಲಿ ದೊಡ್ಡ ಚರ್ಚೆ ಶುರುವಾಗಿದೆ. ಇಂತಹ ಸಮಯದಲ್ಲೇ ಕನ್ನಡದ ಖ್ಯಾತ ಯುಟ್ಯೂಬರ್ ಈ ಬಗ್ಗೆ ವಿಡಿಯೋ ಒಂದನ್ನು ಮಾಡಿದ್ದರು. ಅಲ್ಲದೆ ಈ ವಿಚಾರದಲ್ಲಿ ದೊಡ್ಡ ದೊಡ್ಡವರ ವಿರುದ್ಧ ಆರೋಪ ಮಾಡಿದ್ದರು. ಹೀಗೆ, ದೊಡ್ಡವರ ಬಗ್ಗೆ ಆರೋಪ ಮಾಡಿದ ಬೆನ್ನಲ್ಲೇ ಜೀವ ಬೆದರಿಕೆ ಕರೆಗಳು ಬರುತ್ತಿವೆಯಂತೆ!

ಕನ್ನಡದ ಖ್ಯಾತ ಯುಟ್ಯೂಬರ್ಗೆ ಜೀವ ಭಯ
ಹೌದು, ಧರ್ಮಸ್ಥಳದ ಸೌಜನ್ಯ ರೇಪ್ & ಮರ್ಡರ್ ಕೇಸ್ ಕನ್ನಡ ನಾಡಿನಲ್ಲಿ ನಡೆದ ಅತ್ಯಂತ ದೊಡ್ಡ ದುರಂತಗಳ ಪೈಕಿ ಒಂದಾಗಿದೆ. ಹೀಗಿದ್ದಾಗ ಸೌಜನ್ಯ ರೇಪ್ & ಮರ್ಡರ್ ಕೇಸ್ ಬಗ್ಗೆ ದೊಡ್ಡ ದೊಡ್ಡ ಹೋರಾಟಗಳು ಕೂಡ ನಡೆದಿವೆ. ಇಂತಹ ಸಮಯದಲ್ಲೇ ದೊಡ್ಡ ದೊಡ್ಡ ವ್ಯಕ್ತಿಗಳ ಹೆಸರು ಇದರಲ್ಲಿ ತಳುಕು ಹಾಕಿಕೊಂಡ ಕಾರಣಕ್ಕೆ, ಸಮೀರ್ ಎಂಬ ಯುಟ್ಯೂಬರ್ ಈ ಬಗ್ಗೆ ತನಿಖಾ ವಿಡಿಯೋ ಒಂದನ್ನ ಅಪ್ಲೋಡ್ ಮಾಡಿದ್ದರು. ಆ ವಿಡಿಯೋ ವೈರಲ್ ಆದ ನಂತರ ಸಮೀರ್ ಮನೆ ವಿಳಾಸ & ಸಮೀರ್ ಮೊಬೈಲ್ ನಂಬರ್ ಕೂಡ ಲೀಕ್ ಆಗಿದೆಯಂತೆ. ಅಲ್ಲದೆ ಸಮೀರ್ಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೂಡ ಕೇಳಿ ಬಂದಿದೆ.
ಫೋನ್ ಕಾಲ್ ಮಾಡಿ ಬೆದರಿಕೆ...
ಈ ಬಗ್ಗೆ ವಿಡಿಯೋ ಮಾಡಿರುವ ಯುಟ್ಯೂಬರ್ ಸಮೀರ್, ನನಗೆ ಕರೆ ಮಾಡಿ ಬೆದರಿಕೆಯನ್ನ ಹಾಕಲಾಗುತ್ತಿದೆ. ಯಾವ ಕ್ಷಣದಲ್ಲಿ ನನಗೆ ಏನು ಬೇಕಾದರೂ ಆಗಬಹುದು ಎಂದು ಆತಂಕ ಹೊರ ಹಾಕಿದ್ದಾರೆ. ಇನ್ನು ಸಮೀರ್ಗೆ ಎದುರಾಗಿರುವ ಈ ಪರಿಸ್ಥಿತಿ & ಆತಂಕ ಕಂಡಿರುವ ಕನ್ನಡಿಗರು ಒಗ್ಗಟ್ಟಾಗಿದ್ದು, ಕರ್ನಾಟಕದ ಸಿದ್ದರಾಮಯ್ಯ ಸರ್ಕಾರ & ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರಿಗೆ ಸೂಕ್ತ ಭದ್ರತೆ ಒದಗಿಸಲು ಮನವಿ ಮಾಡುತ್ತಿದ್ದಾರೆ. ಹಾಗೇ ಈ ವಿಚಾರದಲ್ಲಿ ಏನಾದರೂ ಎಡವಟ್ಟು ನಡೆದರೆ ಪರಿಣಾಮ ನೆಟ್ಟಗೆ ಇರಲ್ಲ, ಅಂತಾ ಕೂಡ ಎಚ್ಚರಿಕೆ ಸಂದೇಶ ರವಾನೆ ಮಾಡುತ್ತಿದ್ದಾರೆ ಕನ್ನಡಿಗರು.
ಒಟ್ನಲ್ಲಿ ಇದೆಲ್ಲಾ ಏನೇ ಇರಲಿ, ಸರ್ಕಾರ ಯುಟ್ಯೂಬರ್ ಸಮೀರ್ಗೆ ಈ ವಿಚಾರದಲ್ಲಿ ಸೂಕ್ತ ಭದ್ರತೆ ನೀಡಬೇಕು. ಯುಟ್ಯೂಬರ್ ಸಮೀರ್ಗೆ ಧರ್ಮ ನಿಂದನೆ ಮಾಡುತ್ತಿರುವ ವ್ಯಕ್ತಿಗಳನ್ನು ಕೂಡ ಕೂಡಲೇ ಬಂಧಿಸಬೇಕು ಎಂದು ಆಗ್ರಹ ಮಾಡುತ್ತಿದ್ದಾರೆ. ಹೀಗಾಗಿ ಈ ವಿಚಾರ ಭಾರಿ ದೊಡ್ಡ ತಿರುವು ಪಡೆಯುವ ನಿರೀಕ್ಷೆ ಇದೆ. ಹಾಗೇ ಈ ವಿಚಾರದಲ್ಲಿ ಯುಟ್ಯೂಬ್ ಕಮ್ಯುನಿಟಿ ಕೂಡ ಒಗ್ಗಟ್ಟು ಪ್ರದರ್ಶನ ಮಾಡುತ್ತಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications