ನ್ಯಾಷನಲ್ ಜಿಯೋಗ್ರಾಫಿಕ್ ಚಾನೆಲ್ ನಲ್ಲಿ ಧರ್ಮಸ್ಥಳದ ಪಾಕಶಾಲೆ
ಬೆಳ್ತಂಗಡಿ, ಜೂ.23: ಧರ್ಮಸ್ಥಳದ ಶ್ರೀಮಂಜುನಾಥೇಶ್ವರ ದೇಗುಲದ 'ಅನ್ನಪೂರ್ಣ ಪಾಕ ಶಾಲೆ' ಭಾರತದ ಐದು ಅತಿ ದೊಡ್ಡ ಅಡುಗೆ ಮನೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಪಾಕಶಾಲೆಯ ಐತಿಹ್ಯ ವಿಶೇಷತೆಗಳ ಕುರಿತು ನ್ಯಾಷನಲ್ ಜಿಯೋಗ್ರಫಿ ಚಾನೆಲ್ನಲ್ಲಿ ಕಾರ್ಯಕ್ರಮ ಪ್ರಸಾರವಾಗಲಿದೆ.
ನ್ಯಾಷನಲ್ ಜಿಯೋಗ್ರಫಿ ವಾಹಿನಿಯಲ್ಲಿ ಈಗಾಗಲೇ 'ಇಂಡಿಯಾಸ್ ಮೆಗಾ ಕಿಚನ್'' ಎಂಬ ಕಾರ್ಯಕ್ರಮ ನಡೆಯುತ್ತಿದೆ. ಸಾವಿರಾರು ಜನರ ಹಸಿವನ್ನು ನೀಗಿಸುವ ಪಾಕ ಶಾಲೆಗಳ ಚಿತ್ರಣವನ್ನು ಜನತೆಯ ಮುಂದಿಡುವುದು ಈ ಕಾರ್ಯಕ್ರಮದ ಉದ್ದೇಶ. ಅಂತೆಯೇ ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಅನ್ನಪೂರ್ಣ ಪಾಕಶಾಲೆಯ ಪರಿಚಯ ಮಾಡಿಸಲಾಗುತ್ತಿದೆ.

ಈ ಕಾರ್ಯಕ್ರಮದ ಮೂಲಕ ಈ ಮೆಗಾ ಕಿಚನ್ಗಳನ್ನು ಯಾವ ರೀತಿ ನಿರ್ವಹಣೆ ಮಾಡಲಾಗುತ್ತದೆ ಹಾಗೂ ಅಲ್ಲಿ ಯಾವ ರೀತಿ ಕೆಲಸಗಳು ಜರುಗುತ್ತವೆ ಎಂಬುದನ್ನು ತೋರಿಸಲಾಗುತ್ತದೆ. ಈ ಕಾರ್ಯಕ್ರಮ ಪ್ರತಿ ಸೋಮವಾರದಿಂದ ಗುರುವಾರ ರಾತ್ರಿ 10 ಗಂಟೆಗೆ ಚೆಫ್ ವಿಕಾಸ್ ಖನ್ನಾ ನೇತೃತ್ವದಲ್ಲಿ ಪ್ರಸಾರವಾಗುತ್ತದೆ. [ಧರ್ಮಸ್ಥಳ ಸಾಮಾಜಿಕ ಜಾಲ ತಾಣಗಳ ಅನಾವರಣ]
ಭಾರತದ ಐದು ಮೆಗಾ ಅಡುಗೆ ಶಾಲೆಗಳಾದ ಶಿರಡಿ, ಚೆನ್ನೈ ತಾಜ್ ಕಿಚನ್, ಧರ್ಮಸ್ಥಳ, ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೋರೇಶನ್, ನೋಯ್ಡಾ ಮತ್ತು ಅಕ್ಷಯ ಪಾತ್ರ ಫೌಂಡೇಶನ್ ಕಿಚನ್ ಹುಬ್ಬಳ್ಳಿ ಈ ಕುರಿತಾದ ವಿಡಿಯೋ ಸದ್ಯದಲ್ಲೇ ಪ್ರಸಾರವಾಗಲಿದೆ.
ಧರ್ಮಸ್ಥಳದ ಅನ್ನಪೂರ್ಣ ಪಾಕಶಾಲೆಯ ಕಾರ್ಯಕ್ರಮ ಜೂ.23ರಂದು ರಾತ್ರಿ 10 ಗಂಟೆಗೆ ನ್ಯಾಷನಲ್ ಜಿಯೋಗ್ರಫಿ ಚಾನೆಲ್ನಲ್ಲಿ ಪ್ರಸಾರವಾಗಲಿದೆ. ಸರಿ ಸುಮಾರು ಪ್ರತಿ ದಿನ 50,000 ಜನರಿಗೆ ಪ್ರಸಾದ ರೂಪದಲ್ಲಿ ಊಟ ಬಡಿಸಲಾಗುತ್ತದೆ.
ಹಬ್ಬ ವಿಶೇಷ ದಿನಗಳಲ್ಲಿ ಈ ಸಂಖ್ಯೆ 1 ಲಕ್ಷ ಮೀರುತ್ತದೆ. ಈ ಪಾಕಶಾಲೆ ಸಂಪೂರ್ಣ ಪರಿಸರ ಸ್ನೇಹಿ, ಇಂಧನಸ್ನೇಹಿಯಾಗಿದೆ. ದೇಗುಲದ ಗೋಶಾಲೆಯಲ್ಲಿ ಸಿಗುವ ಸಗಣಿಯನ್ನು ಬಳಸಿ ಬಯೋಗ್ಯಾಸ್ ಉತ್ಪಾದನೆ ಮಾಡಲಾಗುತ್ತದೆ.ಎರೆಹುಳು ಗೊಬ್ಬರ ಬಳಸಿ ದಿನನಿತ್ಯದ ಅಡುಗೆಗೆ ಬೇಕಾದ ತರಕಾರಿ ಬೆಳೆಯಲಾಗುತ್ತದೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications