Dharwad CBT: ನಗರ ಬಸ್ನಿಲ್ದಾಣಕ್ಕೆ ಮರುಜೀವ, ನವೀಕರಣಕ್ಕೆ ಶಂಕುಸ್ಥಾಪನೆ, ಅಂದಾಜು ವೆಚ್ಚ, ಗಡುವು, ಮಾಹಿತಿ
ಹುಬ್ಬಳ್ಳಿ, ಜನವರಿ 08: ಕರ್ನಾಟಕದ ವಿದ್ಯಾಕಾಶಿ ಧಾರವಾಡವು ಬೆಳೆಯುತ್ತಿರುವ ನಗರ-ಜಿಲ್ಲೆಗಳಲ್ಲಿ ಒಂದಾಗಿದೆ. ಇಲ್ಲಿ ಸಹ ಜನದಟ್ಟಣೆ ಹೆಚ್ಚಾಗಿದ್ದು, ಅಸ್ತಿತ್ವದಲ್ಲಿದ್ದ ನಗರ ಬಸ್ ನಿಲ್ದಾಣ (CBT) ವ್ಯಾಪ್ತಿಯಲ್ಲಿ ಚಿಕ್ಕದಿರುವ ನಿಲ್ದಾಣವನ್ನು ನವೀಕರಣ ಕಾರ್ಯ ಇಂದು ಸೋಮವಾರದಿಂದ ಆರಂಭವಾಗಿದೆ.
ಧಾರವಾಡದ ನಗರ ಸಾರಿಗೆ ಬಸ್ ನಿಲ್ದಾಣವು ನೂತನ ಸಾರಿಗೆ ಬಸ್ ನಿಲ್ದಾಣವಾಗಿ ಕಂಗೊಳಿಸಲಿದೆ. ಈ ಸಂಬಂಧ ಯೋಜನೆ ಆರಂಭಕ್ಕೆ ಇಂದು ಸೋಮವಾರ ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಹ ಸಾಥ್ ನೀಡಿದರು.

ಧಾರವಾಡ ಸಿಬಿಟಿ ಬಸ್ ನಿಲ್ದಾಣವು ಒಟ್ಟು 13 ಕೋಟಿ ರೂಪಾಯಿ ವೆಚ್ಚದಲ್ಲಿ ಧಾರವಾಡದ ಸಿಬಿಟಿ ನವೀಕರಣಗೊಳ್ಳಲಿದ್ದು, ಭೂಮಿಪೂಜೆ ನೆರವೇರಿಸಲಾಗಿದೆ. ಸಿವಿಲ್ ಕಾಮಗಾರಿಗಳು ತ್ವರಿತಗತಿಯಲ್ಲಿ ಸಾಗುವ ನಿರೀಕ್ಷೆ ಇದೆ.
ಬಸ್ ನಿಲ್ದಾಣ ಮೇಲ್ದರ್ಜೆಗೆ ವರ್ಷದ ಗುಡುವು
ಭೂಮಿಪೂಜೆ ನೆರವೇರಿಸಿ ಮಾತನಾಡಿ ಸಚಿವ ರಾಮಲಿಂಗಾರೆಡ್ಡಿ ಅವರು, ಧಾರವಾಡ ಸಿಬಿಟಿ ಬಹಳ ಹಳೆಯದಾದ ಕಟ್ಟಡಗಳನ್ನು ಹೊಂದಿದೆ. ಈಗ ಈ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಒಂದು ವರ್ಷದ ಅವಧಿಯಲ್ಲಿ ನಿಲ್ದಾಣದ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ಕೊಟ್ಟಿದ್ದೇನೆ ಎಂದು ನಿರ್ಮಾಣ, ಗುಡವಿನ ಮಾಹಿತಿ ನೀಡಿದರು.

ನಗರ ಸಾರಿಗೆ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಹೆಚ್ಚುವರಿ ಬಸ್ಗಳ ಖರೀದಿ ಮಾಡಲಾಗುತ್ತಿದೆ. ಇದರಿಂದ ಬಸ್ಗಳ ಕೊರತೆ ನೀಗಲಿದೆ. ಅಂದಾಜು 50 ವರ್ಷಗಳ ಹಳೆಯದಾದ ಧಾರವಾಡದ ಸಿಬಿಟಿಯನ್ನು ಇದೀಗ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಒಂದು ವರ್ಷದಲ್ಲಿ ಸಾರ್ವಜನಿಕರಿಗೆ ಇದರ ಪ್ರಯೋಜನೆ ಸಿಗಲಿದೆ ಎಂದು ಹೇಳಿದರು.
4 ಪಲ್ಲಕ್ಕಿ ಬಸ್ಗಳಿಗೆ ಸಚಿವರ ಚಾಲನೆ
ಇದೇ ವೇಳೆ ಧಾರವಾಡ ಮಾತ್ರವಲ್ಲದೇ ಜಿಲ್ಲೆ ವ್ಯಾಪ್ತಿಯ ಹುಬ್ಬಳ್ಳಿಯಲ್ಲಿ ಸಾರಿಗೆ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಿದರು.
ಸೋಮವರ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಎರಡು ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಯ ಶಂಕುಸ್ಥಾಪನೆ ನಡೆಯಿತು. ಹಾಗೂ ನಾಲ್ಕು ನೂತನ ಪಲ್ಲಕ್ಕಿ ಬಸ್ಗಳಿಗೆ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ, ಸಾರಿಗೆ ಇಲಾಖೆ ಎಂಡಿ ಭರತ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸಿಬಿಟಿ ಬಸ್ ನಿಲ್ದಾಣವು 13 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಸಿವಿಲ್ ಕಾಮಗಾರಿಗಳು ತ್ವರಿಗತಿಯಲ್ಲಿ ಆರಂಭಗೊಳ್ಳಲಿದ್ದು, ನಿಗದಿತ ಸಮಯದಲ್ಲಿಯೇ ಕೆಲಸ ಪೂರ್ಣಗೊಳ್ಳಲಿದೆ ಎಂದು ಸಾರಿಗೆ ಮೂಲಗಳು ಮಾಹಿತಿ ನೀಡಿವೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications