ಸೈಬರ್ ಕ್ರೈಮ್ಗಳ ಬಗ್ಗೆ ಸರಕಾರಿ ನೌಕರರಿಗೆ ಜಿಲ್ಲಾಧಿಕಾರಿ ಮಹತ್ವದ ಎಚ್ಚರಿಕೆ!
ಇತ್ತಿಚೆಗೆ ಆನ್ಲೈನ್ ವಂಚನೆ ಮಾಡುವ, ಆರ್ಥಿಕ ವಂಚನೆ ಮಾಡುವ ಅಪರಾಧಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ವಿಶೇಷವಾಗಿ ಸರಕಾರಿ ನೌಕರರು, ಅವರ ಕುಟುಂದವರು ಮತ್ತು ಪಿಂಚಣಿದಾರರು ಜಾಗೃತರಾಗಬೇಕೆಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದ್ದಾರೆ. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬಾಂಬೆ ಸೆಬಿ (SEBI)ಯಿಂದ ಆಯೋಜಿಸಿದ್ದ ಪ್ರಾದೇಶಿಕ ಹೂಡಿಕೆದಾರರ ಜಾಗೃತಿ ಮತ್ತು ಆನ್ಲೈನ್ ಆರ್ಥಿಕ ವಂಚನೆ, ಸೈಬರ್ ಕ್ರೈಮಗಳ ಬಗ್ಗೆ ಸರಕಾರಿ ನೌಕರರಿಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ್ದಾರೆ.
ನಿವೃತ್ತಿ ನಂತರ ಆರ್ಥಿಕ ಅನುಕೂಲತೆಗಳ ಇರಬೇಕು. ನೌಕರರು ಸೇವೆಯಲ್ಲಿದ್ದಾಗ ನಿಯಮಿತವಾಗಿ ಮತ್ತು ಸುರಕ್ಷಿತ ಕ್ಷೇತ್ರಗಳಲ್ಲಿ ಉಳಿತಾಯ ಮಾಡಬೇಕು. ಒಬ್ಬ ಹೂಡಿಕೆದಾರನಾಗಿ ಎನು ಮಾಡಬೇಕು ಮತ್ತು ಎನು ಮಾಡಬಾರದು ಎಂಬುದನ್ನು ತಿಳಿದಿರಬೇಕು. ಲಾಭದ ಆಸೆಯ ಮಾತುಗಳಿಗೆ ಮರುಳಾಗಬಾರದು. ಪ್ರತಿ ಸಂದರ್ಭದಲ್ಲಿಯೂ ಪರಿಶೀಲಿಸಿ, ಹೂಡಿಕೆಗೆ ಮುಂದುವರಿಯಬೇಕು ಎಂದು ಅವರು ಎಚ್ಚರಿಸಿದರು.

ಹೂಡಿಕೆದಾರರಿಗೆ ಸುರಕ್ಷಿತ ಹೂಡಿಕೆ ಕ್ರಮಗಳು, ಹೂಡಿಕೆ ಮಾಡುವಾಗ ಪಾಲಿಸಬೇಕಾದ ನಿಯಮಗಳು ಮತ್ತು ವಂಚನೆಗಳಿಂದ ದೂರವಿರುವ ವಿಧಾನಗಳ ಬಗ್ಗೆ ಸರಕಾರಿ ನೌಕರರಿಗೆ ಮತ್ತು ವಿವಿಧ ಇಲಾಖೆಗಳ ಯೋಜನಾ ಫಲಾನುಭವಿಗಳಿಗೆ ತಿಳುವಳಿಕೆ ನೀಡುವುದು ಅಗತ್ಯವಿದೆ. ಯಾವುದೇ ರೀತಿಯಲ್ಲಿ ಹಣಕಾಸು ಹೂಡಿಕೆ ಮಾಡುವ ಮೊದಲು ಸರಿಯಾದ ಮಾಹಿತಿ ಸಂಗ್ರಹಿಸಿ, ಪರಿಶೀಲಿತ ಮೂಲಗಳಲ್ಲಿ ಮಾತ್ರ ಹೂಡಿಕೆ ಮಾಡಬೇಕು. ಮತ್ತು ಸಂಶಯಾಸ್ಪದ ಯೋಜನೆಗಳಿಂದ ದೂರವಿರುವುದು ಅವಶ್ಯಕ ಎಂದು ಹೇಳಿದರು.
ಸೆಬಿ, ಸ್ಟಾಕ್ ಎಕ್ಸಚೈಂಜ್, ಶೇರ್, ಡಿಬೆಂಚರ್ಗಳ ಬಗ್ಗೆ ಹೂಡಿಕೆ ಪೂರ್ವದಲ್ಲಿ ಮಾಹಿತಿ ಪಡೆಯಬೇಕು. ಅಂದಾಗ ವಂಚನೆಗಳಿಂದ ದೂರವಿರಬಹುದು. ತೆರಿಗೆ ಉಳಿತಾಯ, ತೆರಿಗೆ ವಿಧಿಸುವ ಹೊಸ ನಿಯಮಗಳ ಬಗ್ಗೆ ತಿಳಿದಿರಬೇಕು. ಮೊಬೈಲ್ಗಳಿಗೆ ಅನೇಕ ತರನಾದ ಆ್ಯಪ್ಗಳು, ಪೈಲ್ಸ್ ಬರುತ್ತವೆ. ಅನಗತ್ಯವಾಗಿ ಅವುಗಳನ್ನು ಡೌನ್ಲೋಡ್ ಮಾಡಬಾರದು. ಇದರಿಂದ ನಿಮ್ಮ ಬ್ಯಾಂಕ್ ವಿವರ ಸೇರಿದಂತೆ ವೈಯಕ್ತಿಕ ಮಾಹಿತಿ ಸೋರಿಕೆ, ಕಳುವಾಗುವ ಸಾಧ್ಯತೆ ಇರುತ್ತದೆ. ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಸೆಬಿ ಹಿರಿಯ ಅಧಿಕಾರಿಗಳಾದ ಎಂ.ಆರ್.ವೆಂಕಟೇಶ ಬಾಬು ಅವರು ವರ್ಚುವಲ್ ಮೂಲಕ ಸೈಬರ್ ಅರಾಧಗಳು ಮತ್ತು ಸುರಕ್ಷಿತ ಹೂಡಿಕೆಗಳ ಬಗ್ಗೆ ಉಪನ್ಯಾಸ ನೀಡಿದರು. ಹಿರಿಯ ಅಧಿಕಾರಿ ಬದರಿ ನಾರಾಯಣ ಅವರು ಆನ್ ಲೈನ್ ವಂಚನೆಗಳು ಮತ್ತು ಆರ್ಥಿಕ ವಂಚನೆಗಳಿಂದ ಸುರಕ್ಷಿತವಾಗಿರುವ ಕ್ರಮಗಳ ಕುರಿತು ಮಾತನಾಡಿ, ಹೂಡಿಕೆದಾರರು ಮಾರುಕಟ್ಟೆಯಲ್ಲಿ ಉಂಟಾಗುವ ಅಪಾಯಗಳನ್ನು ತಿಳಿದುಕೊಂಡು ಜಾಣ್ಮೆಯಿಂದ ಹೂಡಿಕೆ ಮಾಡಬೇಕು. ಜೊತೆಗೆ ಕೆವೈಸಿ (KYC), ಪಾನ್ (PAN), ಡಿಮ್ಯಾಟ್ ಅಕೌಂಟ್ (Demat Account) ಮುಂತಾದ ಮೂಲಭೂತ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಸಲಹೆ ನೀಡಿದರು.
-
Gold Price: ಚಿನ್ನದ ಬೆಲೆ 1,50,000 ರೂಪಾಯಿಗೆ ಕುಸಿದು ಬೀಳುವ ಸಾಧ್ಯತೆ, ಕಾರಣ ಇಲ್ಲಿದೆ... -
Ramcharan Upasana: ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟ ರಾಮ್ ಚರಣ್ ಪತ್ನಿ ಉಪಾಸನಾ ಕಾಮಿನೇನಿ -
ಎಲ್ಪಿಜಿ, ಫಾಸ್ಟ್ಟ್ಯಾಗ್ ಸೇರಿದಂತೆ ಫೆಬ್ರವರಿ 1 ಭಾನುವಾರದಿಂದ ಹಲವು ಬದಲಾವಣೆ ಜಾರಿ... Regulatory Updates -
ಕೇಂದ್ರ ಬಜೆಟ್: ಮದ್ಯಪ್ರಿಯರಿಗೆ ಶಾಕ್, ಮದ್ಯ ದುಬಾರಿ, ಈ ವಸ್ತುಗಳ ದರ ಇಳಿಕೆ - ಏರಿಕೆ, ಪಟ್ಟಿ ಇಲ್ಲಿದೆ -
ಕೇಂದ್ರ ಬಜೆಟ್ 2026ರಲ್ಲಿ ಹೊಸದೇನಿದೆ, ಯಾರಿಗೆಲ್ಲ ಲಾಭ: ಇಲ್ಲಿದೆ ಸಂಪೂರ್ಣ ಮಾಹಿತಿ -
ಕನ್ನಡಿಗರ ರಾಜಧಾನಿ ಬೆಂಗಳೂರಿಗೆ ಬಂಪರ್, ಹೈಸ್ಪೀಡ್ ರೈಲ್ವೆ ಕಾರಿಡಾರ್ಗೆ ಅಸ್ತು... High Speed Rail Corridor -
Railway Budget 2026: 'ಕೇಂದ್ರವು ಬೆಂಗಳೂರು- ಪುಣೆ ಹೈಸ್ಟೀಡ್ ರೈಲು ಕಾರಿಡಾರ್ ಕೈ ಬಿಟ್ಟಿದೆ' -
Union Budget 2026: 'ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಎನ್ಡಿಎ ಸರ್ಕಾರದ ಭರ್ಜರಿ ಕೊಡುಗೆ' -
New Income Tax Regime 2026: ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ, ಇಲ್ಲಿದೆ ಸ್ಲ್ಯಾಬ್ಗಳ ವಿವರ -
Gold-Silver Price: ಬಜೆಟ್ನಲ್ಲಿ ಚಿನ್ನ-ಬೆಳ್ಳಿ ಬಗ್ಗೆ ಪ್ರಸ್ತಾಪವೇ ಇಲ್ಲ! ದಾಖಲೆ ಮಟ್ಟದಲ್ಲಿ ದರ ಕುಸಿತ -
Union Budget 2026: ಬೆಂಗಳೂರಿನಿಂದ ಹೈದರಾಬಾದ್, ಚೆನ್ನೈಗೆ ಹೈಸ್ಪೀಡ್ ರೈಲು ಕಾರಿಡಾರ್: ದೆಹಲಿ, ವಾರಣಾಸಿಗೂ ಬಂಪರ್ -
ಕೇಂದ್ರ ಬಜೆಟ್ 2026 PDF: ಬಜೆಟ್ನ ಪೂರ್ಣ ದಾಖಲೆ ಎಲ್ಲಿ ಸಿಗುತ್ತೆ? ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ವಿವರ












Click it and Unblock the Notifications